*ಮಕರ ಸಂಕ್ರಾಂತಿಯ ಪುರಾಣ ಐತಿಹ್ಯ*
1) ಈದಿನ ಭಗೀರಥನು ತಪಸ್ಸು ಮಾಡಿ ಶಿವನ ಜಟೆಯಿಂದ ಗಂಗೆಯನ್ನು ಭೂಮಿಗೆ ತಂದ ದಿನ,
2) ಮಹಾಭಾರತದ ಆದಿಪರ್ವದಲ್ಲಿ, ದಕ್ಷಪ್ರಜಾಪತಿಯ ಮಗಳು ವಸುವಿನ ಎಂಟು ಮಕ್ಕಳಾದ ಧರ, ಧ್ರುವ, ಸೋಮ, ಅಹ, ಅನಿಲ, ಅನಲ, ಪ್ರತ್ಯೂಷ, ಪ್ರಭಾಸ ಎಂಬ ಇವರು ಒಮ್ಮೆ ವಸಿಷ್ಠ ಮಹರ್ಷಿಯ ಆಶ್ರಮದಲ್ಲಿ ಸಂಚರಿಸುತ್ತ, ನಂದಿನೀ ಧೇನುವನ್ನು ಕದ್ದೊಯ್ಯಲು ಹವಣಿಸಿ, ವಸಿಷ್ಠರಿಂದ ಶಾಪಗ್ರಸ್ತರಾಗಿ ಭೂಲೋಕದಲ್ಲಿ ಶಂತನುವಿನ ಹೆಂಡತಿ ಗಂಗೆಯ ಅಷ್ಟ ಮಕ್ಕಳಾಗಿ ಹುಟ್ಟಿದರು.
ಹಿರಿಯವನಾದ ಧರನೇ ಭೀಷ್ಮನಾಗಿ ಜನ್ಮವೆತ್ತಿದ. ಈದಿನ ಭೀಷ್ಮರ ಆತ್ಮವು ಶರಶಯ್ಯಯಿಂದ ದೇಹತ್ಯಾಗ ಮಾಡಿ ಶಾಪದಿಂದ ವಿಮೋಚನೆ ಆದ ದಿನ
3) ಈದಿನ ಭಾಗಿರತಿಯು ಕಪಿಲರ ಆಶ್ರಮದಲ್ಲಿ ಸುಟ್ಟು ಕರಕಲಾಗಿ ಭೂದಿಯಾದ ಸಗರನ ಒಂದು ಸಾವಿರ ಮಕ್ಕಳ ಅಸ್ಥಿಗಳು ಗಂಗೆಯಲ್ಲಿ ಸಂಚಯನವಾಗಿ ಮೋಕ್ಷ ಹೊಂದಿದ ದಿನ
4) ಈದಿನ ಗಂಗೆಯು ಸಾಗರ ಸೇರಿದ ದಿನ.
5) ಈ ದಿನ ಸೂರ್ಯ ಧನುರ್ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಉತ್ತರಾಯಣ ಪುಣ್ಯಕಾಲದ ಪರ್ವದಿನ, ಆಸ್ಥೀಕರು ಸೂರ್ಯನನ್ನು ಪ್ರಾರ್ಥಿಸುತ್ತಾರೆ.
6) ಈದಿನ ಆಸ್ತಿಕರು ಗಂಗಾ , ಯಮುನಾ , ಗೋದಾವರಿ , ಕೃಷ್ಣ ಮತ್ತು ಕಾವೇರಿ ನದಿಗಳಲ್ಲಿ, ಪುಣ್ಯ ನದಿಗಳ ಸಂಗಮ ಕ್ಷೇತ್ರಗಳಲ್ಲಿ ಪವಿತ್ರ ಸ್ನಾನ ಮಾಡಿ ತರ್ಪಣಾದಿ ಪಿತೃ ಕಾರ್ಯ ಮಾಡಿದರೆ ಪಾಪ ವಿಮೋಚನೆಯಾಗುತ್ತದೆ ಎಂದು ನಂಬಲಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ