ಕೆಲ ಬ್ಯಾಂಕುಗಳು ಗ್ರಾಹಕ ಸ್ನೇಹಿಯಲ್ಲ.ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡೇತರ ಸಿಬ್ಬಂದಿಯಿಂದ ಕನ್ನಡ ಮಾತನಾಡದೇ ಅನ್ಯಭಾಷೆ ಮಾತನಾಡುವ ಪರಿಣಾಮ ಅಲ್ಲಲ್ಲಿ ಗ್ರಾಹಕ ಮತ್ತು ಬ್ಯಾಂಕ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದನ್ನು ನೋಡುತ್ತೇವೆ. ಅದರ ಜೊತೆಗೆ ಸೇವೆಗಳನ್ನು ನೀಡುವಾಗ ಅನವಶ್ಯಕ ವಿಳಂಬ ಮಾಡುವುದು. ಗ್ರಾಹಕರೊಂದಿಗೆ ಸೌಜನ್ಯವಾಗಿ ವರ್ತಿಸದಿರುವುದು ಅಲ್ಲಲ್ಲಿ ಕಂಡು ಬರುತ್ತವೆ. ನಿನ್ನೆ ದಿನ ಕ್ಯಾತ್ಸಂದ್ರ ದ ಕೆನರಾ ಬ್ಯಾಂಕ್ ಶಾಖೆಗೆ ಹಣ ಪಾವತಿ ಮಾಡಲು ಹೋದಾಗ ಹಣ ಪಾವತಿ ಸ್ಲಿಪ್ ಅನ್ಯ ರಾಜ್ಯದ ಭಾಷೆ ಪ್ರಿಂಟ್ ಇರುವುದನ್ನು ನೀಡಿದರು. ಕನ್ನಡ ಮತ್ತು ಇಂಗ್ಲೀಷ್ ಮುದ್ರಣದ ಸ್ಲಿಪ್ ಕೊಡಿ ಎಂದಾಗ ಅಲ್ಲಿಯ ಸಿಬ್ಬಂದಿ ಉಡಾಫೆಯಿಂದ ಉತ್ತರಿಸಿದರು. ನಾನು ಮ್ಯಾನೇಜರ್ ಭೇಟಿ ಮಾಡಿ ವಿಷಯ ಮುಟ್ಟಿಸಿದಾಗ ಅವರು ಕ್ಷಮೆ ಕೇಳಿ ಕನ್ನಡ ಚಲನ್ ಕೊಟ್ಟರು. ಬೇಕಾಬಿಟ್ಟಿ ಸರ್ವೀಸ್ ಚಾರ್ಜ್ ಹಾಕುವ ಈ ಬ್ಯಾಂಕ್ ಗಳು ಸೇವೆ ನೀಡುವಲ್ಲಿ ಅಸಡ್ಡೆ ತೋರುವ ತನ್ನ ಸಿಬ್ಬಂದಿಗಳಿಗೆ ಯಾಕೆ ಬುದ್ದಿ ಕಲಿಸಲ್ಲ. ಕೆಲ ಬ್ಯಾಂಕ್ ಸಿಬ್ಬಂದಿ ಯಾಕೆ ಹೀಗೆ?ಇವರು ಗ್ರಾಹಕ ಸ್ನೇಹಿ ಆಗುವುದು ಯಾವಾಗ?
ಸಿಹಿಜೀವಿ ವೆಂಕಟೇಶ್ವರ
ತುಮಕೂರು
No comments:
Post a Comment