This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
03 ಏಪ್ರಿಲ್ 2018
02 ಏಪ್ರಿಲ್ 2018
*ಗಜ಼ಲ್ ೩೭ (ನಿಲ್ಲಲ್ಲ)* ಕನ್ನಡ ಸಾಹಿತ್ಯ ಲೋಕ ವಾಟ್ಸಪ್ ಗುಂಪಿನ ಸ್ಪರ್ಧೆಯಲ್ಲಿ ಅತ್ಯುತ್ತಮ ಬಹುಮಾನ ಪುರಸ್ಕಾರ ಲಭಿಸಿದ ಗಜ಼ಲ್
*ಗಜ಼ಲ್ ೩೭*
ಯಾರೇ ತಡೆದರೂ ಸಾಗರದ ಅಪ್ಪಳಿಸುವ ಅಲೆಗಳು ನಿಲ್ಲಲ್ಲ
ಸಮಯ ಓಡುತಿದೆ ಗಡಿಯಾರದ ಮುಳ್ಳುಗಳು ನಿಲ್ಲಲ್ಲ
ಸಮಯ ಓಡುತಿದೆ ಗಡಿಯಾರದ ಮುಳ್ಳುಗಳು ನಿಲ್ಲಲ್ಲ
ವರ್ತಮಾನದಿ ನಿಂತು ಗತದ ಸುವರ್ಣ ಯುಗ ಸ್ಮರಣೆ
ಮೊಗೆದಷ್ಟು ಉಕ್ಕುವ ಮಧುರ ಸವಿಗನಸುಗಳು ನಿಲ್ಲಲ್ಲ
ಮೊಗೆದಷ್ಟು ಉಕ್ಕುವ ಮಧುರ ಸವಿಗನಸುಗಳು ನಿಲ್ಲಲ್ಲ
ಸಮುದ್ರ ದಂಡೆಯಲಿ ಅವಳ ಸೌಂದರ್ಯದ ತೇರು
ಅವಳಧರದ ಮಧುಪಾನಪಾತ್ರೆಯ ಅಮಲುಗಳು ನಿಲ್ಲಲ್ಲ
ಅವಳಧರದ ಮಧುಪಾನಪಾತ್ರೆಯ ಅಮಲುಗಳು ನಿಲ್ಲಲ್ಲ
ಕೊಚ್ಚಿಹೊಯಿತು ಮರಳ ರಾಶಿಯ ಒಲವಿನ ಮನೆ
ನಾರಿಕೇಳ ಕಲ್ಪವೃಕ್ಷದ ಕೆಳಗೆ ಕಳೆದ ನೆನಪುಗಳು ನಿಲ್ಲಲ್ಲ
ನಾರಿಕೇಳ ಕಲ್ಪವೃಕ್ಷದ ಕೆಳಗೆ ಕಳೆದ ನೆನಪುಗಳು ನಿಲ್ಲಲ್ಲ
ಎಷ್ಟೋ ಸೂರ್ಯೋದಯ ಸೂರ್ಯಾಸ್ತ ಕಳೆದುಹೋದವು
ಸೀಜೀವಿಗೆ ಅವಳ ಸಂಧಿಸುವ ಕನವರಿಕೆಗಳು ನಿಲ್ಲಲ್ಲ
ಸೀಜೀವಿಗೆ ಅವಳ ಸಂಧಿಸುವ ಕನವರಿಕೆಗಳು ನಿಲ್ಲಲ್ಲ
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
*ಗೌರಿಬಿದನೂರು*
01 ಏಪ್ರಿಲ್ 2018
*ಉಕ್ಕಿನ ಮನುಷ್ಯ* (ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
*ಉಕ್ಕಿನ ಮನುಷ್ಯ*
(ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
ಇವರೇ ನಮ್ಮ ಉಕ್ಕಿನ ಮನುಷ್ಯ
ಬರೆದರು ನವಭಾರತದ ಭವಿಷ್ಯ
ಸಾರಿದರು ಏಕತೆಯ ಮಂತ್ರ
ಪಾಲಿಸಿದರು ರಾಷ್ಟ್ರೀಯತೆ ತಂತ್ರ
ದೇಶದ ಮೊದಲ ಉಪಪ್ರಧಾನಿ
ಆಡಳಿತದಲ್ಲಿ ದೊಡ್ದ ದಣಿ
ಮಾಡಿದರು ದೇಶದ ಏಕೀಕರಣ
ಮಾಡಲಿಲ್ಲ ಕೀಳು ರಾಜಕಾರಣ
ಬಾರ್ಡೋಲಿ ಸತ್ಯಾಗ್ರಹ ರೂವಾರಿ
ಸ್ವಾತಂತ್ರ್ಯ ಕ್ಕೆ ಬಾರಸಿದರು ರಣಭೇರಿ
ಸರಳ ಸಜ್ಜನ ಶಿಸ್ತಿನ ಸಿಪಾಯಿ ನೀವು
ನಿಮ್ಮ ಆದರ್ಶ ಪಾಲಿಸುವೆವು ನಾವು
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
(ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
ಇವರೇ ನಮ್ಮ ಉಕ್ಕಿನ ಮನುಷ್ಯ
ಬರೆದರು ನವಭಾರತದ ಭವಿಷ್ಯ
ಸಾರಿದರು ಏಕತೆಯ ಮಂತ್ರ
ಪಾಲಿಸಿದರು ರಾಷ್ಟ್ರೀಯತೆ ತಂತ್ರ
ದೇಶದ ಮೊದಲ ಉಪಪ್ರಧಾನಿ
ಆಡಳಿತದಲ್ಲಿ ದೊಡ್ದ ದಣಿ
ಮಾಡಿದರು ದೇಶದ ಏಕೀಕರಣ
ಮಾಡಲಿಲ್ಲ ಕೀಳು ರಾಜಕಾರಣ
ಬಾರ್ಡೋಲಿ ಸತ್ಯಾಗ್ರಹ ರೂವಾರಿ
ಸ್ವಾತಂತ್ರ್ಯ ಕ್ಕೆ ಬಾರಸಿದರು ರಣಭೇರಿ
ಸರಳ ಸಜ್ಜನ ಶಿಸ್ತಿನ ಸಿಪಾಯಿ ನೀವು
ನಿಮ್ಮ ಆದರ್ಶ ಪಾಲಿಸುವೆವು ನಾವು
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)