19 May 2021

ಧೈರ್ಯವಂತರಾಗೋಣ .ಲೇಖನ


 

ಮಾನವರಾಗೋಣ ೩

*ಧೈರ್ಯವಂತರಾಗೋಣ*

ನಮ್ಮಲ್ಲಿ ಬಹಳ ಜನರು ಸಣ್ಣ ವಿಷಯಗಳಿಗೂ ಭಯ ಬಿದ್ದು ಮುಂಬರುವ ಅಪಾಯಗಳ ನೆನದು ಮತ್ತೂ ಭಯಗೊಳ್ಳುತ್ತಾರೆ.ಆದರೆ ಈ ಘಟನೆ ನೋಡೋಣ,
ಅಟ್ಲಾಂಟಿಕ್ ಮಹಾಸಾಗರದಲ್ಲಿ ಸುಮಾರು ವರ್ಷಗಳ ಹಿಂದೆ ಒಂದು ವಿಮಾನ ಪತನ ಆಯಿತು...
ವಿಮಾನ ನಾಪತ್ತೆ ಆದ ಸುದ್ದಿ ತಿಳಿದರು ಅದು ಎಲ್ಲಿ ಪತನ ಆಯಿತು ಎಂದು ತಿಳಿಯದೇ ಹುಡುಕಾಟ ನಡೆಸಿದರು ನಾಲ್ಕು ಐದು ದಿನಗಳ ನಂತರ
ವಿಮಾನ ಅಟ್ಲಾಂಟಿಕ್ ಮಹಾಸಾಗರದಲ್ಲಿ ಪತನ ಆಗಿದೆ ಎಂದು ತಿಳಿದುಬಂತು..
ಅದರಲ್ಲಿ ಯಾರಾದರೂ ಬದುಕಿ ಉಳಿಯುವ ಸಾಧ್ಯತೆ ಎಲ್ಲರೂ ಕೈ ಬಿಟ್ಟಿದ್ದರು
ಸೈನಿಕರ ಸರ್ಚ್ ಟೀಂ ಸಾಗರದಲ್ಲಿ ಹುಡುಕಾಟ ಶುರು ಮಾಡಿದರು
ಕೊನೆಗೂ ಸರ್ಚ್ ಟೀಂ ವಿಮಾನದ ಅವಶೇಷ ಪತ್ತೆ ಹಚ್ಚಿದರು
ಎಲ್ಲಿ ನೋಡಿದರೂ ಹೆಣಗಳು ಕಾಣುತ್ತಿದ್ದವು
ಅನತಿ ದೂರದಲ್ಲಿ ಅವರಿಗೆ ಕಂಡು ಬಂದ ದೃಶ್ಯ ನೋಡಿ ಸೈನಿಕರಿಗೆ ತಮ್ಮ ಕಣ್ಣುಗಳನ್ನೇ ನಂಬಲು ಆಗಲಿಲ್ಲ
ತೇಲುತ್ತಿರುವ ವಿಮಾನದ ಒಂದು ತುಂಡು ಮೇಲೆ ಒಬ್ಬಳು ಮಹಿಳೆ ಒಂದು ಸಣ್ಣ ಮಗುವನ್ನು ಎದೆಗೆ ಅಪ್ಪಿಕೊಂಡು ಮಲಗಿರುವ ದೃಶ್ಯ ಕೂಡಲೇ ಅಲ್ಲಿಗೆ ಹೋಗಿ ಅವರನ್ನು ಪರೀಕ್ಷೆ ಮಾಡಿ ನೋಡಿದರು ತಾಯಿ ಮಗು ಇನ್ನೂ ಉಸಿರಾಡುತ್ತಿದ್ದರು..
ಅವರು ಜೀವಂತ ಇರುವುದು ಖಾತ್ರಿ ಮಾಡಿಕೊಂಡು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಿಸಿದರು..
ಇಡೀ ಜಗತ್ತಿಗೆ ಇದೊಂದು ಪವಾಡ ಎಂದು ಅನಿಸಿತು..
ಮೈ ಹೆಪ್ಪುಗಟ್ಟಿಸುವ ಚಳಿ ಸುತ್ತಲೂ ನೀರು ತೇಲುತ್ತಿರುವ ಹೆಣಗಳು ಆಹಾರ ಇಲ್ಲ ನೀರು ಇಲ್ಲ ಎಂತಹ ಗಟ್ಟಿ ಗುಂಡಿಗೆ ಇದ್ದರೂ ಅಂತಹ ಸನ್ನಿವೇಶದಲ್ಲಿ ಬದುಕಿ ಉಳಿಯುವುದು ನಿಜಕ್ಕೂ ಒಂದು ಪವಾಡ..
ಆಕೆ ಚೇತರಿಸಿಕೊಂಡ ಬಳಿಕ ಅವಳನ್ನು ಸಂದರ್ಶನ ಮಾಡಿದಾಗ ಆಕೆ ಹೇಳಿದ ಮಾತು
ಆಕಾಶದಲ್ಲಿ ವಿಮಾನ ಸ್ಪೋಟ ಆಯಿತು ಏನಾಯಿತು ಎಂದು ಅರಿವು ಆಗುವಷ್ಟರಲ್ಲಿ ನಾವು ವಿಮಾನದಿಂದ ಸಿಡಿದು ಗಾಳಿಯಲ್ಲಿ ತೇಲುತ್ತಾ ನೀರಿಗೆ ಬಂದು ಬಿದ್ದೆವು
ಸುತ್ತಲೂ ನೋಡಿದಾಗ ಬರೀ ನೀರು ಕೆಲವರು ಈಜಲು ಪ್ರಯತ್ನಿಸಿದರು ಕೆಲವರು ಆದ ಅಪಘಾತಕ್ಕೆ ನೀರಿಗೆ ಬೀಳುವ ಮೊದಲೇ ಮೃತಪಟ್ಟಿದ್ದರು
ಮಗು ನನ್ನ ತೊಡೆ ಮೇಲೆ ಇದ್ದುದರಿಂದ ನೀರಿಗೆ ಬೀಳುವ ವರೆಗೆ ಮಗುವನ್ನು ಅಪ್ಪಿಕೊಂಡೆ ಇದ್ದೆ ನಾನು ಈಜಲು ಪ್ರಯತ್ನಿಸಿದೆ ಮಗು ಹಿಡಿದುಕೊಂಡು ಈಜಲು ಆಗಲಿಲ್ಲ..
ತೇಲುತ್ತಿರುವ ವಿಮಾನದ ತುಣುಕು ಕಣ್ಣಿಗೆ ಬಿತ್ತು ಏನಾದರೂ ಆಗಲಿ ನಾನು ಸಾಯುವುದಿಲ್ಲ ಬದುಕಿಯೇ ಬದುಕುತ್ತೇನೆ ಎಂದು ಕಷ್ಟಪಟ್ಟು ಈಜಿ ಅದರ ಮೇಲೆ ಏರಿ ಕುಳಿತೆ
ನನಗೆ ಭರವಸೆ ಇತ್ತು ಯಾರಾದರೂ ಕಾಪಾಡುತ್ತಾರೆ ಎಂದು
ನನ್ನ ಧೈರ್ಯವೇ ನನ್ನನ್ನು ಬದುಕಿಸಿತು ...

ಈ ಮೇಲಿನ ಘಟನೆ ಗಮನಿಸಿದಾಗ ಕಷ್ಟ ಕಾಲದಲ್ಲಿ ಧೈರ್ಯ ನಮ್ಮ ಅಸ್ತ್ರವಾಗಬೇಕು ಎಂಬುದು ಮನವರಿಕೆಯಾಗುತ್ತದೆ ,ಇತ್ತೀಚಿನ ಕೆಲವು ಘಟನೆಗಳಲ್ಲಿ ಒಂದು ರೋಗಾಣುವಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡವರ ಸುದ್ದಿ ಓದಿದಾಗ ಇಂತಹ ದಿಟ್ಟ ಮಹಿಳೆಯ ಧೈರ್ಯ ಎಲ್ಲರಲ್ಲೂ ಎಲ್ಲಾ ಕಾಲದಲ್ಲೂ ಬರಬೇಕಿದೆ ,"ಧೈರ್ಯಂ ಸರ್ವತ್ರ ಸಾಧನಂ "ಎಂಬಂತೆ  ಧೈರ್ಯ ನಮ್ಮ ಮೂಲಮಂತ್ರವಾಗಬೇಕು .ಜೀವನದಲ್ಲಿ ಏನೇ ಕಷ್ಟಗಳು ಎದುರಾದರೂ ಅವುಗಳನ್ನು ಎದುರಿಸಿ ಬಾಳಬೇಕು.

" ಹಿಂತಿರುಗಿ ನೋಡಬೇಡಿ,ಯಾವಾಗಲೂ ಮುನ್ನೆಡಿಯಿರಿ,ಅನಂತ ಶಕ್ತಿ, ಅನಂತ ಉತ್ಸಾಹ,ಅನಂತ ಸಾಹಸ,ಅನಂತ ತಾಳ್ಮೆ,ಇವುಗಳಿದ್ದರೆ ಮಾತ್ರ ಮಹತ್ಕಾರ್ಯ ಸಾಧಿಸಲು ಸಾಧ್ಯ " ಎಂಬ ಸ್ವಾಮಿ ವಿವೇಕಾನಂದರ ವಾಣಿ ನಮಗೆ ಮಾರ್ಗದರ್ಶನವಾಗಲಿ.

ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ತುಮಕೂರು

No comments: