11 ನವೆಂಬರ್ 2025

ಅಮ್ಮ ಮಗನಿಗೆ ನಮನಗಳು..

ಕರುನಾಡಿನ ಜನತೆಯಾದ ನಾವು ಸದಾ ಕೃತಜ್ಞತೆ ಸೂಚಿಸಿ  ಸ್ಮರಿಸುವ ಹೆಸರುಗಳಲ್ಲಿ ಈ ಚಿತ್ರದಲ್ಲಿರುವ ತಾಯಿ ಮಗನ ಹೆಸರು ಅಗ್ರ ಸ್ಥಾನದಲ್ಲಿರುತ್ತದೆ.ಅಂದಿನ ನಮ್ಮ ಮೈಸೂರು ಸಂಸ್ಥಾನವನ್ನು ಮಾದರಿ ರಾಜ್ಯ ಮಾಡುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಉತ್ತಮ ಕಾರ್ಯ ಮಾಡಿದ್ದಾರೆ.ಚಿಕ್ಕ ವಯಸ್ಸಿನಲ್ಲೇ ರಾಜನಾದ ಮಗನಿಗೆ  ಬಾಲ್ಯದಿಂದಲೂ   ಉತ್ತಮ ಶಿಕ್ಷಣ ನೀಡಿ ಒಬ್ಬ ಆಡಳಿತಗಾರನಾಗಿ ಮಾಡುವ ಕಾರ್ಯ ಮಾಡುತ್ತಲೇ ತಾನೂ ಓರ್ವ ಶ್ರೇಷ್ಠ ಆಡಳಿತಗಾರ್ತಿ ಎಂದು ತೋರಿದ ವಾಣಿ ವಿಲಾಸ ಕೆಂಪರಾಜ ನಂಜಮ್ಮಣ್ಣಿ ರವರನ್ನು ನಾವು ದಿನವೂ ನೆನೆಯಬೇಕು.ಇತ್ತೀಚಿಗೆ ವಾಣಿ ವಿಲಾಸ ಪುರಕ್ಕೆ ಕುಟುಂಬ ಸಮೇತ ಭೇಟಿ ನೀಡಿದಾಗ ಈ ಪುತ್ತಳಿಗಳನ್ನು ಕಂಡು ಪುಳಕಗೊಂಡು ಮನದುಂಬಿ ನಮಿಸಿದೆ.ನಮ್ಮ ಮಕ್ಕಳಿಗೆ ಅವರ ಬಗ್ಗೆ ಹೆಮ್ಮೆಯಿಂದ ಪರಿಚಯ ಮಾಡಿದೆ..

ಹಿರಿಯೂರು ತಾಲ್ಲೂಕಿನ ರೈತರು ಇವರನ್ನು ಪೂಜಿಸುತ್ತಿದ್ದಾರೆ.ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗದ ವಿವಿಧ ನಗರಗಳು ಸಹ ಮಾರಿ ಕಣಿವೆ ನೀರನ್ನು ಕುಡಿಯುತ್ತಿದ್ದಾರೆ.

ಅಮ್ಮ ಮಗನಿಗೆ ಎಲ್ಲರ ಪರವಾಗಿ ಧನ್ಯವಾದಗಳು..

#VvSagarDam #Hiriyur #Chitradurga #Vanivilaasa #TravelDiaries #NatureLovers #ExploreIndia #WaterDam #AdventureAwaits #LandscapePhotography #IncredibleIndia #HiddenGems #VisitKarnataka #TouristAttraction #TravelGoals #ScenicViews #DiscoverMore #BeautifulDestinations #KarnatakaTourism


 #VvSagarDam #Hiriyur #Chitradurga #Vanivilaasa #TravelDiaries #NatureLovers #ExploreIndia #WaterDam #AdventureAwaits #LandscapePhotography #IncredibleIndia #HiddenGems #VisitKarnataka #TouristAttraction #TravelGoals #ScenicViews #DiscoverMore #BeautifulDestinations #KarnatakaTourism