31 October 2018

ಪರಿಹಾರ (ನ್ಯಾನೋ ಕಥೆ)

             
*ನ್ಯಾನೋ ಕಥೆ*
*ಪರಿಹಾರ*
"ನಾನು ಆ ಬೀದಿಯಲಿ ಹುಡುಕಿದೆ ಸಿಗಲಿಲ್ಲ ನಿನಗೇನಾದರೂ ಸಿಕ್ಕನೆ? " ಗಂಡ ಕೇಳಿದಾಗ  ಹೆಂಡತಿಯ  ದುಃಖದ ಕಟ್ಟೆಯೊಡೆದು ಅಳಲು ಆರಂಬಿಸಿದಳು .
ನಾನು ಶಾಲೆಗೆ ಹೋಗುವುದಿಲ್ಲ ಎಂದು ವಾರದಿಂದ ಹಠ ಹಿಡಿದ ಎರಡನೇ ತರಗತಿ ಓದುವ ವಿವೇಕ್  ಬಲವಂತಕ್ಕೆ ಶಾಲೆಗೆ ಹೋದವನು ಮನೆಗೆ ಬಂದಿರಲಿಲ್ಲ .ಬೈಕ್ನಲ್ಲಿ  ಬಂದ ಪಕ್ಕದ ಮನೆಯ ರಮೇಶ್  ನಿಮ್ಮ ಮಗ ಬಸ್ ಸ್ಟಾಂಡ್ನಲ್ಲಿ ನಿಂತಿದ್ದ ಎಂದು ಕರೆದುಕೊಂಡು ಬಂದಾಗ ದಂಪತಿಗಳಿಬ್ಬರು ಮಗನನ್ನು ತಬ್ಬಿ ಗದ್ಗದಿತರಾದರು .ಜೋಯಿಸರ ಸಲಹೆಯ ಮೇರೆಗೆ ತಾಯಿ ಏನೋ ಶಾಂತಿ ಮಾಡಿದರು. ತಂದೆ ಹಿರಿಯರ ಕರೆಸಿ ಮಗನಿಗೆ ಆಪ್ತಸಮಾಲೋಚನೆ ಮಾಡಿಸಿದರು .ಮೂರು ದಿನದ ನಂತರ ಮಗ "ಅಮ್ಮ ಬೇಗ ರೆಡಿ ಮಾಡು ನಾನು ಶಾಲೆಗೆ ಹೋಗಬೇಕು" ಅಂದ .!
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

No comments: