27 October 2018

ಬೆಳಕಿನೆಡೆಗೆ ಸಾಗೋಣ (ಕವನ)

                       ಬೆಳಕಿನೆಡೆಗೆ ಸಾಗೋಣ

ಬುದ್ದ ಬಸವಾದಿ ಮಹಾಪುರಷರು
ಕಾಲ ಕಾಲಕ್ಕೆ ಪಂಜನಿಡಿದು
ಬೆಳಕ ನೀಡಲು ಧರೆಯಲಿ
ಅವತರಿಸುತ್ತಲೇ ಇದ್ದಾರೆ
ಆದರೂ ಕತ್ತಲಲಿರುವವರು
ಹೆಚ್ಚಾಗುತ್ತಲೇ ಇದ್ದಾರೆ .

ಕಾರಣ ಹುಡಕಹೊರಟರೆ
ಅವರಿಡಿದಿರುವ ಪಂಜುಗಳಿಂದ
ನಾವು  ಬೆಳಗಿಸಿಕೊಳ್ಳದಿರುವುದು
ನಮ್ಮ ಅಲ್ಪ ಬೆಳಕಿನ ಪಂಜಿಗೆ
ಉತ್ತಮ ತೈಲ‌ಹಾಕದಿರುವುದು
ಅಲ್ಪ ಸ್ವಲ್ಪ ಉರಿವ ಪಂಜುಗಳ
ಆರಿಸಲು ಯತ್ನಮಾಡುತಿರುವುದು
ಇನ್ನೆಲ್ಲಿಯ ಬೆಳಕು ಬರೀ‌ಕೊಳಕು

ಕತ್ತಲಲಿದ್ದುದು ಸಾಕು ಬನ್ನಿ
ಬರಲಿರುವ ಬುದ್ದ ಬಸವರ
ಕಾಯುವುದು ಬೇಡ
ಪಂಜಿನಿಂದ ಪಂಜುಗಳ
ಪ್ರಜ್ವಲಿಸೋಣ ಜಗವನೆಲ್ಲ
ಜಗಮಗಿಸೋಣ
ತಮವ ಹೊಡೆದೋಡಿಸೋಣ
ಎಲ್ಲರೂ ಬುದ್ದ ಬಸವರಾಗೋಣ
ಕತ್ತಲಿನಿಂದ ಬೆಳಕಿನೆಡೆಗೆ  ಸಾಗೋಣ

*ಸಿ.ಜಿ ವೆಂಕಟೇಶ್ವರ*
*ಗೌರಿಬಿದನೂರು*

No comments: