08 April 2022

ಶಿವಾನಂದ ಶಿ‌ವಾಚಾರ್ಯ ಸ್ವಾಮೀಜಿ.


 ಶಿವಾನಂದ ಶಿವಾಚಾರ್ಯ ಸ್ವಾಮೀಜಿ.


ನಮನ ನಿಮಗೆ   ಹಿರೇಮಠದ ಶಿವಾನಂದ ಶಿವಾಚಾರ್ಯ 

ಜನರಲಿ ಜನಾರ್ಧನನ ಕಂಡ

ಕಲ್ಪತರು ನಾಡಿನ ಯತಿವರ್ಯ.


ಮಹಿಳೆಯರಿಗೆ ರುದ್ರಾಧ್ಯಯನ ವೇದಾಧ್ಯಯನ ಮಾಡಿಸಿದ ಸ್ವಾಮೀಜಿ

ವಯೋವೃದ್ದರಿಗೆ ಕಾಶಿ.ಕೇದಾರ ದರ್ಶನ ಮಾಡಿಸಿದ ಗುರೂಜಿ.


ಜನರ ಧಾರ್ಮಿಕ ಮತ್ತು ನೈತಿಕ ಗುಣಗಳ ಬೆಳೆಸಿದಿರಿ

ವಿದೇಶಗಳಲ್ಲಿ ಭಾರತದ ಕೀರ್ತಿ ಪತಾಕೆಯನು ಹಾರಿಸಿದಿರಿ.


ಮತಕುಲ ತ್ಯಜಿಸಿರಿ ಮನುಕುಲ ಬೆಳೆಸಿರೆಂದ ದಾರ್ಶನಿಕ

ಸ್ವಾಮೀಜಿಗಳ ನಡೆ ನುಡಿ

ನಮಗೆಲ್ಲರಿಗೂ ಪ್ರೇರಕ.


'ಪಿತೃಭಕ್ತ'ರಾಗಿ, ಬರೀ 'ಪಿತ್ರಾರ್ಜಿತ'ದ ಭಕ್ತರಾಗಬೇಡಿ ಎಂದ ಧೀಮಂತ.

ಸಕಲರು ನಮಿಪೆವು ನಿಮ್ಮಯ ಚರಣಕೆ  ಕರಗಳ ಜೋಡಿಸುತಾ.


ಸಿಹಿಜೀವಿ

ಸಿ ಜಿ ವೆಂಕಟೇಶ್ವರ

ತುಮಕೂರು

9900925529.


No comments: