ಶೆಟ್ಟಿ ಹಳ್ಳಿ ಆಂಜನೇಯಸ್ವಾಮಿ ದೇವಾಲಯ.
ಪ್ರಸಿದ್ಧ ಇತಿಹಾಸ ಹೊಂದಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯವು ತುಮಕೂರಿನಿಂದ 3 ಕಿ.ಮೀ. ದೂರದ ಆಗ್ನೇಯ ದಿಕ್ಕಿನಲ್ಲಿರುವ ಶೆಟ್ಟಿಹಳ್ಳಿ ಗ್ರಾಮದಲ್ಲಿದೆ. ಜಾತಿ, ಧರ್ಮ ಭೇದವಿಲ್ಲದೆ ಅತಿ ಹೆಚ್ಚು ಭಕ್ತರನ್ನು ಹೊಂದಿರುವ ನಂಬಿದವರ ಬೇಡಿಕೆಗಳನ್ನು ಈಡೇರಿಸುತ್ತಾನೆಂಬ ನಂಬಿಕೆಯಿಂದ ಭಕ್ತರು ಆಗಮಿಸುತ್ತಾರೆ.
ಚೈತ್ರ ಮಾಸದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.
ಮಹಾಭಾರತ ಕಾವ್ಯದಲ್ಲಿ ಬರುವ ಜನಮೇಜಯ ಮಹಾರಾಜ ಯಾಗ ಮಾಡುವ ಮುನ್ನ ವಿಘ್ನಗಳು
ಬಾರದಂತೆ ಈ ಆಂಜನೇಯನನ್ನು ಪ್ರತಿಷ್ಠಾಪನೆ ಮಾಡಿಸಿದರೆಂದು ಸ್ಥಳ ಪುರಾಣ ಹೊಂದಿರುವ ಈ ಪ್ರತಿಮೆಯು ಸುಮಾರು 10 ಅಡಿ ಎತ್ತರ ಹಾಗೂ 6 ಅಡಿ ಅಗಲವಾಗಿದ್ದು ಮುಳಬಾಗಿಲಿನಲ್ಲಿರುವ ಹನುಮಂತನನ್ನು ಬಿಟ್ಟರೆ ಎತ್ತರದಲ್ಲಿ ಎರಡನೇ ಆಂಜನೇಯಸ್ವಾಮಿ ಆಗಿದೆ. ಈ ಆಂಜನೇಯನ ಕೈಯಲ್ಲಿ ಮಾವಿನಹಣ್ಣುಗಳನ್ನು ಹಿಡಿದಿರುವುದು ವಿಶೇಷ,
1893 ರಲ್ಲಿ ಮೈಸೂರು ಪ್ರಾಂತ್ಯದ ಚೌಬೀನೆ ನಾಗ ಕುಮಾರಯ್ಯನವರು ಈ ದೇವಾಲಯದ ಜೀರ್ಣೋದ್ಧಾರ ಮಾಡಿದರೆಂದು ದೇವಾಲಯದಲ್ಲಿರುವ ಶಿಲಾಫಲಕವೊಂದು ತಿಳಿಸುತ್ತದೆ.
#shettihally #anjaneya
#AnjaneyaTempleTumkur #TumkurTemples #IndianTemples #Anjaneya #DevotionalJourney #Spirituality #TemplesofIndia #VinayakaChaturthi #LocalTemples #ExploringTempleArchitecture #SacredSite #DivineVibes #CulturalHeritage #TempleVisiting #Pilgrimage #Devotees #GodsAndGoddesses #SpiritualTour #TumkurTourism