01 ನವೆಂಬರ್ 2018

ಕನ್ನಡ ಓರಾಟಗಾರ (ನ್ಯಾನೋ ಕಥೆ)

                *ನ್ಯಾನೋ ಕಥೆ*

*ಕನ್ನಡ ಓರಾಟಗಾರ*

"ನಮ್ಮ ನಾಡು ನಮ್ಮ ನುಡಿಯ ಬಗ್ಗೆ ನಾವು ಅಭಿಮಾನ ಪಡದಿದ್ದರೆ ಮತ್ಯಾರು ಬರುವರು? ನಮ್ಮ ಭಾಷೆ ಉಳಿಸಲು ಕನ್ನಡ ಪತ್ರಿಕೆಗಳನ್ನು, ಪುಸ್ತಕಗಳನ್ನು ಕೊಂಡು ಓದಬೇಕು.ಕನ್ನಡ ಶಾಲೆಗಳ ಬಲಪಡಿಸಬೇಕು" ಎಂದು ಸಮಾರಂಭದಲ್ಲಿ ಭಾಷಣ ಮಾಡಿದ ರಮೇಶನು  ಸನ್ಮಾನ ಸ್ವೀಕರಿಸಿ ಮನೆಗೆ ಬಂದ
"ಅಪ್ಪ ಇಲ್ಲಿದ್ದ ಟೈಮ್ಸ್ ಆಪ್ ಇಂಡಿಯಾ ಪೇಪರ್ ನೋಡಿದೆಯಾ?  " ಎಂದು ಮಗಳು ಕೇಳುವ  ಹೊತ್ತಿಗೆ  ಮಗ "ನಾಳೆ ನಮ್ಮ ಕಾನ್ವೆಂಟ್ ನಲ್ಲಿ ಪೇರೆಂಟ್ಸ್ ಮೀಟಿಂಗ್ ಇದೆ ನೀನು ಮಮ್ಮಿ ಬರಬೇಕಂತೆ " ಅಂದ .

*ಸಿ.ಜಿ ವೆಂಕಟೇಶ್ವರ*
*ಗೌರಿಬಿದನೂರು*

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ