01 December 2021

ಭಾರತವನ್ನು ಆರ್ಥಿಕ ಶಕ್ತಿಯಾಗಿ ಪರಿವರ್ತಿಸೋಣ.ಲೇಖನ


 


ಜಿ.ಡಿ .ಪಿ .ಯ ಬೆಳವಣಿಗೆ

ಆಶಾದಾಯಕ ಸಂಗತಿ .


 ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಶೇ 8.4ರ ಬೆಳವಣಿಗೆ ಕಂಡಿದ್ದು, ಕೋವಿಡ್‌ಗೂ ಮುಂಚಿನ ಮಟ್ಟವನ್ನು ತಲುಪಿರುವುದು ಆಶಾದಾಯಕ ಸಂಗತಿಯಾಗಿದೆ.

ಭಾರತದ ಆರ್ಥಿಕತೆಯು ಕೋವಿಡ್ ನಂತಹ  ಕಠಿಣ ಸನ್ನಿವೇಶ ಎದುರಿಸಿದರೂ ಮೇಲೆದ್ದು ಬರುವ ತಾಕತ್ತಿದೆ ಎಂಬುದನ್ನು ಈ ಅಂಕಿ ಅಂಶಗಳು ಸಾಬೀತುಪಡಿಸುತ್ತವೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆಯು ಎರಡಂಕಿ ಪ್ರಗತಿ ಸಾಧಿಸುವ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯ ಅರ್ಥಿಕ ಸಲಹೆಗಾರ (ಸಿಇಎ) ಕೆ.ವಿ. ಸುಬ್ರಮಣಿಯನ್ ರವರ ಹೇಳಿಕೆ ಈ ವಿಚಾರದಲ್ಲಿ ಮಹತ್ವ ಪಡೆಯಲಿದೆ.


ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಶೇ.13.7ರಷ್ಟು ಬೆಳವಣಿಗೆ ಕಂಡಿದೆ. ಮುಂಬರುವ ತ್ರೈಮಾಸಿಕಗಳಲ್ಲಿ ಶೇ 6ಕ್ಕಿಂತಲೂ  ಹೆಚ್ಚಿನ ಮಟ್ಟದ ಬೆಳವಣಿಗೆ ಕಾಣಲಿದ್ದು, ಒಟ್ಟಾರೆಯಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿಗೆ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.


ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭ ಆಗಿರುವುದರಿಂದ ಜನರು ಸರಕು ಮತ್ತು ಸೇವೆಗಳ ಖರೀದಿಗೆ ಮಾಡುತ್ತಿರುವ ಖರ್ಚಿನಲ್ಲಿ ಏರಿಕೆ ಕಂಡುಬಂದಿದೆ. ಹೆಚ್ಚು ಜನರು ಲಸಿಕೆ ಪಡೆದಿದ್ದರಿಂದ ಈ  ಅವಧಿಯಲ್ಲಿ ಕೋವಿಡ್ ತೀವ್ರತೆಯೂ ಕಡಿಮೆ ಆಗಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಎರಡನೇ ತ್ರೈಮಾ ಸಿಕದಲ್ಲಿ ಜೆಡಿಪಿಯು: ಈ ಪ್ರಮಾಣದ ಬೆಳವಣಿಗೆ ಕಂಡಿದೆ.


ಇದೇ ವೇಳೆ ನಮ್ಮ ದೇಶದ 

ದೇಶದ ವಿತ್ತೀಯ ಕೊರತೆಯು ಅಕ್ಟೋಬರ್ ತಿಂಗಳ ಅಂತ್ಯಕ್ಕೆ 2 5.47 ಲಕ್ಷ ಕೋಟಿಗಳಷ್ಟಾಗಿದೆ. ಬಜೆಟ್ ಅಂದಾಜಿನ ಪ್ರಕಾರ ಶೇ 36.3ರಷ್ಟಾಗಿರುವುದು ಪ್ರಮುಖವಾಗಿ ಗಮನಿಸಬೇಕಾದ ಅಂಶವಾಗಿದೆ.


ವರಮಾನ ಸಂಗ್ರಹದಲ್ಲಿ ಸುಧಾರಣೆ ಕಂಡುಬಂದಿರುವುದರಿಂದ ವಿತ್ತೀಯ ಕೊರತೆಯು ಈ ಪ್ರಮಾಣದ ಬೆಳವಣಿಗೆ ಕಂಡಿದೆ ಎಂದು ಸಿಜಿಎ ತಿಳಿಸಿದೆ.

ಇಷ್ಟೆಲ್ಲಾ ಆಶಾದಾಯಕ ಬೆಳವಣಿಗೆಯ ಮುಧ್ಯೆ ಒಮೈಕ್ರಾನ್ ವೈರಸ್ ನ ಕಾರ್ಮೋಡ  ಪ್ರಪಂಚದ ವಿವಿಧ ದೇಶಗಳಲ್ಲಿ ಹರಡುತ್ತಾ ಆತಂಕ  ಕವಿದಿರುವುದು ದುರದೃಷ್ಟಕರ. ಬೇರೆ ದೇಶಗಳಲ್ಲಿ ಕೋವಿಡ್ ಮೂರು ಮತ್ತು ನಾಲ್ಕನೇ ಅಲೆಗಳು ಅಪ್ಪಳಿಸಿದರೂ ಭಾರತದಲ್ಲಿ ಕೊರೊನಾ ನಿಯಂತ್ರಣದಲ್ಲಿ ಇರುವುದಕ್ಕೆ ಕಾರಣ ನಮ್ಮ ಲಸಿಕಾ ಅಭಿಯಾನ ಎಂಬುದನ್ನು ಎಲ್ಲರೂ ಒಪ್ಪಲೇಬೇಕು. ಇಷ್ಟೆಲ್ಲಾ ಪ್ರಯತ್ನಗಳ ಹೊರತಾಗಿಯೂ ನಮ್ಮಲ್ಲಿ ಕೆಲವರು ಎರಡನೇ ಡೋಸ್ ಲಸಿಕೆ ಪಡೆದಿಲ್ಲದಿರುವುದು .ಬೇಸರದ ಸಂಗತಿ.ಇಂತವರು ಸರ್ಕಾರಗಳು ಮತ್ತು ವ್ಯವಸ್ಥೆಯ ಟೀಕೆಮಾಡುತ್ತಾ ತಮ್ಮ ಕರ್ತವ್ಯ ಮರೆಯುವ ಜಾಣ ಪ್ರಜೆಗಳು. ಸರ್ಕಾರ ಮತ್ತು ತಜ್ಞರು ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಜವಾಬ್ದಾರಿಯುತ ಪ್ರಜೆಗಳಾದ ನಾವು ಪಾಲಿಸೋಣ . ನಮ್ಮ ಆರೋಗ್ಯ ಕಾಪಾಡಿಕೊಂಡು ಜೀವವಿದ್ದರೆ ಜೀವನ ಎಂಬ ಸತ್ಯ ಅರಿತು ಒಗ್ಗಟ್ಟಾಗಿ ಸಾಧಿಸೋಣ. ತನ್ಮೂಲಕ ಭಾರತವನ್ನು ಪ್ರಪಂಚದಲ್ಲಿಯೇ ದೊಡ್ಡದಾದ ಆರ್ಥಿಕ ಶಕ್ತಿಯನ್ನಾಗಿ ಪರಿವರ್ತಿಸೋಣ.



ಸಿಹಿಜೀವಿ

ಸಿ ಜಿ ವೆಂಕಟೇಶ್ವರ

ತುಮಕೂರು



No comments: