30 ಜುಲೈ 2025

ಸರ್ಕಾರಿ ಕೆಲಸ ಪಡೆದ ರೈತನ ಮೂರೂ ಮಕ್ಕಳು.


 



 ಕೆಲಸ ಸಿಗಲಿಲ್ಲ  ಎಂದು ಪರಿತಪಿಸುತ್ತಾ  ಸರ್ಕಾರಿ ಉದ್ಯೋಗ ಪಡೆಯಲು  ಪರದಾಡುತ್ತಿರುವ ಮಧ್ಯೆಸಾಮಾನ್ಯ ರೈತ ಕುಟುಂಬದ ಮೂವರು ಒಡಹುಟ್ಟಿದವರು ಸರ್ಕಾರಿ ನೌಕರಿ ಗಿಟ್ಟಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಮೂಲಕ ತಂದೆಯ ಕನಸನ್ನು ಈ  ಮೂವರು ಮಕ್ಕಳು ಈಡೇರಿಸಿದ್ದಾರೆ.


ಕರೀಂನಗರ ಜಿಲ್ಲೆಯ ವೀನವಂಕ ಬಳಿಯ ರೆಡ್ಡಿಪಲ್ಲಿ ಗ್ರಾಮದ ಪೊತುಲು ಇಂದಿರಾ ಮತ್ತು ಚಂದ್ರೈ ದಂಪತಿಯ ಮೂವರೂ ಮಕ್ಕಳು ಸರ್ಕಾರಿ  ಹುದ್ದೆ ಪಡೆದಿದ್ದಾರೆ. 2 ಎಕರೆಯಲ್ಲಿ ದಂಪತಿ ಕೃಷಿ ಜೊತೆಗೆ ಕೂಲಿ ಕೆಲಸ ಮಾಡುತ್ತಾ ಕಷ್ಟಪಟ್ಟು ಮಕ್ಕಳನ್ನು ಓದಿಸಿದ್ದರು. ಎಲ್ಲ ಪೋಷಕರು ಬಯಸುವಂತೆ  ತಮ್ಮ ಮಕ್ಕಳನ್ನು ಸರ್ಕಾರಿ ಕೆಲಸಕ್ಕೆ ಸೇರಿಸಬೇಕು ಎಂದು ತಂದೆ ಕನಸು ಕಂಡಿದ್ದರು.


ಸರ್ಕಾರಿ ಶಾಲೆಯಲ್ಲೇ ಕಲಿತು ಸರ್ಕಾರಿ ಉದ್ಯೋಗ ಪಡೆದ ಮಕ್ಕಳ ಸಾಧನೆ ಕಂಡ ಪೋಷಕರು ಆನಂದ ಭಾಷ್ಪ ಸುರಿಸಿದ್ದಾರೆ.

 ಓರ್ವ ಮಗ ಸಿಆರ್​ಪಿಎಫ್ ಅಸಿಸ್ಟಂಟ್ ಕಮಾಂಡರ್, ಇನ್ನೊಬ್ಬ ಸಿಐಎಸ್​ಪಿ ಕಾನ್ಸ್​ಟೇಬಲ್ ಮತ್ತು ಪುತ್ರಿ ಅಬಕಾರಿ ಕಾನ್ಸ್​ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.


ಈ ರೈತನ ಹಿರಿಯ ಮಗ ಎಂ ಬಿ ಬಿ ಎಸ್ ಓದಿದದರೂ ಸರ್ಕಾರಿ ಹುದ್ದೆ ಸಿಗದ ಕಾರಣದಿಂದ ಡಾಕ್ಟರ್ ಹುದ್ದೆ ತೊರೆದು ತಂದೆಯ ಆಸೆಯಂತೆ ಸರ್ಕಾರಿ ಕೆಲಸ ಪಡೆದಿದ್ದಾರೆ.

 ಅಜಯ್ ಕರೀಂ ನಗರದ ಪ್ರತಿಮಾ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಇವರು ವೈದ್ಯಕೀಯ ವೃತ್ತಿಯಲ್ಲಿ ಮುಂದುವರಿಯದೇ ಅಪ್ಪನ ಆಸೆಯಂತೆ ಪೊಲೀಸ್ ಸಮವಸ್ತ್ರ ಧರಿಸಬೇಕೆಂದು ನಿರ್ಧರಿಸಿದ್ದರು. ಅಂತೆಯೇ ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಿಆರ್​ಪಿಎಫ್ ಅಸಿಸ್ಟಂಟ್ ಕಮಾಂಡರ್ ಆಗಿ ಆಯ್ಕೆ ಆಗಿದ್ದಾರೆ.


"ಚೆನ್ನಾಗಿ ಓದಿ ಪೊಲೀಸ್ ಅಧಿಕಾರಿಯಾಗುವಂತೆ ನಮ್ಮ ತಂದೆ ನನಗೆ ಬಾಲ್ಯದಿಂದಲೂ ಹೇಳುತ್ತಿದ್ದರು. ಆದರೆ ಡಾಕ್ಟರ್ ಆಗಬೇಕೆಂಬ ನನ್ನ ಕನಸು ಪೂರೈಸಿಕೊಳ್ಳಲು ಎಂಬಿಬಿಎಸ್ ಮಾಡಿದೆ.  ತಂದೆಯ ಮಾತು ನನ್ನನ್ನು ಕಾಡುತ್ತಿತ್ತು. ಆದ್ದರಿಂದ ಸ್ಫರ್ಧಾತ್ಮಕ ಪರೀಕ್ಷೆ ಪಡೆದು ಕಮಾಂಡರ್ ಆಗಿ ತಂದೆಯ ಕನಸು ನನಸು ಮಾಡಿರುವೆ" ಎಂದು ಅಜಯ್ ತಿಳಿಸಿದ್ದಾರೆ.


 ಅಜಯ್ ಅವರ ತಂಗಿ ನವಥಾ ಸರ್ಕಾರಿ ಶಾಲೆಯಲ್ಲಿ ಕಲಿತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರು ಕೂಡ ನೇಮಕಾತಿ ಪರೀಕ್ಷೆಯಲ್ಲಿ ಪಾಸಾಗಿ ಅಬಕಾರಿ ಇಲಾಖೆಯಲ್ಲಿ ಕಾನ್ಸ್​ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೆಯೇ ಇವರ ಸಹೋದರ ಶ್ರವಣ ಕೂಡ ಉತ್ತರ ಪ್ರದೇಶದ ಲಖನೌದಲ್ಲಿ ಸಿಐಎಸ್​ಎಫ್ ಕಾನ್ಸ್​ಟೇಬಲ್ ಆಗಿ ಕೆಲಸ ಮಾಡುತ್ತಿದ್ದಾರೆ.



ತಂದೆ ತಾಯಿಗಳು ಕಷ್ಟ ಪಟ್ಟು ಶಿಕ್ಷಣ ನೀಡಿದರು. ಅದಕ್ಕೆ ತಕ್ಕಂತೆ ಮಕ್ಕಳು ಸತತ ಪ್ರಯತ್ನ ಮತ್ತು ಪರಿಶ್ರಮದಿಂದ  ಸರ್ಕಾರಿ ಉದ್ಯೋಗ ಪಡೆದರು.

ಮಧ್ಯಮ ವರ್ಗದ ಕುಟುಂಬದ ಗ್ರಾಮೀಣ ಹಿನ್ನೆಲೆಯಿಂದ ಬಂದ ಈ  ಮೂವರ ಸಾಧನೆ ಇತರರಿಗೆ ಪ್ರೇರಣೆಯಾಗಿದೆ.


ಸಿಹಿಜೀವಿ ವೆಂಕಟೇಶ್ವರ


19 ಜುಲೈ 2025

ಲಲಿತಾಸನಲ್ಲಿ ಕುಳಿತ ಶ್ರೀಕೃಷ್ಣ.


 



ಸಾಮಾನ್ಯ ಶಕ ವರ್ಷ 

950 ರ ಕಾಲದ 

ಚೋಳರ ಕಾಲಕ್ಕೆ ಸೇರಿದ ಈ  ವಿಷ್ಣುವಿನ ವಿಶೇಷವಾದ ಮೂರ್ತಿ ಪ್ರಸ್ತುತ ಬ್ರಿಟಿಷ್‌ ಮ್ಯೂಸಿಯಂ ನಲ್ಲಿದೆ.


 ಲಂಬವಾದ ಅಡ್ಡ ಪಟ್ಟಿಗಳನ್ನು ಹೊಂದಿರುವ ಮೆಟ್ಟಿಲು ಸಿಂಹಾಸನದ ಮೇಲೆ ಲಲಿತಾಸನದಲ್ಲಿ ಕುಳಿತಿರುವ, ಅಗಲವಾದ ಭುಜಗಳು ಮತ್ತು ಕಿರಿದಾದ ಸೊಂಟವನ್ನು ಹೊಂದಿರುವ ಕಿರೀಟಧಾರಿ ವಿಷ್ಣುವಿನ ಕಂಚಿನ ಆಕೃತಿಯು ಆ ಕಾಲದ  ಶಿಲ್ಪಿಗಳ ಚಾಕಚಕ್ಯತೆಗೊಂದು ಉದಾಹರಣೆ.

ನಮ್ಮ ಸಾಂಸ್ಕೃತಿಕ ಪರಂಪರೆ

ನಮ್ಮ ಹೆಮ್ಮೆ..


ಸಿಹಿಜೀವಿ ವೆಂಕಟೇಶ್ವರ.


#CulturalHeritage #HeritagePreservation #CulturalDiversity #Tradition #CulturalIdentity #History #Authenticity #CulturalAwareness #ArtAndCulture #WorldHeritage #CulturalLegacy #RichHeritage #CulturalMapping #CulturalExpression #Folklore #PreserveOurHeritage #CulturalRoots #CulturalFestival #Ethnic

Diversity


14 ಜುಲೈ 2025

ನಾಲ್ಕು ಸೇಬುಗಳ ಕಥೆ.



ನಾಲ್ಕು ಸೇಬುಗಳ ಕಥೆ


ಆರು ವರ್ಷದ ಮಗುವಿಗೆ ಗಣಿತ ಕಲಿಸುತ್ತಿದ್ದ ಶಿಕ್ಷಕಿಯೊಬ್ಬರು "ನಾನು ನಿನಗೆ ಒಂದು ಸೇಬು, ಮತ್ತೊಂದು ಸೇಬು ಹಾಗೂ ಮತ್ತೊಂದು ಸೇಬು ಕೊಟ್ಟರೆ ನಿನ್ನಲ್ಲಿ ಎಷ್ಟು ಸೇಬು ಇರುತ್ತವೆ?" ಎಂದು ಕೇಳಿದರು.

ಮನದಲ್ಲೇ ಲೆಕ್ಕ ಹಾಕಿ 

ಕೆಲವು ಸೆಕೆಂಡುಗಳಲ್ಲಿ ಹುಡುಗ ಆತ್ಮವಿಶ್ವಾಸದಿಂದ, "ನಾಲ್ಕು!" ಎಂದು ಉತ್ತರಿಸಿದನು.


ನಿರಾಶೆಗೊಂಡ ಶಿಕ್ಷಕಿಯು   ಸರಿಯಾದ ಉತ್ತರ ಮೂರನ್ನು  ನಿರೀಕ್ಷಿಸುತ್ತಿದ್ದರು.

 ಮಗು ಸರಿಯಾಗಿ ಕೇಳದಿರಬಹುದೆಂದು ಯೋಚಿಸಿ

ಪ್ರಶ್ನೆಯನ್ನು ಪುನರಾವರ್ತಿಸಿದರು"ದಯವಿಟ್ಟು ಎಚ್ಚರಿಕೆಯಿಂದ ಆಲಿಸು‌

ಇದು ತುಂಬಾ ಸರಳವಾಗಿದೆ. ನೀನು ಎಚ್ಚರಿಕೆಯಿಂದ ಆಲಿಸಿದರೆ ಸರಿಯಾದ ಉತ್ತರ ನೀಡಬಹುದು" ಎಂದು 

"ನಾನು ನಿನಗೆ ಒಂದು ಸೇಬು, ಮತ್ತೊಂದು ಸೇಬು ಹಾಗೂ  ಮತ್ತೊಂದು ಸೇಬು ಕೊಟ್ಟರೆ, ನಿನ್ನಲ್ಲಿ ಎಷ್ಟು ಸೇಬು ಇರುತ್ತವೆ?"


ಹುಡುಗನು ತನ್ನ ಶಿಕ್ಷಕಿಯ ಮುಖದಲ್ಲಿನ  ನಿರಾಶೆಯನ್ನು ಕಂಡು ಮತ್ತೆ ತನ್ನ ಬೆರಳುಗಳ ಮೇಲೆ ಲೆಕ್ಕ ಹಾಕಿದನು. ತನ್ನ ಶಿಕ್ಷಕಿಯನ್ನು ಸಂತೋಷಪಡಿಸುವ ಉತ್ತರವನ್ನು ಹುಡುಕುತ್ತಿದ್ದನು.

ಈ  ಬಾರಿ ಸ್ವಲ್ಪ ಹಿಂಜರಿಕೆಯಿಂದ ಅವನು "ನಾಲ್ಕು..." ಎಂದು ಉತ್ತರಿಸಿದನು.

 ಶಿಕ್ಷಕಿಯ ಮುಖದಲ್ಲಿ ನಿರಾಶೆ ಎದ್ದು ಕಾಣುತ್ತಿತ್ತು.

ಪ್ರಯತ್ನ ಬಿಡದ ಶಿಕ್ಷಕಿ 

ಆ ಹುಡುಗನಿಗೆ ಸೇಬು ಇಷ್ಟವಿಲ್ಲ ಆದರೆ ಸ್ಟ್ರಾಬೆರಿಗಳು ತುಂಬಾ ಇಷ್ಟ ಎಂದು  ನೆನಪಿಸಿಕೊಂಡು ಪ್ರಶ್ನೆ ಕೇಳಲು ಶುರುಮಾಡಿದಳು .


ಈ ಬಾರಿ ಶಿಕ್ಷಕಿಯು ಉತ್ಸಾಹ ಮತ್ತು ಮಿನುಗುವ ಕಣ್ಣುಗಳೊಂದಿಗೆ ಕೇಳಿದರು.

“ನಾನು ನಿನಗೆ ಒಂದು ಸ್ಟ್ರಾಬೆರಿ,ಮತ್ತೊಂದು ಸ್ಟ್ರಾಬೆರಿ ಹಾಗೂ ಮತ್ತೊಂದು ಸ್ಟ್ರಾಬೆರಿ ಕೊಟ್ಟರೆ, ನಿನ್ನಲ್ಲಿ ಎಷ್ಟು ಸ್ಟ್ರಾಬೆರಿ ಇರುತ್ತವೆ ?”

 

ಶಿಕ್ಷಕಿ ಸಂತೋಷವಾಗಿರುವುದನ್ನು ನೋಡಿ,  ಹುಡುಗ ಮತ್ತೆ ತನ್ನ ಬೆರಳುಗಳ ಮೇಲೆ ಲೆಕ್ಕ ಹಾಕಿದನು.

ಅವನ ಮೇಲೆ ಯಾವುದೇ ಒತ್ತಡವಿರಲಿಲ್ಲ, ಆದರೆ ಶಿಕ್ಷಕಿಯ ಮೊಗದಲ್ಲಿ ಸರಿ ಉತ್ತರ ನೀಡುವನೋ ಇಲ್ಲವೋ ಎಂಬ    ಒತ್ತಡ ಕಾಣುತ್ತಿತ್ತು.


ಅವಳು ತನ್ನ ಹೊಸ ವಿಧಾನವು ಯಶಸ್ವಿಯಾಗಬೇಕೆಂದು ಬಯಸಿದ್ದಳು.

ಹಿಂಜರಿಯುತ್ತಲೇ  ನಗುವಿನೊಂದಿಗೆ ಚಿಕ್ಕ ಹುಡುಗ "ಮೂರು?" ಎಂದು ಉತ್ತರಿಸಿದನು.

ಶಿಕ್ಷಕಿಗೆ ಈಗ ಸಂತಸಗೊಂಡು  ನಕ್ಕರು. ಅವರ ವಿಧಾನವು ಯಶಸ್ವಿಯಾಗಿತ್ತು.

ಅವರ ತನ್ನನ್ನು ತಾನೇ ಅಭಿನಂದಿಸಿಕೊಂಡು  ಕೊನೆಯದಾಗಿ ಸೇಬಿ‌ನ ಉದಾಹರಣೆ ಮೂಲಕ ಪ್ರಶ್ನೆ ಕೇಳಿ ಉತ್ತರ ಪಡೆಯಲು ಮುಂದಾದರು.

"ನಾನು ನಿನಗೆ ಒಂದು ಸೇಬು, ಮತ್ತೊಂದು ಸೇಬು ಹಾಗೂ  ಮತ್ತೊಂದು ಸೇಬು ಕೊಟ್ಟರೆ, ನಿನ್ನಲ್ಲಿ ಎಷ್ಟು ಸೇಬು ಇರುತ್ತವೆ?"


ತಕ್ಷಣ ಹುಡುಗ ಆತ್ಮವಿಶ್ವಾಸದಿಂದ   “ನಾಲ್ಕು!” ಅಂದುಬಿಟ್ಟ.

ಶಿಕ್ಷಕಿ ಸಿಟ್ಟಿನಿಂದ ಅದೇಗೆ ನಾಲ್ಕು ಹೇಳು ನೋಡೋಣ ಅಂದರು. 


ಆ ಹುಡುಗ ಪಿಳಿ ಪಿಳಿ ಕಣ್ಣು ಬಿಡುತ್ತಾ "ಏಕೆಂದರೆ ನನ್ನ ಚೀಲದಲ್ಲಿ ಈಗಾಗಲೇ ಒಂದು ಸೇಬು ಇದೆ"  ಮೆಲುದನಿಯಲ್ಲಿ ಉತ್ತರಿಸಿದನು.


ನಾವೂ ಹಾಗೆಯೇ ಯಾರಾದರೂ ನಾವು ನಿರೀಕ್ಷಿಸುವುದಕ್ಕಿಂತ ಭಿನ್ನವಾದ ಉತ್ತರವನ್ನು ನೀಡಿದಾಗ  ಅವರು  ತಪ್ಪು‌ ನಾವು ಮಾತ್ರ ಸರಿ ಎಂಬ ತೀರ್ಮಾನಕ್ಕೆ ಬಂದು ಬಿಡುತ್ತೇವೆ. ಅವರ ಉತ್ತರದಲ್ಲಿ

ನಾವು ಅರ್ಥಮಾಡಿಕೊಳ್ಳದೇ ಇರುವ ಮತ್ತೊಂದು ಕೋನ ಇರಬಹುದು.ಆದ್ದರಿಂದ

ವಿಭಿನ್ನ ದೃಷ್ಟಿಕೋನಗಳನ್ನು ಪ್ರಶಂಸಿಸಲು ಮತ್ತು ಅರ್ಥಮಾಡಿಕೊಳ್ಳಲು ನಾವು ಕಲಿಯಬೇಕು.

ಆಗಾಗ್ಗೆ ನಾವು ನಮ್ಮ ದೃಷ್ಟಿಕೋನಗಳನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತೇವೆ.ಇದು ಸಲ್ಲ.

ಯಾರಾದರೂ ನಮಗಿಂತ ವಿಭಿನ್ನ ದೃಷ್ಟಿಕೋನದ ಮಾತುಗಳನ್ನು ಆಡಿದಾಗ  ಕುಳಿತು ನಿಧಾನವಾಗಿ ಕೇಳೋಣ ಇತರರ ತಾರ್ಕಿಕ ಹಾಗೂ ಮೌಲಿಕ ಮಾತುಗಳು ಮತ್ತು ವಿಚಾರಗಳಿಗೆ ಕಿವಿಯಾಗೋಣ.ನಮ್ಮ ವ್ಯಕ್ತಿತ್ವವನ್ನು ಉತ್ತಮ ಪಡಿಸಿಕೊಳ್ಳೋಣ.


ಸಿಹಿಜೀವಿ ವೆಂಕಟೇಶ್ವರ

ಶಿಕ್ಷಕರು

ತುಮಕೂರು

 #PersonalDevelopment #PersonalGrowth #LifeJourney #SelfImprovement #Motivation #Inspiration #GrowthMindset #Resilience #OvercomingObstacles #TransformationStory #SelfDiscovery #Empowerment #SuccessJourney #MindsetMatters #LifeLessons #GoalSetting #AchieveYourDreams #Positiv

11 ಜುಲೈ 2025

ಆತ್ಮೀಯ ಗೆಳೆಯ..


 

ಇತ್ತೀಚೆಗೆ ಮೈಸೂರಿಗೆ ಹೋದಾಗ ಬಿ ಎಡ್ ಮಾಡುವಾಗ ಜೊತೆಯಲ್ಲಿ ಓದಿದ ಗೆಳೆಯ ಸುರೇಶ್ ಸಿಕ್ಕಿದ್ದರು. ಮೈಸೂರು ಸಾಹಿತ್ಯ ಸಂಭ್ರಮದಲ್ಲಿ ನನ್ನ ಜೊತೆಗಿದ್ದು ನನ್ನ ಸಂಭ್ರಮವನ್ನು ಇಮ್ಮಡಿಗೊಳಿಸಿದ ಸ್ನೇಹಜೀವಿ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿದ,ಒಡನಾಡಿದ, ಸಂತಸದ ಕ್ಷಣಗಳನ್ನು ಮೆಲುಕು ಹಾಕಿದೆವು. ಸುರೇಶ್ ಈಗ P D O ಆಗಿ ಕಾರ್ಯ ಮಾಡುತ್ತಾರೆ.ಬಿ ಎಡ್ ಓದುವಾಗಲೇ   ನಾನು ಅವರಿಗೆ ತಲೈವ ಎಂದಿದ್ದು ಈಗ ನಿಜಕ್ಕೂ ತಲೈವ ಆಗಿದ್ದಾರೆ. ನಾನೀಗ 27 ಪುಸ್ತಕ ಬರೆದಿರುವ ಲೇಖಕ, ಕವಿ ಎಂಬುದನ್ನು ತನ್ನ ಮಡದಿ ಮಕ್ಕಳಿಗೆ ಹೆಮ್ಮೆಯಿಂದ ಪರಿಚಯಿಸಿದರು.ಒಳ್ಳೆಯ ಬಿರಿಯಾನಿ ಊಟ ಹಾಕಿಸಿದ ಗೆಳೆಯ ಕಳೆದ  ತೊಂಬತ್ತರ ದಶಕದ ನಮ್ಮ ದುರಿತ ಕಾಲ,ಹಾಗೂ ಆ ಕಾಲದಲ್ಲೂ ಎಂಜಾಯ್ ಮಾಡಿದ ಸವಿ ಕ್ಷಣಗಳನ್ನು ನೆ‌ನಪು ಮಾಡಿದರು. ಅವರ ಮಕ್ಕಳಿಗೆ ನನ್ನ ಕೃತಿಗಳನ್ನು ನೀಡಿ ಓದಲು ಹೇಳಿದೆ.ಧನ್ಯವಾದಗಳು🙏🙏 ತಲೈವ ಮತ್ತೊಮ್ಮೆ ಮಗದೊಮ್ಮೆ ಸಿಗೋಣ.ನಮ್ಮ ಸ್ನೇಹವನ್ನು ಸಂಭ್ರಮಿಸೋಣ...

ಇಂತಿ ನಿನ್ನ ಗೆಳೆಯ

ಸಿಹಿಜೀವಿ ವೆಂಕಟೇಶ್ವರ.

#FriendshipGoals #CherishedFriends #FriendshipMatters #BestiesForLife #TrueFriendship #FriendsForLife #BondingTime #BFFs #FriendshipVibes #MakingMemories #GoodFriends #FriendshipForever #UnderstoodByYou #LifelongFriends #CrazyAdventures #SupportSystem #FriendshipLove #DynamicDuos #FriendshipMoments #TogetherAlways

10 ಜುಲೈ 2025

ಗುರು ಪೂರ್ಣಿಮೆ


 ಇಂದಿನ ಸುಭಾಷಿತ:-


 "ಗು"ಕಾರಶ್ಚಾಂಧಕಾರಃ ಸ್ಯಾತ್ "ರು"ಕಾರಸ್ತನ್ನಿರೋಧಕಃ । ಅಂಧಕಾರ ನಿರೋಧಿತ್ವಾತ್ "ಗುರು"ರೀತ್ಯಭಿಧೀಯತೇ ।। ಗುರು ಎಂಬ ಪಾದದಲ್ಲಿ ಗುಕಾರವು ಅಂಧಕಾರವನ್ನು ಸೂಚಿಸುತ್ತದೆ. ರುಕಾರವು ನಿರೋಧವನ್ನು ಸೂಚಿಸುತ್ತದೆ. ಹೀಗಾಗಿ ಗುರು ಶಬ್ದಕ್ಕೆ ಅಂಧಕಾರವನ್ನು ನಾಶಮಾಡುವವನು ಎಂದರ್ಥ.


#TeacherLife #TeachersofInstagram #TeachingTips #InspireTeachers #TeacherAppreciation #ClassroomCommunity #TeacherGoals #EducationMatters #FutureLeaders #TeachTheFuture #EducatorLife #PassionForTeaching #TeacherTravel #LearnThroughPlay #ClassroomStories #TeachingInspiration #BackToSchool #TeachAndInspire #CultivatingYoungMinds

03 ಜುಲೈ 2025

ಸಿಹಿಜೀವಿಯ ಹನಿ


 



ಆರಂಭದಲ್ಲಿ ನಮ್ಮನ್ನು ಬೆಂಬಲಿಸಲು

ಯಾರು ಇಲ್ಲದಿದ್ದರೂ ಚಿಂತೆ ಬೇಡ|

ಪ್ರಖರವಾದ ಸೂರ್ಯನ ಬೆಳಕನ್ನು ಎಷ್ಟು ಕಾಲ ತಡೆಯಬಲ್ಲದು ಮೋಡ||


ಸಿಹಿಜೀವಿ ವೆಂಕಟೇಶ್ವರ. 

02 ಜುಲೈ 2025

DHL ನ ಸ್ಪೂರ್ತಿದಾಯಕ ಕಥೆ


  DHL ನ ಸ್ಪೂರ್ತಿದಾಯಕ ಕಥೆ 1969 ರಲ್ಲಿ ಮೂವರು ಯುವಕರು ತಮ್ಮಲ್ಲಿದ್ದ ಅಲ್ಪಸ್ವಲ್ಪ ಹಣದಲ್ಲಿ ತಮ್ಮ ವಿತರಣಾ ವ್ಯವಹಾರವನ್ನು ಪ್ರಾರಂಭಿಸಲು ನಿರ್ಧರಿಸಿದರು. ಮೊದಲನೆಯವನ ಹೆಸರು ಆಡ್ರಿಯನ್ ಡಾಲ್ಸಿ.ಎರಡನೆಯವ ಲ್ಯಾರಿ ಹಿಲ್ಬ್ಲೋಮ್. ಮೂರನೆಯವ ರಾಬರ್ಟ್ ಲಿನ್. ಹೀಗೇ ಆ ಮೂವರ ಹೆಸರಿನಲ್ಲಿ ಒಂದೊಂದು ಪದ ತೆಗೆದುಕೊಂಡು ಆರಂಭಿಸಿದ ಕಂಪನಿಯೇ DHL ! . 55 ವರ್ಷಗಳ ನಂತರ ಇಂದು DHL ಕಂಪನಿ 250 ವಿಮಾನಗಳನ್ನು ಹೊಂದಿದೆ. 32,000 ವಾಹನಗಳು, 550,000 ಉದ್ಯೋಗಿಗಳಿಗೆ ಉದ್ಯೋಗ ನೀಡಿದೆ. ಇಂದು DHL ಪ್ರಪಂಚದ ಎಲ್ಲೆಡೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ.ಅದರ ಆದಾಯ ನೂರಾರು ಶತಕೋಟಿ ಡಾಲರ್‌ಗಳು! ಜೀವನದಲ್ಲಿ ಯೋಜನೆಗಳು, ವ್ಯವಹಾರ, ಯಶಸ್ಸು, ಕನಸುಗಳು, ಗುರಿಗಳ ಬಗ್ಗೆ ಮಾತನಾಡುವ ಜನರು ಯಾವಾಗಲೂ ನಿಮ್ಮ ಸುತ್ತ ಮುತ್ತ ಇರಲಿ. ನಕಾತ್ಮಕ, ಭಯಭೀತ, ಸೋಮಾರಿ ಜನರಿಂದ ದೂರವಿರಿ. ನೀವು ವ್ಯವಹಾರಕ್ಕೆ ಇಳಿದರೆ.ದೃಢವಾಗಿ ಇರಿ. ಅಂದಿನ DHL ಇಂದಿನ DHL ಆಗಲು 55 ವರ್ಷಗಳು ಬೇಕಾಯಿತು. ಯಶಸ್ಸಿಗೆ ಸಮಯ, ಶ್ರಮ, ಬುದ್ಧಿವಂತಿಕೆ ಮತ್ತು ತಾಳ್ಮೆ ಬೇಕು. ಯಶಸ್ಸು ನಿಮ್ಮದಾಗಲಿ... ಸಿಹಿಜೀವಿ ವೆಂಕಟೇಶ್ವರEntrepreneurship #EntrepreneurMindset #StartUpLife #BizTips #EntrepreneurJourney #SmallBusinessSuccess #GrowthMindset #InnovativeThinking #HustleAndGrind #BusinessMotivation #Suc

ಚಾಣಕ್ಯ ನೀತಿ ಶ್ಲೋಕ:


 ಚಾಣಕ್ಯ ನೀತಿ ಶ್ಲೋಕ:-


 ರೂಪಯೌವನ ಸಂಪನ್ನಾ ವಿಶಾಲಕುಲ ಸಂಭವಾ |

 ವಿದ್ಯಾಹೀನಾ ನ ಶೋಭಂತೇ ನಿರ್ಗಂಧಾ ಇವ ಕಿಂಶುಕಾಃ || 


  ಸೌಂದರ್ಯದಿಂದಲೂ ಯೌವನದಿಂದಲೂ ಯುಕ್ತರು ಮಹಾಕುಲೀನರೂ ವಿದ್ಯಾ ವಿಹೀನರಾದರೆ ಪರಿಮಳವಿಲ್ಲದ  ಪುಷ್ಪಗಳಂತೆ ಸ್ವಲ್ಪವೂ ಶೋಭಿಸುವುದಿಲ್ಲ.ಅಂದರೆ ಯಾರಿಂದಲೂ ಆದರಿಸಲ್ಪಡುವುದಿಲ್ಲ.

01 ಜುಲೈ 2025

ನುಡಿ ತೋರಣ ಸಮಾಗಮ..


 
ನುಡಿತೋರಣ ಮೊದಲ ಸಮಾಗಮದಲ್ಲಿ ಅನಿವಾರ್ಯ ಕಾರಣದಿಂದಾಗಿ ಭಾಗವಹಿಸಿರಲಿಲ್ಲ.ಎರಡು ಮತ್ತು ಮೂರನೇ ಸಮಾವೇಶದಲ್ಲಿ ಪಾಲ್ಗೊಂಡ ಸವಿನೆನಪುಗಳನ್ನು ಈಗಲೂ ಮೆಲುಕು ಹಾಕುತ್ತಿರುವೆ... ಮೂರನೇ ಸಮಾವೇಶದ ದಿನ ಆರಕ್ಕೆ ತುಮಕೂರು ಬಿಟ್ಟು ಒಂಭತ್ತಕ್ಕೆ ಸಾಹಿತ್ಯ ಪರಿಷತ್ತು ಸೇರಿ ಕಿರಣ್ ಸರ್ ಮತ್ತು ನುಡಿ ಬಂಧುಗಳೊಂದಿಗೆ ಬೆಳಗಿನ ಉಪಹಾರ ಸೇವಿಸಿ ಚಿನ್ನು ಪ್ರಿಯ ಸರ್ ರವರೊಂದಿಗೆ ಕನ್ನಡ ಹಾಡು ಹಾಡಿದ್ದು ಖುಷಿ ನೀಡಿತು.ಕಡೆಯ ಕ್ಷಣಗಳಲ್ಲಿ ಪುಸ್ತಕ ಬಿಡುಗಡೆಗೆ ಮನಸ್ಸು ಮಾಡಿದೆ. ನಮ್ಮ ಬಳಗದ ಮುಂದೆ ನನ್ನ ಕೃತಿ ಲೋಕಾರ್ಪಣೆಗೊಂಡಿದ್ದು ಖುಷಿ ನೀಡಿತು. ಹಲವಾರು ಸಾಹಿತ್ಯ ಬಂಧುಗಳನ್ನು ಭೇಟಿ ಮಾಡಿದ್ದು ಸಂತಸ ತಂದಿತು. ಜಿ ಬಿ ಹರೀಶ್ ಸರ್, ಮತ್ತು ಸೇತೂರಾಮ್ ಸರ್ ರವರ ಮಾತು ನೇರವಾಗಿ ಕೇಳಿ ಪುಳಕಗೊಂಡೆ. ನನ್ನ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಕೊಂಡ ನಮ್ಮ ನುಡಿ ಬಂಧುಗಳಿಗೆ ನಮನಗಳನ್ನು ಸಲ್ಲಿಸಲೇಬೇಕು. ನುಡಿ ತಾಂಬೂಲ ವಿಶೇಷವಾಗಿತ್ತು. ನಮ್ಮ ಮನೆಯವರ ಮೆಚ್ಚುಗೆ ಗೆ ಪಾತ್ರವಾಗಿದೆ. ಒಟ್ಟಾರೆ ಒಂದು ಉತ್ತಮ ಕೌಟುಂಬಿಕ ಭಾವನಾತ್ಮಕ ನುಡಿ ಹಬ್ಬದಲ್ಲಿ ಪಾಲ್ಗೊಂಡ ಸಾರ್ಥಕ ಭಾವನೆ ನನ್ನದು.... ನಿಮ್ಮ... ಸಿಹಿಜೀವಿ ವೆಂಕಟೇಶ್ವರ
#Bangalore #BangaloreEvents #BookLaunch #AuthorMeet #LiteratureLovers #BookDiscussion #WritersCommunity #ReadingNook #CulturalScene #M