31 March 2024

ಅತ್ತಿಗೆ, ನಾದಿನಿಯರು ಡಿಚ್ಚಿ ಹೊಡೆಯುವ ವಿಶಿಷ್ಟ ಆಚರಣೆ!


ಅತ್ತಿಗೆ, ನಾದಿನಿಯರು ಡಿಚ್ಚಿ ಹೊಡೆಯುವ ವಿಶಿಷ್ಟ ಆಚರಣೆ!



ಹಿರಿಯೂರು ತಾಲೂಕಿನ ಐಮಂಗಲ ಹೋಬಳಿ ಸಿ.ಎನ್. ಮಾಳಿಗೆ ಗ್ರಾಮದ ಅಹೋಬಲ ನರಸಿಂಹ ಸ್ವಾಮಿಯ ಕಾರ್ತೀಕ ಮಹೋತ್ಸವದ ಜಾತ್ರೆಯಲ್ಲಿ ಅತ್ತಿಗೆ, ನಾದಿನಿ ಯರು ಡಿಚ್ಚಿಹೊಡೆದುಕೊಳ್ಳುವ ವಿಶಿಷ್ಟ ಆಚರಣೆಯೊಂದು ಪ್ರತಿವರ್ಷವೂ ನಡೆಯುತ್ತದೆ.


ದೇವಸ್ಥಾನದ ಒಂದು ಬದಿ ಅತ್ತಿಗೆಯರು ಮತ್ತು ಇನ್ನೊಂದು ಬದಿ ನಾದಿನಿಯರು ನಿಂತು ಓಡಿ ಬಂದು ಡಿಚ್ಚಿ ಹೊಡೆದುಕೊಳ್ಳುವ ಸಂಪ್ರದಾಯ ಪ್ರತಿ ವರ್ಷದಂತೆ ಈ ವರ್ಷ ನಡೆಯಿತು. ಬುಡಕಟ್ಟು ಮೂಲ ನೆಲೆಯಿಂದಲೇ ಬಂದಿರುವ ದೈವಭಕ್ತಿ ನಂಬಿಕೆಯಲ್ಲಿ ಅತ್ತಿಗೆ ನಾದಿನಿಯ ಭಾಂದವ್ಯದ ಪ್ರತೀಕವಾಗಿ ಈ ಆಚರಣೆ. ರೂಢಿಗತವಾಗಿ ಬಂದಿದೆ.


ವಿವಾಹವಾಗಿ ಬೇರೆ ಊರಿಗೆ ಹೋಗಿರುವ ನಾದಿನಿ ಯರನ್ನು ಊರಿನ ಹೆಬ್ಬಾಗಿಲ ಬಳಿ ಮೆರವಣಿಗೆ ಮೂಲಕ ಕರೆ ತರುತ್ತಾರೆ. ಪರಸ್ಪರ ಎದುರುಗೊಂಡ ಅತ್ತಿಗೆ, ನಾದಿನಿ ಯರು ದೇವರಸಮ್ಮುಖದಲ್ಲಿ ಪ್ರೀತಿಯ ಅಪ್ಪುಗೆಯೊಂದಿಗೆ ಮೂರುಬಾರಿ ತಲೆಯಲ್ಲಿ ಪರಸ್ಪರ ಡಿಚ್ಚಿಹೊಡೆದುಕೊಳ್ಳುವ

ಮೂಲಕ ತವರು ಮನೆ ಪ್ರೀತಿ ಗಟ್ಟಿಗೊಳಿಸಿಕೊಳ್ಳುತ್ತಾರೆ.


ಮಹಿಳೆಯರಮಧ್ಯೆ ಬರುವ ಸಣ್ಣಪುಟ್ಟಭಿನ್ನಾಭಿಪ್ರಾಯ ಮರೆತು ಒಂದಾಗಿ ಬಾಳುವ ರೂಪಕವಾಗಿ ಈ ಆಚರಣೆ ನಡೆದು ಬಂದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಈ ಸಂಪ್ರದಾಯ ನಡೆಯುತ್ತದೆ.


ಸಿಹಿಜೀವಿ ವೆಂಕಟೇಶ್ವರ

ತುಮಕೂರು.

No comments: