ಕುದುರೆಗೊಂದು ದಿನ
ಆಕರ್ಷಕವಾಗಿ ಕಾಣುವ ಹಲವು ಪ್ರಾಣಿಗಳಲ್ಲಿ ಕುದುರೆಯೂ ಒಂದು. ಮಹಾರಾಜರು ಕುದುರೆ ಏರಿ ಹೊರಟರೆ ಆ ಗತ್ತೇ ಬೇರೆ. ಸೈನಿಕರ ,ಸಾರಿಗೆಯ ಬಹು ಮುಖ್ಯ ಪ್ರಾಣಿಯಾಗಿದ್ದ ಕುದುರೆ ಅಶ್ವ ಮೇಧಯಾಗಕ್ಕೂ ಸಿದ್ದ ವಾಗಿದ್ದನ್ನ ಕಂಡಿದ್ದೇವೆ.ಇಂತಹ ಬಹುಪಯೋಗಿ ಕುದುರೆ ಈಗ ರೇಸ್ ಓಡುವ ಕುದುರೆಯಾಗಿ ಜೂಜಿಗೆ ಸೀಮಿತವಾಗಿದೆ.
ಅಶ್ವ ,ವಾಜಿ ,ತುರುಗ, ಎಂಬಿತ್ಯಾದಿ ನಾಮಗಳಿಂದ ಪರಿಚಿತವಾದ ಕುದುರೆಗೂ ವಿಶ್ವ ಸಂಸ್ಥೆ ಒಂದು ದಿನ ನಿಗದಿ ಮಾಡಿ ಪ್ರತಿ ವರ್ಷವೂ ಆಚರಿಸಲು ಅನುವು ಮಾಡಿಕೊಟ್ಟಿದೆ. ಪ್ರತಿವರ್ಷ ಡಿಸೆಂಬರ್ 13 ರಂದು ರಾಷ್ಟ್ರೀಯ ಕುದುರೆ ದಿನವಾಗಿ ಆಚರಿಸಲಾಗುತ್ತದೆ.
ಕುದುರೆಗೆ, ರಾಜಕೀಯ, ಸಾಮಾಜಿಕ, ಆರ್ಥಿಕ, ಧಾರ್ಮಿಕ ಮಹತ್ವವಿದೆ. ಜಾನಪದರ ಬಾಯಲ್ಲಿ ಕುದುರೆ ನಲಿದಾಡಿದೆ.
ಕುದುರೆಯ ಹೆಸರಲ್ಲಿ ಕನ್ನಡದ ಹಲವಾರು ಹಾಡುಗಳು ಬಂದಿವೆ. "ಕುದುರೆ ಏರಿ ಸೂರ್ಯ ಬಂದವ್ನೆ...." ಎಂಬ ಲಾಲಿ ಹಾಡು ಚಿತ್ರದ ಹಾಡು ಈಗಲೂ ಕಿವಿಯಲ್ಲಿ ಗುಂಯ್ಗುಡುತ್ತದೆ. "ಕಾಡು ಕುದುರೆ ಓಡಿ ಬಂದಿತ್ತಾ...." ಎಂಬ ಹಾಡಿನಲ್ಲಿ ಶಿವಮೊಗ್ಗ ಸುಬ್ಬಣ್ಣ ರವರ ಧ್ವನಿಯು ಎಲ್ಲರನ್ನೂ ಆಕರ್ಷಿಸಿದ್ದು ಸುಳ್ಳಲ್ಲ. ಎಲ್ಲಾ ಆರ್ಕೆಸ್ಟ್ರಾಗಳಲ್ಲಿ ಈಗಲೂ ಅತಿ ಹೆಚ್ಚು ಬೇಡಿಕೆಯ ಹಾಡು ಅಣ್ಣಾವ್ರ "ಹೃದಯ ಸಮುದ್ರ ಕಲಕಿ ಹೊತ್ತಿದ ದ್ವೇಷದ ಬೆಂಕಿ..." ಅಶ್ವದೊಂದಿಗೆ ಚಿತ್ರಿತವಾದ ಈ ಹಾಡನ್ನು ಈಗ ನೋಡಿದರೂ ರೋಮಾಂಚನವಾಗುತ್ತದೆ.
ಇನ್ನೂ "ಕುದುರೇನ ತಂದೀನಿ ಜೀನಾವಾ ಬಿಗಿದೀನಿ ಬರಬೇಕು ತಂಗಿ ಮದುವೇಗೆ" ಜಾನಪದ ಗೀತೆ ಯಾರು ಕೇಳಿಲ್ಲ ಹೇಳಿ?
ಇತ್ತೀಚಿನ ಶಿವಣ್ಣ ಅಭಿನಯದ ಕವಚ ಚಿತ್ರದ "ರೆಕ್ಕೆಯ ಕುದುರೆ ಏರಿ..." ಹಾಡು ಸುಮಧುರ.
ಹೀಗೆ ಕುದುರೆಯ ಮೇಲೆ ಬಂದಿರುವ ಹಾಡುಗಳು ಒಂದಕ್ಕಿಂತ ಒಂದು ಸುಮಧುರ ಮತ್ತು ಅರ್ಥಗರ್ಭಿತ. ಮುಂದೆಯೂ ನಾಟಕಗಳಲ್ಲಿ ಮತ್ತು ಸಿನಿಮಾದಲ್ಲಿ ಇನ್ನೂ ಹೆಚ್ಚಿನ ಕುದುರೆ ಹಾಡುಗಳ ನಿರೀಕ್ಷೆ ಮಾಡೋಣ...
ಎಲ್ಲರಿಗೂ ಅಂತರರಾಷ್ಟ್ರೀಯ ಕುದುರೆ ದಿನದ ಶುಭಾಶಯಗಳು..
ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ