25 March 2019

*ಗಜಲ್೫೫(ಬಾ ಮಳೆಯೇ ಬಾ)

         *ಗಜಲ್*

ಧರೆಯತ್ತಿ ಉರಿಯುತಿದೆ ವರ್ಷವೆ ಬಾ
ತಿರೆಯ ಜೀವಿಗಳು ತತ್ತರಿಸಿವೆ ಪರ್ಜನ್ಯವೆ ಬಾ .

ಉತ್ತರೀಯ ನೆನೆಸಲೂ ಜಲವಿಲ್ಲ ಇಲ್ಲಿ
ಬಾಯಾರಿಕೆಗೆ ಉತ್ತರಿಸುವ ಉತ್ತರವೆ ಬಾ.

ನೊಗವ ಹೂಡಿಲ್ಲ ರೈತರು ನೀ ಬರದೆ
ಮೊಗೆದರೂ ಮುಗಿಯದ ಮಘವೆ ಬಾ .

ಹರಿಣಗಳಾದಿಯಾಗಿ ಮೃಗಗಳಿಗೆ ಜಲವಿಲ್ಲ
ಜೀವರಾಶಿಗಳ ರಕ್ಷಕ ಮೃಗಶಿರವೆ ಬಾ .

ಹಸ್ತತೊಳೆಯಲು ನೀರಿಲ್ಲ ಎಲ್ಲೆಡೆಯೂ
ಸೀಹಿಜೀವಿಗಳ ಜೀವನಾಡಿ ಹಸ್ತಚಿತ್ತವೆ ಬಾ.

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*





No comments: