19 December 2023

ನಿಸರ್ಗಕ್ಕೆ ಋಣಿಯಾಗಿರೋಣ.



 


ನಿಸರ್ಗಕ್ಕೆ ಋಣಿಯಾಗಿರೋಣ.


ನಿಸರ್ಗಕ್ಕೆ ನಾವು ಋಣಿಯಾಗಿರಬೇಕು ಎಂದು ಅಂತಃಪ್ರಜ್ಞೆ ಜಾಗೃತಿ ಕೇಂದ್ರದ ಸಂಸ್ಥಾಪಕರಾದ ಶ್ರೀನಿವಾಸ ಅರ್ಕ ಗುರೂಜಿಯವರು ಕರೆ ನೀಡಿದರು.


ಅನನ್ಯ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗುರೂಜಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. 


ನಮ್ಮ ಸುತ್ತಲಿನ ಪರಿಸರವನ್ನು ಗಮನಿಸಿದರೆ ಚಳಿ, ಮಳೆ, ಬಿಸಿಲು, ಬಿರುಗಾಳಿಯಂತಹ ವಿಭಿನ್ನ ಋತುಮಾನಗಳನ್ನು ಕಾಣುತ್ತೇವೆ.  ನಮಗೆ ನಿಸರ್ಗ  ಎಲ್ಲವನ್ನೂ ನೀಡಿದೆ. ಅದಕ್ಕೆ ನಾವು ಋಣಿಯಾಗಿರಬೇಕು.  ಯಾವಾಗಲೂ ಸಕಾರಾತ್ಮಕವಾಗಿರಬೇಕು. ಯಾವುದೇ ಸನ್ನಿವೇಶಗಳಲ್ಲಿ ರಚನಾತ್ಮಕ ದೃಷ್ಟಿಯಿಂದ ನೋಡುವ ಮನೋಭಾವವನ್ನು ನಾವು ಬೆಳೆಸಿಕೊಂಡಾಗ  ನಮ್ಮೊಳಗೆ ನಿರಾಳವಾದ ಹಾಗೂ  ಹಗುರ ಎಂದೆನಿಸುವ ಭಾವ ಒಡಮೂಡುತ್ತದೆ. ಇಂತಹ ಭಾವ ನಿಮ್ಮ ಉನ್ನತ ವ್ಯಕ್ತಿತ್ವ ರೂಪಿಸುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅದ್ಯಕ್ಷರಾದ ಗೀತಾ ನಾಗೇಶ್ ರವರು ಶ್ರೀನಿವಾಸ ಅರ್ಕ ಗುರೂಜಿಯವರು ಅಂತಾರಾಷ್ಟ್ರೀಯ ಖ್ಯಾತಿಯ ವ್ಯಕ್ತಿತ್ವ ವಿಕಸನ ತರಬೇತುದಾರ ರಾಗಿದ್ದು ಅವರು ನೀಡುವ ಜ್ಞಾನದ ಸದುಪಯೋಗ ಪಡೆದು ನಿಮ್ಮ ವ್ಯಕ್ತಿತ್ವ ಉತ್ತಮಪಡಿಕೊಳ್ಳಿ, ಹಾಗೂ ಕನ್ನಡ ಭಾಷೆಯ ಮಹತ್ವ ಅರಿತು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಕೈಜೋಡಿಸಿ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡಿದ ಗುರೂಜಿಯವರು ವಿದ್ಯಾರ್ಥಿಗಳ ಸಂದೇಹಗಳಿಗೆ ಪರಿಹಾರ ಸೂಚಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಚಿಕ್ಕ ಬೆಳ್ಳಾವಿ ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಕಾರ್ಯದರ್ಶಿಗಳಾದ ಚಾಂದು, ಸಿಹಿಜೀವಿ ವೆಂಕಟೇಶ್ವರ,

ಅನನ್ಯ ಕಾಲೇಜಿನ ಪ್ರಾಂಶುಪಾಲರಾದ   ಡಾಕ್ಟರ್ ವಿಶ್ವಾಸ್  ಲೇಖಕಿಯರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುಗುಣದೇವಿ, ಲತಾ ವೆಂಕಟೇಶ್ ಅನನ್ಯ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು. 

No comments: