ಇರುವುದೇ ವರವು.
ನಾವು ಇಲ್ಲಿ ಸಂಪತ್ತನ್ನು ಹುಡುಕುತ್ತಿದ್ದರೆ ಅನೇಕರು ಆರೋಗ್ಯವನ್ನು ಹುಡುಕುತ್ತಿದ್ದಾರೆ.
ನಾವು ಇಲ್ಲಿ ಆರೋಗ್ಯವನ್ನು ಹುಡುಕುತ್ತಿದ್ದರೆ ಬಹುತೇಕರು ಮರಣ ಹೊಂದಿದ್ದಾರೆ.
ನಾವು ಅಧಿಕಾರವನ್ನು ಹುಡುಕುತ್ತಿದ್ದರೆ ಕೆಲವರು ಅದನ್ನು ಪಡೆದುಕೊಂಡು ಶಕ್ತಿಹೀನರಾಗಿದ್ದಾರೆ.
ನಾವು ಫ್ಯಾನ್ಸಿ ಕಾರನ್ನು ಕೊಂಡು ಓಡಿಸಲು ಬಯಸುತ್ತಿರುವಾಗ ಅಲ್ಲಾರೋ ಕಾರು ಅಪಘಾತದಲ್ಲಿ ಸಾಯುತ್ತಿದ್ದಾರೆ.
ನಾವು ಭೂಮಿಯಿಂದ ಮೇಲಕ್ಕೆ ಹೊಸ ಮಹಲುಗಳನ್ನು ಕಟ್ಟುವಾಗ ಕೆಲವರು ಭೂಮಿಯ ಕೆಳಗೆ ಹೊಸ ಸಮಾಧಿಯನ್ನು ಅಗೆಯುತ್ತಿದ್ದಾರೆ.
ನಾವು ಆಹಾರವನ್ನು ಕಸದ ಬುಟ್ಟಿಗೆ ಎಸೆದು ಪೋಲು ಮಾಡುವಾಗ ಬೇರೊಬ್ಬರು ತಿನ್ನಲು ಅಗಳು ಅನ್ನ ಹುಡುಕುತ್ತಿದ್ದಾರೆ.
ನಾವು ನಮ್ಮ ಸ್ಥಿತಿಯನ್ನು ಉತ್ತಮ ಪಡಿಸಲು ಭಗವಂತನನ್ನು ಕೇಳುವಾಗ ಬೇರೊಬ್ಬರು ನಮ್ಮ ಸ್ಥಿತಿಗೆ ಬರಲು ಪ್ರಾರ್ಥಿಸುತ್ತಿದ್ದಾರೆ.
ನಾವು ಹೆರಿಗೆಯ ಆಚರಣೆ ಮಾಡುವಾಗ ಅಲ್ಲಾರೋ ಮಸಣದಲ್ಲಿ ಕಣ್ಣೀರಿಡುತ್ತಿದ್ದಾರೆ.
ನಾವು ಸಹಜವಾಗಿ ಮೂತ್ರ ವಿಸರ್ಜಿಸುವಾಗ ಅಥವಾ ನೀರು ಕುಡಿಯುವಾಗ ಮತ್ತಾರೋ ಅದೇ ಉದ್ದೇಶಕ್ಕಾಗಿ ಪೈಪ್ ಬಳಸುತ್ತಿದ್ದಾರೆ.
ಇರುವುದೇ ವರವೆಂದು ಅರಿತು ಸಿಹಿಜೀವಿಗಳಾಗುವುದನ್ನು ಮರೆತು ಇಲ್ಲದಿರುವುದರ ಬಗ್ಗೆ ಕೊರಗಿ ಮರುಗುತ್ತಿದ್ದಾರೆ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು