30 ಮಾರ್ಚ್ 2020

ವಿಮರ್ಶೆ


ಲಾಕ್ ಡೌನ್ ನ ಸದುಪಯೋಗ

ಕರೋನ ಪ್ರಯುಕ್ತ ಲಾಕ್ ಡೌನ್‌‌ ಇರುವ ಈ ಸಂಧರ್ಭದಲ್ಲಿ ನಾನು ನನ್ನ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಮೂಲಕ ಲಾಕ್ ಡೌನ್ ನನಗೆ ವರವಾಗಿದೆ ಎಂದು ಭಾವಿಸಿರುವೆ.
ಈ ಮೊದಲು ತಂದಿಟ್ಟು ಓದಲಾಗದ ಪುಸ್ತಕಗಳನ್ನು ಓದಲು ಆರಂಬಿಸಿ "ಸ್ವಾಮಿಜಗದಾತ್ಮಾನಂದಜಿ" ಅವರ ಬರೆದ "ಬದುಕಲು ಕಲಿಯಿರಿ" ಪುಸ್ತಕ ಓದಿ ಮುಗಿಸಿ ಈಗ  ರಿಚರ್ಡ್ ಕಾರ್ಲಸನ್ ಬರೆದಿರುವ "ಎಷ್ಟೊಂದು ಸೊಗಸು ಈ ಬದುಕು ಎಂಬ ಪುಸ್ತಕ ಓದುತ್ತಿದ್ದೇನೆ".ನಾನು ವೃತ್ತಿಯಲ್ಲಿ ಶಿಕ್ಷಕನಾಗಿದ್ದು , ಜೊತೆಗೆ  ಕವಿಯೂ ಆಗಿದ್ದು ಹಾಗೂ ಹವ್ಯಾಸಿ  ಬ್ಲಾಗರ್ ಆಗಿರುವುದರಿಂದ ನನ್ನ ಬ್ಲಾಗ್ ನಲ್ಲಿ  ಕವನ, ನ್ಯಾನೋ ಕಥೆ,ಶೈಕ್ಷಣಿಕ ಲೇಖನ, ಗಜ಼ಲ್, ಶಿಶುಗೀತೆ,ಹನಿಗವನ,ಮುಂತಾದ ಸಾಹಿತ್ಯದ ರಚನೆ ಮಾಡಲು ನನಗೆ ಈ ಕಾಲ ಬಹಳ ಅನುಕೂಲವಾಯಿತು.ಲಾಕ್ ಡೌನ್ ನ ಈವರೆಗಿನ ಐದು ದಿನದಲ್ಲಿ ದಿನಕ್ಕೆ ಸರಾಸರಿ ಎರಡು ಸಾಹಿತ್ಯದ ರಚನೆ ಮಾಡಿರುವುದು, ಮತ್ತು ಇದಕ್ಕೆ ಪ್ರಪಂಚಾದ್ಯಂತ ಇರುವ ಓದುಗರು ಓದಿ ಆಸ್ವಾದಿಸಿ ಮೆಚ್ಚುಗೆ ಸೂಚಿಸಿರುವುದು  ಬಹಳ ಸಂತಸ ನೀಡಿದೆ.ನೀವು ಲಾಕ್ ಡೌನ್ ಸಮಯದಲ್ಲಿ ನನ್ನ ಬ್ಲಾಗ್ ಗೆ ಭೇಟಿ ನೀಡಿ ನನ್ನ ಬರಹಗಳನ್ನು ಓದಬಹುದು.
ಬ್ಲಾಗ್ ವಿಳಾಸ sridevitanya.blogspot. com
ವಂದನೆಗಳೊಂದಿಗೆ
ಸಿ ಜಿ ವೆಂಕಟೇಶ್ವರ
ಶಿಕ್ಷಕರು
ಸರ್ಕಾರಿ ಪ್ರೌಢಶಾಲೆ
ಕ್ಯಾತಸಂದ್ರ
ತುಮಕೂರು
9900925529

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ