01 April 2018

*ಉಕ್ಕಿನ ಮನುಷ್ಯ* (ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)

*ಉಕ್ಕಿನ ಮನುಷ್ಯ*
(ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)

ಇವರೇ ನಮ್ಮ ಉಕ್ಕಿನ ಮನುಷ್ಯ
ಬರೆದರು  ನವಭಾರತದ ಭವಿಷ್ಯ
ಸಾರಿದರು ಏಕತೆಯ ಮಂತ್ರ
ಪಾಲಿಸಿದರು ರಾಷ್ಟ್ರೀಯತೆ ತಂತ್ರ

ದೇಶದ ಮೊದಲ ಉಪಪ್ರಧಾನಿ
ಆಡಳಿತದಲ್ಲಿ ದೊಡ್ದ ದಣಿ
ಮಾಡಿದರು ದೇಶದ ಏಕೀಕರಣ
ಮಾಡಲಿಲ್ಲ ಕೀಳು ರಾಜಕಾರಣ

ಬಾರ್ಡೋಲಿ ಸತ್ಯಾಗ್ರಹ ರೂವಾರಿ
ಸ್ವಾತಂತ್ರ್ಯ ಕ್ಕೆ ಬಾರಸಿದರು ರಣಭೇರಿ
ಸರಳ ಸಜ್ಜನ ಶಿಸ್ತಿನ ಸಿಪಾಯಿ  ನೀವು
ನಿಮ್ಮ ಆದರ್ಶ ಪಾಲಿಸುವೆವು ನಾವು

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

No comments: