ಇಂದು ತುಮಕೂರಿನಿಂದ ಚಿತ್ರದುರ್ಗಕ್ಕೆ ಹೋಗುವಾಗ ಹಿರಿಯೂರಿನಲ್ಲಿ ಗುಡ್ಲು ಹೋಟೆಲ್ ಅಥವಾ ಸುಂದ್ರಣ್ಣ ಹೋಟೆಲ್ ನಲ್ಲಿ ಇಡ್ಲಿ ,ವಡೆ ಪಲಾವ್ ತಿಂದೆ. ಟಿ ಬಿ ಸರ್ಕಲ್ ನ ಚಾನಲ್ ದಡದಲ್ಲಿ ಇರುವ ಈ ಹೋಟೆಲ್ ಗೆ ಬೋರ್ಡ್ ಇಲ್ಲ.ದಿನಕ್ಕೆ 5000 ಇಡ್ಲಿಗಳು ಖರ್ಚಾಗುವ ಈ ಹೋಟೆಲ್ ಹಿರಿಯೂರು ನಗರದಲ್ಲಿ ಹಾಗೂ ನಾಡಿನಲ್ಲಿ ಮನೆಮಾತಾಗಿದೆ. ಶುಚಿ ,ರುಚಿ ಮತ್ತು ಕೈಗೆಟುಕುವ ಬೆಲೆ ಈ ಹೋಟೆಲ್ ವಿಶೇಷ. ನಾನು ಮೊದಲು ಶಿಕ್ಷಕನಾಗಿ ಕೆಲಸ ಮಾಡಿದ ಹುಚ್ಚವ್ವನಹಳ್ಳಿಯ ಇಬ್ಬರು ಈ ಹೋಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಬಹಳ ಆತ್ಮೀಯತೆಯಿಂದ ಮಾತನಾಡಿಸಿದರು.
ನೀವು ಈ ಹೋಟೆಲ್ ನಲ್ಲಿ ಟಿಫನ್ ಮಾಡಿದ್ದರೆ ಮಾಹಿತಿ ಹಂಚಿಕೊಳ್ಳಬಹುದು.
#sihijeeviVenkateshwara #hotel #hiriyur
No comments:
Post a Comment