19 May 2024

ದಿನಕ್ಕೆ 10 ನಿಮಿಷವಾದರೂ ಕನ್ನಡ ಪುಸ್ತಕ ಓದಿ

 


ದಿನಕ್ಕೆ 10 ನಿಮಿಷವಾದರೂ ಕನ್ನಡ ಪುಸ್ತಕ ಓದಿ 


ದಿನಕ್ಕೆ 10 ನಿಮಿಷವಾದರೂ ಕನ್ನಡ ಪುಸ್ತಕ ಓದಿ .ದಿನಕ್ಕೆ ಕನಿಷ್ಟಪಕ್ಷ 10 ಕನ್ನಡ ಹೊಸ ಕನ್ನಡ ಪದಗಳನ್ನು ಕಲಿತು ನಿಮ್ಮ ಪದಸಂಪತ್ತು ಹೆಚ್ಚಿಸಿಕೊಂಡು ಕನ್ನಡ ಪಸರಿಸುವ ಕಾರ್ಯ ಮಾಡಿ ಎಂದು ಸಾಹಿತಿಗಳು ಹಾಗೂ ವ್ಯಾಖ್ಯಾನಕಾರರಾದ ತನಾಶಿ ರವರು ಕರೆ ನೀಡಿದರು.


ಕುಣಿಗಲ್ ನ ಬ್ರಾಹ್ಮಣ ಸಮುದಾಯ ಭವನದಲ್ಲಿ ನಡೆದ ನುಡಿಸಂಭ್ರಮ ವಾರ್ಷಿಕ ಸಮ್ಮಿಲನ  ಕಾರ್ಯಕ್ರಮದಲ್ಲಿ  ನುಡಿ ಹೆಜ್ಜೆ ಈ ಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿಗಳಾದ ಅನುಸೂಯ ಸಿದ್ದರಾಮ ರವರು ನುಡಿತೋರಣ ವಾಟ್ಸಪ್ ಬಳಗ ಅಚ್ಚುಕಟ್ಟಾದ ಕಾರ್ಯಕ್ರಮ ಆಯೋಜನೆಯಲ್ಲಿ ಸಂಚಾಲನ ಸಮಿತಿಯ ಸದಸ್ಯರ ಪಾತ್ರ ಮಹತ್ವದ್ದು ಮುಂದೆಯೂ ಇಂತಹ ಕನ್ನಡದ ಕೈಂಕರ್ಯ ಮುಂದುವರೆಯಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಪ್ನಾ ಬುಕ್ ಹೌಸ್ ನ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೇಗೌಡರು ಸಾಹಿತ್ಯ ಪರಿಷತ್ತು ಮಾಡುವ ಕೆಲಸವನ್ನು ನುಡಿತೋರಣ ಬಳಗ ಮಾಡುತ್ತಿರುವುದು ಶ್ಲಾಘನೀಯ, ಇದು ಹೀಗೆಯೇ ಮುಂದುವರೆಯಲಿ.ಮುಂದಿನ ನುಡಿತೋರಣ ಸಮಾಗಮಕ್ಕೆ ಪುಸ್ತಕ ತಾಂಬೂಲ ನೀಡಲು ನಾನು ಸಿದ್ಧ  ಎಂದರು.

ಸಾಹಿತಿಗಳು ಹಾಗೂ ನುಡಿತೋರಣದ ಸಂಚಾಲಕರಲ್ಲಿ ಒಬ್ಬರಾದ ಕಿರಣ್ ಹಿರಿಸಾವೆ ರವರು ನುಡಿತೋರಣ ಬೆಳೆದು ಬಂದ ದಾರಿ ಮತ್ತು  ಮುಂದಿನ ಯೋಜನೆಯ ರೂಪರೇಷೆಗಳನ್ನು ಕವಿಮನಗಳೊಂದಿಗೆ ಹಂಚಿಕೊಂಡರು.

ನುಡಿಹೆಜ್ಜೆ ಈ ಪತ್ರಿಕೆಯ ಸಂಪಾದಕರಾದ ಎಂ ವೆಂಕಟೇಶ ಶೇಷಾದ್ರಿ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಎರಡು ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಮಾನಸ ಕೆ ಕೆ ರವರ ಚಿತ್ತದ ಸುತ್ತ ಹಾಗೂ ಸಿ ಬಿ ಶೈಲ ಜಯಕುಮಾರ್ ರವರ  ವೃತ್ತಿ ಬದುಕಿನ ಹಿನ್ನೋಟ ಲೋಕಾರ್ಪಣೆಗೊಂಡ ಕೃತಿಗಳು.

ಡಾ ರುಕ್ಮಿಣಿ ವ್ಯಾಸರಾಜ್ ಮತ್ತು ತಂಡದವರು ನಾಡಗೀತೆ ಪ್ರಸ್ತುತ ಪಡಿಸಿದರು. ನಳಿನಾ ಸುಬ್ರಮಣ್ಯ ತಂಡದವರು ಪ್ರಾರ್ಥಿಸಿದರು. ಪವಿತ್ರ ಮೃತ್ಯುಂಜಯಸ್ವಾಮಿ ಸ್ವಾಗತಿಸಿ ಪ್ರಶಾಂತ್ ರವರು ವಂದಿಸಿದರು. 

ಜಯಶ್ರೀ ರಾಜು ರವರು ಕಾರ್ಯಕ್ರಮ ನಿರೂಪಿಸಿದರು.

No comments: