13 October 2021

ನೀ ಬಂದು ಮುತ್ತನಿಡು. ಕವನ


 

ನೀ ಬಂದು ಮುತ್ತನಿಡು.

ಬೇಸರಿನ ಸಂಜೆಯಿದು
ಬೇಕೆನೆಗೆ ನಿನ್ನ ಜೊತೆ
ನೇಸರನು ನಡೆದನು
ಕೇಳೀಗ ನನ್ನ ಕಥೆ .

ತಂಗಾಳಿಯಿದ್ದರೂ ಕೂಡಾ
ಮೈಯಲ್ಲ ಏತಕೊ ಬಿಸಿ
ನೀ ಬಂದು ಮುತ್ತನಿಡು
ಖಾಯಿಲೆಯಾಗುವುದು ವಾಸಿ .

ದಿನಕರನು ತೆರೆಮರೆಗೆ ಸರಿದ
ಕತ್ತಲಾಗುತಿದೆ ಮನಕೆ
ಉಷೆಯಂತೆ ಬಂದು ಬಿಡು
ಬೆಳಕು ತೋರಲು  ಪ್ರೇಮಕೆ .

ಸಿಹಿಜೀವಿ
ಸಿ ಜಿ ವೆಂಕಟೇಶ್ವರ


No comments: