sridevitanaya "ಶ್ರೀ ದೇವಿಕೃಪೆ" kannada literature , news, poem, story
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
02 ಫೆಬ್ರವರಿ 2026
ಫೆಬ್ರವರಿ ಎಂದರೆ ಸುಮ್ಮನೆ ಅಲ್ಲ..
ಫೆಬ್ರವರಿ ಎಂದರೆ ಸುಮ್ಮನೆ ಅಲ್ಲ..
ಫೆಬ್ರವರಿ ತಿಂಗಳು ವರ್ಷದ ಉಳಿದ ತಿಂಗಳುಗಳಿಗಿಂತ ವಿಭಿನ್ನ ಮತ್ತು ವಿಶೇಷ. ಪ್ರಕೃತಿಯ ಬದಲಾವಣೆ, ಸಾಂಸ್ಕೃತಿಕ ಮಹತ್ವ ಹಾಗೂ ಕಾಲಗಣನೆಯ ವೈಚಿತ್ರ್ಯದಿಂದಾಗಿ ಇದು ತನ್ನದೇ ಆದ ಆಕರ್ಷಣೆ ಹೊಂದಿದೆ.
ಫೆಬ್ರವರಿ ತಿಂಗಳು ಕೇವಲ 28 ಅಥವಾ 29 ದಿನಗಳನ್ನು ಹೊಂದಿರುವ ವರ್ಷದ ಏಕೈಕ ತಿಂಗಳು. ಸೌರಮಂಡಲದ ಲೆಕ್ಕಾಚಾರದ ಪ್ರಕಾರ ಪ್ರತಿ ನಾಲ್ಕು ವರ್ಷಕ್ಕೊಮ್ಮೆ 'ಅಧಿಕ ವರ್ಷ' (Leap Year) ಬರುತ್ತದೆ. ಆಗ ಈ ತಿಂಗಳು 29 ದಿನಗಳನ್ನು ಹೊಂದಿರುತ್ತದೆ. ಈ ವೈಶಿಷ್ಟ್ಯವೇ ಫೆಬ್ರವರಿಯನ್ನು ಇತರ 11 ತಿಂಗಳುಗಳಿಗಿಂತ ವಿಭಿನ್ನವಾಗಿ ನಿಲ್ಲಿಸುತ್ತದೆ.
ಈ ತಿಂಗಳು ಮನೆ ಮಾಲೀಕರಿಗೆ ಖುಷಿಯ ವಿಚಾರವಾದರೆ ಬಾಡಿಗೆದಾರರಿಗೆ ಬೇಸರದ ತಿಂಗಳು.
ಫೆಬ್ರವರಿ ತಿಂಗಳೆಂದರೆ
ಮನೆ ಓನರ್ ಗಳಿಗೆ
ಎಲ್ಲಿಲ್ಲದ ಸಂತಸ|
ಎರಡು ದಿನ ಮೊದಲೇ
ತುಂಬಿ ಬಿಡುವುದು
ಅವರ ಬೊಕ್ಕಸ ||
ಭಾರತದಲ್ಲಿ ಫೆಬ್ರವರಿ ತಿಂಗಳು ಶೀತಗಾಲದ ಅಂತ್ಯ ಮತ್ತು ವಸಂತ ಕಾಲದ ಆಗಮನದ ಸಮಯ. ಮರದ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುವ ಹಾಗೂ ಹೂವುಗಳು ಅರಳುವ ಸುಂದರ ಕಾಲವಿದು. ಅತಿಯಾದ ಚಳಿಯೂ ಇಲ್ಲದ ವಿಪರೀತ ಸೆಕೆಯೂ ಇಲ್ಲದ ಹಿತಕರವಾದ ಹವಾಮಾನ ಇರುವುದರಿಂದ ಪ್ರವಾಸಕ್ಕೆ ಇದು ಅತ್ಯುತ್ತಮ ಸಮಯ.
ಈ ತಿಂಗಳು ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವವನ್ನೂ ಹೊಂದಿದೆ
ಫೆಬ್ರವರಿ ತಿಂಗಳಿನಲ್ಲಿ ಹಲವಾರು ಪ್ರಮುಖ ದಿನಾಚರಣೆಗಳಿವೆ.ಅದರಲ್ಲಿ
ಫೆಬ್ರವರಿ 14 ರಂದು ಆಚರಿಸುವ ಪ್ರೇಮಿಗಳ ದಿನ ಒಂದು.ಅದು ವಿಶ್ವದಾದ್ಯಂತ ಪ್ರೀತಿ ಮತ್ತು ಸ್ನೇಹವನ್ನು ಸಂಭ್ರಮಿಸುವ ದಿನ.
ಕಾತರಿಸುವನು ಅವನು
ಎಂದು ಬರುವುದೋ
ಫೆಬ್ರವರಿ ಹದಿನಾಲಕ್ಕು|
ಅವಳು ಇವನ
ಪ್ರೀತಿ ಸ್ವೀಕರಿಸಿದರೆ
ಅದೇ ದೊಡ್ಡ ಲಕ್ಕು||
ಫೆಬ್ರವರಿ 21 ರಂದು ಅಂತರರಾಷ್ಟ್ರೀಯ ಮಾತೃಭಾಷಾ ದಿನವನ್ನು ಆಚರಿಸುತ್ತೇವೆ. ನಮ್ಮ ತಾಯ್ನುಡಿಯ ಮಹತ್ವವನ್ನು ಸಾರುವ ದಿನವು ನಮ್ಮ ಮಾತೃಭಾಷೆಯ ಬಗ್ಗೆ ಹೆಮ್ಮೆ ಪಡುವ ದಿನ
ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತೇವೆ. ಸರ್ ಸಿ.ವಿ. ರಾಮನ್ ಅವರು 'ರಾಮನ್ ಎಫೆಕ್ಟ್' ಸಂಶೋಧಿಸಿದ ದಿನದ ನೆನಪಿಗಾಗಿ ಇದನ್ನು ಭಾರತದಲ್ಲಿ ಆಚರಿಸಲಾಗುತ್ತದೆ. ಇದೇ ತಿಂಗಳಲ್ಲಿ ನಮ್ಮ ನಾಡಿನಲ್ಲಿ ಅನೇಕ ಹಬ್ಬ ಹಾಗೂ ಜಾತ್ರೆಗಳನ್ನು ಆಚರಿಸುತ್ತೇವೆ.
ಫೆಬ್ರವರಿ ಕೊನೆಯಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಬರುವ 'ಮಹಾಶಿವರಾತ್ರಿ' ಹಬ್ಬವು ಧಾರ್ಮಿಕವಾಗಿ ಈ ಕಾಲಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ.
ಇಷ್ಟೆಲ್ಲಾ ಮಹತ್ವದ ಈ ತಿಂಗಳ ಕಂಡರೆ ಕೆಲವರು ಬೇಸರ ವ್ಯಕ್ತಪಡಿಸುವರು.ಅವರೇ ಫೆಬ್ರವರಿ ತಿಂಗಳ 29 ರಂದು ಜನಿಸಿವರು.
ಫೆಬ್ರವರಿ 29 ರಂದು
ಹುಟ್ಟಿದವರ ಪಾಡು
ಹೇಳತೀರದು|
ಅವರ ಹುಟ್ಟು
ಪ್ರತಿ ವರ್ಷ ಬಾರದು||
ಫೆಬ್ರವರಿ ಎಂದರೆ ಕೇವಲ ಒಂದು ತಿಂಗಳಲ್ಲ.ಅದು ಹಳೆಯದನ್ನು ಕಳೆದು ಹೊಸತನಕ್ಕೆ ಸಿದ್ಧವಾಗುವ ಸಂಧಿಕಾಲ. ವರ್ಷದ ಚಿಕ್ಕ ತಿಂಗಳಾದರೂ ಇದು ಹೊತ್ತು ತರುವ ಸಂಭ್ರಮ ಮತ್ತು ಸಾರ್ಥಕತೆ ದೊಡ್ಡದು.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
11 ಜನವರಿ 2026
ಜಗದ ಎತ್ತರದ ಹಾಗೂ ಭಾರವಾದ ಶಿಬಲಿಂಗ..
ಜಗದ ಅತಿ ಎತ್ತರದ ಹಾಗೂ ಭಾರವಾದ ಏಕ ಶಿಲಾ ಶಿವಲಿಂಗ ಬಿಹಾರದ ದೇವಾಲಯವೊಂದಲ್ಲಿ ಶೀಘ್ರದಲ್ಲೇ ಪ್ರತಿಷ್ಠಾಪನೆಯಾಗಲಿದೆ.
ಗ್ರಾನೈಟ್ ಶಿಲೆಯಲ್ಲಿ ಕೆತ್ತಿರುವ ಈ ಲಿಂಗವು 33 ಅಡಿ ಉದ್ದವಿದ್ದು ಬರೊಬ್ವರಿ 210 ಟನ್ ಭಾರವಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಹತ್ತು ವರ್ಷಗಳಿಂದ ಕೆತ್ತನೆ ಮಾಡಿ ಈಗ ಬಿಹಾರದ ಚಂಪಾರಣ್ಯ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದ ಕಡೆಗೆ ಪಯಣ ಆರಂಭಿಸಿದೆ.ಲಿಂಗವೇ ಈ ಮಟ್ಟದ ದಾಖಲೆಯನ್ನು ಹೊಂದಿದೆ ಎಂದರೆ ಆ ದೇವಾಲಯದ ಬಗ್ಗೆ ನನಗೆ ಇನ್ನೂ ಕುತೂಹಲ ಇದೆ.
ಈ ಬೃಹತ್ ಲಿಂಗದ ಸಾಗಣೆಗೆ 96 ಚಕ್ರದ ಹೈಡ್ರಾಲಿಕ್ ಲಾರಿ ಬಳಸಲಾಗಿದೆ.2100 ಕಿಲೋಮೀಟರ್ ದಾರಿ ಸುಸೂತ್ರವಾಗಿ ಸಾಗಿ ಪ್ರಸಾವಿತ ದೇವಳ ತಲುಪಲಿ ಎಂದು ಆಶಿಸೋಣ.ಓಂ ನಮಃ ಶಿವಾಯ ಎಂದು ಕಾಮೆಂಟ್ ಮಾಡುವ ಮೂಲಕ ಶುಭಾಶಯಗಳನ್ನು ಕೋರೋಣ.
#sihijeevi #tumkur
#harharmahadev #omnamahshivaya
#Bihar #mahabalipuram #tamilnadupolitics
09 ಜನವರಿ 2026
ನೆಲದ ನಕ್ಷತ್ರ ದೀಪೆಂದರ್ ಗೋಯಲ್..
ಅವರು ತಮ್ಮ ಬಾಲ್ಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದರು. ಅವರು ಕುಳ್ಳಗಿದ್ದರು, ಕಪ್ಪಗಿದ್ದರು. ತೊದಲುತ್ತಿದ್ದರು ಎಂಬ ಕಾರಣಕ್ಕಾಗಿ ಅವರನ್ನು ಅವರ ಸ್ನೇಹಿತರು ಕೀಟಲೆ ಮಾಡಿ ಅವಮಾನ ಮಾಡಿದ್ದರು. ಅವರು ಮಾತನಾಡುವಾಗ ಜನರು ಅವರ ಕಡೆ ಗಮನ ಕೊಡುತ್ತಿರಲಿಲ್ಲ ಅಥವಾ ಅವರ ಮಾತಿನ ಮಧ್ಯದಲ್ಲೇ ಬೇರೆಡೆ ನೋಡುತ್ತಿದ್ದರು. ಈ ಕೀಳರಿಮೆಯೇ ಅವರನ್ನು ಜೀವನದಲ್ಲಿ ದೊಡ್ಡದನ್ನು ಸಾಧಿಸಲು ಪ್ರೇರೇಪಿಸಿತು. ಇಂದು ಅವರು ಯಶಸ್ವಿ ಉದ್ಯಮಿ 700000 ಕ್ಕೂ ಜನರ ಉದ್ಯೋಗದಾತ.ಈಗ ತಾವು ತೊದಲುತ್ತಾ ಮಾತನಾಡೊದರೂ ಜನರು ಅವರ ಮಾತನ್ನು ಗಮನವಿಟ್ಟು ಕೇಳುತ್ತಾರೆ.ಅವರೇ ಜೊಮಾಟೋ ಕಂಪನಿಯ ಸಂಸ್ಥಾಪಕ ದೀಪೇಂದರ್ ಗೋಯಲ್.
ಗೋಯಲ್ ಜನವರಿ 26, 1983 ರಂದು ಭಾರತದ ಪಂಜಾಬ್ನ ಮುಕ್ತಸರ್ನಲ್ಲಿ ಜನಿಸಿದರು. ಅವರು 2005 ರಲ್ಲಿ ದೆಹಲಿಯ ಐ ಐಟಿ ಗಣಿತ ಮತ್ತು ಕಂಪ್ಯೂಟಿಂಗ್ನಲ್ಲಿ ಎಂ.ಟೆಕ್ ಪದವಿ ಪಡೆದ
ನಂತರ ಜನವರಿ 2006 ರಲ್ಲಿ ಬೈನ್ ಅಂಡ್ ಕಂಪನಿಯಲ್ಲಿ ಹಿರಿಯ ಸಹಾಯಕ ಸಲಹೆಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಬೈನ್ನಲ್ಲಿದ್ದಾಗ ಗೋಯಲ್ ತಮ್ಮ ಸಹೋದ್ಯೋಗಿ ಪಂಕಜ್ ಅವರೊಂದಿಗೆ ಆಹಾರ ಆರ್ಡರ್ಗಳಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅನಾನುಕೂಲತೆಯಿಂದ ಪ್ರೇರಿತರಾಗಿ ಜೊಮ್ಯಾಟೊದ ಕಲ್ಪನೆಯನ್ನು ರೂಪಿಸಿದರು. ಬೈನ್ ಉದ್ಯೋಗಿಗಳಿಗೆ ಆಹಾರ ಆರ್ಡರ್ ಮಾಡುವ ವೆಬ್ಸೈಟ್ ಎಂಬ ಅವರ ಆರಂಭಿಕ ಯೋಜನೆಯು ಯಶಸ್ವಿಯಾಯಿತು. ಇದು 2008 ರಲ್ಲಿ ಜೊಮ್ಯಾಟೊ ಸ್ಥಾಪನೆಗೆ ಕಾರಣವಾಯಿತು.
ಆರಂಭದಲ್ಲಿ ಫುಡೀಬೇ ಎಂದು ಹೆಸರಿಸಲಾದ ಜೊಮ್ಯಾಟೊ ಭಾರತೀಯ ಬಹುರಾಷ್ಟ್ರೀಯ ರೆಸ್ಟೋರೆಂಟ್ ಸಂಗ್ರಾಹಕ ಮತ್ತು ಆಹಾರ ವಿತರಣಾ ಕಂಪನಿಯಾಗಿದೆ. ಇದು ಗ್ರಾಹಕರು, ರೆಸ್ಟೋರೆಂಟ್ ಪಾಲುದಾರರು ಮತ್ತು ವಿತರಣಾ ಪಾಲುದಾರರನ್ನು ಸಂಪರ್ಕಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಜೊಮ್ಯಾಟೊ ಜಾಗತಿಕವಾಗಿ ವಿಸ್ತರಿಸಿದೆ.ಸುಮಾರು 22 ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಮಗ್ರ ರೆಸ್ಟೋರೆಂಟ್ ಮಾಹಿತಿ, ಮೆನು ವಿವರಗಳು, ಬೆಲೆ ಮತ್ತು ವಿಮರ್ಶೆಗಳನ್ನು ನೀಡುತ್ತದೆ.
ಗೋಯಲ್ ಅವರ ನಾಯಕತ್ವದಲ್ಲಿ, ಜೊಮಾಟೊ ಪೋಲೆಂಡ್ನಲ್ಲಿ ಗ್ಯಾಸ್ಟ್ರೋನೌಸಿ , ಇಟಲಿಯಲ್ಲಿ ಸಿಬಾಂಡೋ ಮತ್ತು ಭಾರತದಲ್ಲಿ ಬ್ಲಿಂಕಿಟ್ ಗಳ ಸ್ವಾಧೀನಗಳ ಮೂಲಕ ತನ್ನ ಜಾಗತಿಕ ಉಪಸ್ಥಿತಿಯನ್ನು ಬೆಳೆಸಿಕೊಂಡಿದೆ.
ಝೊಮಾಟೊದ ಯಶಸ್ಸು ಕಂಡು ಸುಮ್ಮನೆ ಕೂರದ ಗೋಯಲ್ ಮೇನ್ಸ್ಟ್ರೀಟ್, ಗ್ಯಾಬಿಟ್, ಥೆರಾಡೊ, ಶಿಪ್ರಾಕೆಟ್, ಬ್ಲಿಂಕಿಟ್, ಬಿರಾ 91, ಹೈಪರ್ಟ್ರಾಕ್, ಟೆರ್ರಾಡೊ, ಚೆಫ್ಕಾರ್ಟ್, ಸ್ಕ್ವಾಡ್ಸ್ಟ್ಯಾಕ್ ಮತ್ತು ಅನ್ಅಕಾಡೆಮಿ ಸೇರಿದಂತೆ ವಿವಿಧ ಸ್ಟಾರ್ಟ್ಅಪ್ಗಳಲ್ಲಿ ಹೂಡಿಕೆ ಮಾಡಿದ್ದಾರೆ.
ಇವರ ಸಾಧನೆಯನ್ನು ಗುರ್ತಿಸಿದ ಹಲವಾರು ಸಂಸ್ಥೆಗಳು ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
೨೦೧೧ ರಲ್ಲಿ, ಗೋಯಲ್ ಅವರಿಗೆ ಎಕನಾಮಿಕ್ ಟೈಮ್ಸ್ ಸ್ಟಾರ್ಟ್ಅಪ್ ಆಫ್ ದಿ ಇಯರ್ ಪ್ರಶಸ್ತಿ ೨೦೧೨ ರಲ್ಲಿ ಬಿಸಿನೆಸ್ ಟುಡೇ ಯಂಗ್ ಬಿಸಿನೆಸ್ ಲೀಡರ್ ಪ್ರಶಸ್ತಿ,೨೦೧೮ ರಲ್ಲಿ ಐಐಟಿ ದೆಹಲಿಯಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಿ ಪ್ರಶಸ್ತಿ, ೨೦೧೯ ರಲ್ಲಿ ವರ್ಷದ ಜಿಕ್ಯೂ ಪುರುಷರ ಪ್ರಶಸ್ತಿ ಸ್ವೀಕರಿಸಿದ್ದಾರೆ. 2020 ರಲ್ಲಿ ಗೋಯಲ್ ಫಾರ್ಚೂನ್ ಇಂಡಿಯಾ 40 ವರ್ಷದೊಳಗಿನವರ ಪಟ್ಟಿಯಲ್ಲಿ ಸೇರಿಸಲಾಯಿತು.ಅವರು 2023 ರ EY ಉದ್ಯಮಿ ಪ್ರಶಸ್ತಿಗೆ ಅಂತಿಮ ಸ್ಪರ್ಧಿಯೂ ಆಗಿದ್ದರು.
ಗೋಯಲ್ ಅವರು ಐಐಟಿ ದೆಹಲಿಯಲ್ಲಿ ಕಾಲೇಜು ವರ್ಷಗಳಲ್ಲಿ ಭೇಟಿಯಾದ ಕಾಂಚನ್ ಜೋಶಿ ಅವರನ್ನು ವಿವಾಹವಾಗಿದ್ದು. ಅವರಿಗೆ ಸಿಯಾರಾ ಎಂಬ ಮಗಳಿದ್ದಾಳೆ.ಇತ್ತೀಚಿಗೆ ಮಾಧ್ಯಮದವರ ಜೊತೆಯಲ್ಲಿ ಮುಕ್ತವಾಗಿ ಮಾತನಾಡಿದ ಗೋಯಲ್ ರವರು ತಮ್ಮ ಆದ್ಯತೆ, ಮುಂದಿನ ಗುರಿಗಳ ಬಗ್ಗೆ ವಿವರ ನೀಡಿದ್ದಾರೆ.
ಜೋಮಾಟೊದಲ್ಲಿ ಯಾವುದೇ ತ್ರೈಮಾಸಿಕ ಅಥವಾ ವಾರ್ಷಿಕ ಗುರಿಗಳಿಲ್ಲ ಗುರಿಗಳನ್ನು ನಿಗದಿಪಡಿಸುವುದರಿಂದ ಜನರು ತಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.
ಬ್ಲಿಂಕಿಟ್ ಸೇವೆಯು ದೀಪಿಂದರ್ ಅವರಿಗೆ ವೈಯಕ್ತಿಕವಾಗಿ ತುಂಬಾ ಇಷ್ಟವಾಗಿದ್ದರಿಂದ ಗೆಳೆಯ ಅಲ್ಬಿಂದರ್ ಧಿಂದ್ಸಾ ಅವರಿಂದ ಖರೀದಿಸಿದರು. ಪ್ರಸ್ತುತ ಜೋಮಾಟೊ ಮತ್ತು ಬ್ಲಿಂಕಿಟ್ನಲ್ಲಿ 7,50000 ಕೆಲಸಗಾರರಿಗೆ ಉದ್ಯೋಗ ನೀಡಿದೆ. ಒಬ್ಬ ಸವಾರ ದಿನಕ್ಕೆ 8 ರಿಂದ 10 ಗಂಟೆ ಕೆಲಸ ಮಾಡಿದರೆ ತಿಂಗಳಿಗೆ ₹25,000 ಕ್ಕಿಂತ ಹೆಚ್ಚು ಗಳಿಸಬಹುದು ಎಂದು ಅವರು ತಿಳಿಸಿದ್ದಾರೆ.
ಇತರೆ ಡೆಲಿವರಿ ಕಂಪನಿಗಳಿಗಿಂತ ಜೊಮಾಟೊ 10 ನಿಮಿಷಗಳ ಡೆಲಿವರಿ ನೀಡುವ ಬಗ್ಗೆ ಕೇಳಿದಾಗ ಇದು ಸವಾರರ ಬರವೇಗದಿಂದ ಸಾಧ್ಯವಾಗುತ್ತಿಲ್ಲ ಬದಲಾಗಿ ಮಳಿಗೆಗಳ ಸಾಂದ್ರತೆಯಿಂದ ಸಾಧ್ಯವಾಗುತ್ತಿದೆ. ಸವಾರರಿಗೆ ಯಾವುದೇ ಸಮಯದ ಮಿತಿಯನ್ನು ನೀಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಷ್ಟಕ್ಕೇ ನಿಲ್ಲದ ಗೋಯಲ್ ರವರ ವಿಷನ್ ವಿಸ್ತರಿಸುತ್ತಲೇ ಇದೆ.
ಸಣ್ಣ ವಿಮಾನಗಳನ್ನು ತಯಾರಿಸುವ ಯೋಜನೆಗಾಗಿ ದೀಪಿಂದರ್ ಅವರು 50 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಬದ್ಧರಾಗಿದ್ದಾರೆ. ಇದು ನಗರಗಳ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಅವರ ಆಶಯ.ಮೆದುಳಿಗೆ ರಕ್ತದ ಹರಿವನ್ನು ಮೇಲ್ವಿಚಾರಣೆ ಮಾಡುವ ಟೆಂಪಲ್ ಎಂಬ ಮತ್ತೊಂದು ಸಾಧನ ಆವಿಷ್ಕಾರಕ್ಕೆ ಕೈಹಾಕಿದ್ದಾರೆ. ಭೂಮಿಯ ಗುರುತ್ವಾಕರ್ಷಣೆಯು ನಮ್ಮ ವಯಸ್ಸಾಗುವ ಪ್ರಕ್ರಿಯೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸಂಶೋಧಿಸುವುದು ಇದರ ಉದ್ದೇಶ.
ದೀಪಿಂದರ್ ಗೋಯಲ್ ಅವರ ವ್ಯವಹಾರ ಶೈಲಿಯು ಬಲು ವಿಭಿನ್ನ ಅದಕ್ಕೆ ಅವರು ಈ ಎತ್ತರಕ್ಕೆ ಏರಿದ್ದಾರೆ. ಅವರ ವ್ಯವಹಾರ ಶೈಲಿಯನ್ನು ಹೀಗೆ ಹೇಳಬಹುದು ಒಂದು ರೇಸ್ ಕಾರ್ ಎಂಜಿನ್ ಎಷ್ಟು ದೂರ ಹೋಗಬೇಕು ಎಂದು ಅವರು ಮೊದಲೇ ಗುರಿಯೊಂದಿಗೆ ನಿರ್ಧರಿಸುವುದಿಲ್ಲ. ಆದರೆ ಪ್ರತಿ ಭಾಗವೂ ಅತ್ಯಂತ ನಿಖರವಾಗಿ ಮತ್ತು ತೀವ್ರತೆಯಿಂದ ಕೆಲಸ ಮಾಡಬೇಕೆಂದು ಅವರು ಬಯಸುತ್ತಾರೆ.ಆಗ ಮಾತ್ರ ಕಾರು ಯಾರಿಗೂ ತಲುಪಲಾಗದ ವೇಗವನ್ನು ತಲುಪಲು ಸಾಧ್ಯವಾಗುತ್ತದೆ.
ಗೋಯಲ್ ನಮ್ಮ ನೆಲದ ನಕ್ಷತ್ರ! ಇಂತಹ ಸಾವಿರಾರು ನಕ್ಷತ್ರಗಳಿಗೆ ಗೋಯಲ್ ಸ್ಪೂರ್ತಿಯಾಗಲಿ ಎಂಬುದೇ ನಮ್ಮೆಲ್ಲರ ಆಶಯ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
08 ಜನವರಿ 2026
ಪೋರಿಯಲ್ಲ ಹೆಂಗಸು!
ನಿನ್ನೆ ಸಂಜೆ ಪಾರ್ಕ್ ನಲ್ಲಿ ವಾಕ್ ಮಾಡುವಾಗ ಈ ಪುಟ್ಟ ಪೋರಿಯ ಕಂಡೆ ಕಂಕುಳಲ್ಲೊಂದು ಬೊಂಬೆ ಎತ್ತಿಕೊಂಡು ಆ ಬೊಂಬೆಯೊಂದಿಗೆ ಮಾತನಾಡುತ್ತಾ ವಾಕ್ ಮಾಡುತ್ತಿತ್ತು ನಾನು ದೂರದಿಂದಲೇ ಗಮನಿಸಿ ಖುಷಿ ಪಟ್ಟೆ.ಮಕ್ಕಳ ಆಟವೇ ನೋಡಲು ಚೆಂದ. ನನಗೆ ನನ್ನ ಬಾಲ್ಯ ನೆನಪಾಯಿತು ನಾವೂ ಹೀಗೆಯೇ ಗೊಂಬೆಗಳಿಗೆ ಮದುವೆ ಮಾಡಿ.ಆಟ ಆಡಿದ ಸವಿನೆನಪುಗಳು ಮಧುರ. ಆ ಬಾಲಕಿ ನಾನು ದೊಡ್ಡ ಹೆಂಗಸು ಅಂದುಕೊಂಡು ಹೆಂಗಸಿನ ಪಾತ್ರದಲ್ಲಿ ಆಟವಾಡುತ್ತಿತ್ತು.ಇದಕ್ಕೆ ಒಂದು ಸಾಕ್ಷಿ ಕೈಯಲ್ಲಿರುವ ಬೊಂಬೆ. ಇನ್ನೂ ಎರಡು ವಸ್ತುಗಳನ್ನು ಆ ಬಾಲಕಿ ನಾನು ದೊಡ್ಡ ಹೆಂಗಸು ಎಂದು ಬಿಂಬಿಸಿಕೊಳ್ಳಲು ಬಳಸಿದೆ. ಆ ವಸ್ತುಗಳು ಯಾವು ಕಾಮೆಂಟ್ ಮಾಡಿ ಹೇಳಿ.
#sihijeevi #childhood #children #play #playtime
05 ಜನವರಿ 2026
ರಾಷ್ಟ್ರೀಯ ಪಕ್ಷಿಗಳ ದಿನ
ರಾಷ್ಟ್ರೀಯ ಪಕ್ಷಿಗಳ ದಿನ
ದೇಶಾದ್ಯಂತ ಪ್ರಕೃತಿ ಪ್ರಿಯರು, ಪಕ್ಷಿ ಪ್ರಿಯರು ಮತ್ತು ಪಕ್ಷಿ ವೀಕ್ಷಕರು ವಾರ್ಷಿಕವಾಗಿ ಜನವರಿ 5 ರಂದು ರಾಷ್ಟ್ರೀಯ ಪಕ್ಷಿ ದಿನವನ್ನು ಆಚರಿಸುತ್ತಾರೆ. ಅಮೆರಿಕ ದ ಬಾರ್ನ್ ಫ್ರೀ ಎಂಬ ಸಂಸ್ಥೆಯ ಪ್ರಯತ್ನ ದ ಪರಿಣಾಮವಾಗಿ ರಾಷ್ಟ್ರೀಯ ಪಕ್ಷಿ ದಿನವನ್ನು ಆಚರಿಸಲಾಗುತ್ತದೆ.
ಇದು ಬಂಧಿತ ಮತ್ತು ಕಾಡು ಪಕ್ಷಿಗಳ ರಕ್ಷಣೆ ಮತ್ತು ಉಳಿವಿಗೆ ನಿರ್ಣಾಯಕ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ದಿನವಾಗಿದೆ.
ಬಾರ್ನ್ ಫ್ರೀ ಸಂಸ್ಥೆಯ ಪ್ರಕಾರ ವಿಶ್ವದ ಸುಮಾರು 10,000 ಪಕ್ಷಿ ಪ್ರಭೇದಗಳಲ್ಲಿ ಸುಮಾರು 12 ಪ್ರತಿಶತ ಅಳಿವಿನ ಅಪಾಯದಲ್ಲಿದೆ.ಇವುಗಳ ಸಂರಕ್ಷಣೆ ನಮ್ಮ ಕರ್ತವ್ಯ. ಇದಕ್ಕೆ ಈ ಕೆಳಗಿನ ಚಟುವಟಿಕೆಗಳಲ್ಲಿ ನಾವು ಪಾಲ್ಗೊಳ್ಳಬಹುದು.
ಪಕ್ಷಿ ವೀಕ್ಷಣೆ,ಪಕ್ಷಿಗಳನ್ನು ಅಧ್ಯಯನ ಮಾಡುವುದು,ಇತರರಿಗೆ ಶಿಕ್ಷಣ ನೀಡುವುದು,ಇತರ ಪಕ್ಷಿ ಸಂಬಂಧಿತ ಚಟುವಟಿಕೆಗಳು,ರಾಷ್ಟ್ರೀಯ ಪಕ್ಷಿ ದಿನದ ಒಂದು ಪ್ರಮುಖ ಚಟುವಟಿಕೆಯೆಂದರೆ ಪಕ್ಷಿ ದತ್ತು ಸ್ವೀಕಾರ ಮಾಡುವುದು.
ಅಟ್ಲಾಂಟಾ ಜರ್ನಲ್ ಕಾನ್ಸ್ಟಿಟ್ಯೂಷನ್ ಪತ್ರಿಕೆಯ ಲೇಖನದ ಪ್ರಕಾರ, ಅನೇಕ ಪಕ್ಷಿ ಉತ್ಸಾಹಿಗಳು ಈ ದಿನದಂದು ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಆಚರಿಸುತ್ತಾರೆ. ಅವರು ಭವಿಷ್ಯದ ಪಕ್ಷಿ ಮಾಲೀಕರಿಗೆ ಪಕ್ಷಿಗಳ ಆರೈಕೆಯಲ್ಲಿ ಒಳಗೊಂಡಿರುವ ವಿಶೇಷ ಸಮಸ್ಯೆಗಳ ಬಗ್ಗೆ ಶಿಕ್ಷಣ ನೀಡುತ್ತಾರೆ, ಅವುಗಳಲ್ಲಿ "ಸರಿಯಾದ ಆರೈಕೆ, ಶುಚಿಗೊಳಿಸುವಿಕೆ, ಶಬ್ದ ಮತ್ತು ಕಚ್ಚುವಿಕೆ, ಆಹಾರ, ಆಹಾರ ಮತ್ತು ದೈನಂದಿನ ಸಂವಹನದ ಅಗತ್ಯತೆ" ಸೇರಿವೆ.
ನನಗೆ ವೈಯಕ್ತಿಕವಾಗಿ ಗುಬ್ಬಚ್ಚಿ ಇಷ್ಟ ನಿಮಗೆ ಯಾವ ಪಕ್ಷಿ ಇಷ್ಟ ಎಂದು ತಿಳಿಸಬಹುದು.
ಸಿಹಿಜೀವಿ ವೆಂಕಟೇಶ್ವರ




