ಕಾರಿಂದ ಪ್ರಜ್ಞಾಹೀನ ಮಹಿಳೆಯನ್ನು ಇಳಿಸಿ ಲಗುಬಗೆಯಿಂದ ಎಮರ್ಜೆನ್ಸಿ ಗೆ ಸೇರಿಸಿ ಐದು ನಿಮಿಷದಲ್ಲಿ ಡಾಕ್ಟರ್ ಹೊರ ಬಂದು ಪೇಶೆಂಟ್ ಇನ್ನಿಲ್ಲ ಅಂದರು. ಗಂಡನ ದುಃಖ ನೋಡಲಾಗಲಿಲ್ಲ.ಮೂರು ಮಕ್ಕಳ ತಾಯಿ ಕುಟುಂಬ ಅಗಲಿದ್ದಾರೆ.ಆ ಮಕ್ಕಳ ನೋಡುವವರಾರು? ಬಳ್ಳಾರಿ ಮೂಲದ ದಂಪತಿಗಳು ಬೆಂಗಳೂರಿನ ನಿಮ್ಹಾನ್ಸ್ ಗೆ ಚಿಕಿತ್ಸೆಗೆ ಹೊರಟಿದ್ದರು.ಉಸಿರಾಟದ ತೊಂದರೆಯಿಂದ ತುಮಕೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು.
ಉಸಿರಿಲ್ಲದ ಮಹಿಳೆಯನ್ನು ಕಣ್ಣ ಮುಂದೆ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದನ್ನು ನೋಡಿ ಮನಸ್ಸು ಭಾರವೆನಿಸಿತು.
No comments:
Post a Comment