01 October 2023

ದಿಟ್ಟ ನೀರೆ ನೀರಾ ಆರ್ಯ...


 


ದಿಟ್ಟ ನೀರೆ ನೀರಾ ಆರ್ಯ.


ಸ್ವಾತಂತ್ರ್ಯ ಹೋರಾಟದಲ್ಲಿ ತಾಯ್ನಾಡಿನ ಸೇವೆಗೆ ಅಡ್ಡಿಯಾದ ಗಂಡನನ್ನೇ ಕೊಂದು ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ  ಅಂಡಮಾನ್ ನ ಸೆಲ್ಯುಲಾರ್ ಜೈಲಿನಲ್ಲಿ ಕಾಲಾಪಾನಿ ಶಿಕ್ಷೆಗೆ ಗುರಿಯಾದ ಮಹಾನ್ ಹೋರಾಟಗಾರ್ತಿ ನೀರಾ ಆರ್ಯ!

ನೀರಾ ಆರ್ಯ ಅವರು ಮಾರ್ಚ್ 5 1902 ರಂದು ಖೇಕ್ರಾ ನಗರದಲ್ಲಿ ಜನಿಸಿದರು. ಅವರ ತಂದೆ ಶ್ರೀಮಂತ ಉದ್ಯಮಿಯಾಗಿದ್ದರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಕಲ್ಕತ್ತಾದಲ್ಲಿ ಮುಗಿಸಿದರು.ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿದ ನೀರಾ ಸುಭಾಷ್ ಚಂದ್ರ ಬೋಸರ ಕಟ್ಟಾ ಅಭಿಮಾನಿ. ಅವರು ಭಾರತೀಯ ರಾಷ್ಟ್ರೀಯ ಸೇನೆಯನ್ನು  ಸೇರಿ.  INA ಯ ರಾಣಿ ಆಫ್ ಝಾನ್ಸಿ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದರು.

ನೀರಾ ಆರ್ಯ ಅವರು ಬ್ರಿಟಿಷ್ ಸಿಐಡಿ ಅಧಿಕಾರಿಯಾಗಿದ್ದ ಶ್ರೀಕಾಂತ್ ಜೈರಂಜನ್ ದಾಸ್ ಅವರನ್ನು ವಿವಾಹವಾಗಿದ್ದರು.  ನೀರಾರವರು ಭಾರತೀಯ ರಾಷ್ಟ್ರೀಯ ಸೇನೆಗೆ ಸೇರಿದ್ದಾರೆ ಎಂದು ಅರಿತ ಶ್ರೀಕಾಂತ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ನೀರಾ ಅವರು ಹತ್ಯೆ ಮಾಡಬೇಕೆಂದು ಬಯಸಿದ್ದರು. ನೀರಾರವರು ನಿರಾಕರಿಸಿದಾಗ, ನೇತಾಜಿಯನ್ನೇ ಹತ್ಯೆ ಮಾಡಲು ನೇತಾಜಿ ಇರುವ ಸ್ಥಳವನ್ನು ಬಹಿರಂಗಪಡಿಸಬೇಕೆಂದು ಶ್ರೀಕಾಂತ್ ಬಯಸಿದ್ದರು. ವಿಫಲವಾದ ಹತ್ಯೆಯ ಪ್ರಯತ್ನದ ಸಂದರ್ಭದಲ್ಲಿ, ಶ್ರೀಕಾಂತ್ ನೇತಾಜಿ ಕಡೆಗೆ ಗುಂಡು ಹಾರಿಸಿದ್ದರು. ನೇತಾಜಿ ಗುಂಡಿನ ದಾಳಿಯಿಂದ ಬದುಕುಳಿದರು. ಆದರೆ ಅವರ ಚಾಲಕ ಕೊಲ್ಲಲ್ಪಟ್ಟರು. ಇದನ್ನು ಕೇಳಿದ ನೀರಾರವರು ಶ್ರೀಕಾಂತ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. 

ಶ್ರೀಕಾಂತ್‌ನನ್ನು ಕೊಂದಿದ್ದಕ್ಕಾಗಿ ನೀರಾರವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿ ಬಂಧಿಯಾಗಿದ್ದರು ಮತ್ತು ಅಮಾನುಷವಾಗಿ ಚಿತ್ರಹಿಂಸೆ ನೀಡಲಾಯಿತು  ನೇತಾಜಿ ಇರುವ ತಾಣವನ್ನು ಬಹಿರಂಗಪಡಿಸಲು ಅಧಿಕಾರಿಗಳು  ನೇತಾಜಿ ಎಲ್ಲಿರುವರು ಹೇಳು ಎಂದು  ಕೇಳಿದಾಗ ಮೀರಾರವರು ಬ್ರಿಟೀಷರ ಮೇಲಿನ ಸಿಟ್ಟು ಮತ್ತು ಸುಭಾಷ್ ರವರ  ಮೇಲಿನ ಹೆಮ್ಮೆಯಿಂದ ನೇತಾಜಿ ನನ್ನ ಹೃದಯದಲ್ಲಿ ಇರುವರು ಎಂದಾಗ ದುರುಳ ಬ್ರಿಟಿಷ್ ಅಧಿಕಾರಿಗಳು ನಿರ್ದಯವಾಗಿ  ಅವರ ಸ್ತನಗಳನ್ನು  ಕತ್ತರಿಸಿದರು.  

ಸ್ವಾತಂತ್ರ್ಯಾನಂತರ ನೀರಾರವರ ಬಿಡುಗಡೆಯಾಯಿತು.  ತಮ್ಮ ಕೊನೆಯ ದಿನಗಳನ್ನು ಹೈದರಾಬಾದ್ ನಲ್ಲಿ ಕಳೆದರು.   ಜುಲೈ 26 1998 ರಂದು ಕೊನೆಯುಸಿರೆಳೆದರು.
ನಮ್ಮ ಇಂದಿನ ಸ್ವಾತಂತ್ರ್ಯದ ಹಿಂದೆ ಇಂತಹ ಮಹಾನ್ ಹೋರಾಟಗಾರರ ತ್ಯಾಗವಿದೆ ಅಂತಹ ಮಹಾನ್ ಆತ್ಮಗಳಿಗೆ ಗೌರವಪೂರ್ವಕವಾಗಿ ನಮಿಸೋಣ...

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529

No comments: