17 ಡಿಸೆಂಬರ್ 2018

ಕಪ್ಪು ಬಿಳುಪು ( ಕವನ )

*ಕಪ್ಪು-ಬಿಳುಪು*

ಹೊರಗಿನ ಲೋಕಕೆ
ನನ್ನ ಬದುಕು ಬಣ್ಣದ್ದು
ಒಳಗೆ ಕಪ್ಪು ಬಿಳುಪು
ಯಾರಿಗೆ ಹೇಳಲಿ
ಹೊಳೆವ ನನ್ನ ಮೈಮಾಟ
ನೋಡಲು ಕಾತರ ಅವರಿಗೆ
ನನ್ನ ಕಣ್ಣಲ್ಲಿ ಕಣ್ಣಿಟ್ಟು
ನೋಡುವವರಾರು ಇಲ್ಲ .
ಮನದಲಿರುವ ದುಗುಡಗಳು
ನೂರಾರು ತೋರಲಾಗುತ್ತಿಲ್ಲ
ವೇದನೆಯ ಬಚ್ಚಿಡಲೂ
ಆಗುತ್ತಿಲ್ಲ
ಮನದ ದುಗುಡ ಹೇಳಲು
ಹನಿಯೊಂದು ಬಂದಿದೆಯಲ್ಲ
ಅದು ಯಾರಿಗೂ ಕಾಣುತ್ತಿಲ್ಲ .

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

04 ಡಿಸೆಂಬರ್ 2018

ಪಾಡೇನು(ಹನಿಗವನ)

               *ಪಾಡೇನು*

ಕರ್ನಾಟಕದ ನಂತರ
ಗುಜರಾತ್‌ ನಲ್ಲೂ
ಪೊಲೀಸ್ ನೇಮಕಾತಿ
ಪ್ರಶ್ನೆ ಪತ್ರಿಕೆ ಲೀಕ್ ಆಗಿ
ಪರೀಕ್ಷೆ ಮುಂದಕ್ಕೆ
ಹೋಗಿದೆಯಂತೆ
ಗೊತ್ತೇನು ?
ಭದ್ರತೆ ಕೊಡುವ
ಪೋಲಿಸರ ಪತ್ರಿಕೆಯೇ
ಲೀಕಾದರೆ ಬೇರೆ
ಪತ್ರಿಕೆಗಳ ಪಾಡೇನು ?

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

ಅವಕಾಶ ಕೊಡಿ (ಚುಟುಕು)

               *ಅವಕಾಶ ಕೊಡಿ*

ಅಬಲರು ನಾವಲ್ಲ ಭಿಕ್ಷುಕರು ಅಲ್ಲವೇ ಅಲ್ಲ
ಚೇತನವಿರುವ ವಿಶೇಷ ಚೇತನರು ನಾವು
ಕರುಣೆ ತೋರಿ ಕಂಬನಿ ಮಿಡಿಯುವುದು ಬೇಡ
ಅವಕಾಶ ಕೊಟ್ಟ ಪ್ರೋತ್ಸಾಹಿಸಿ ನೋಡಿ ನೀವು

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

03 ಡಿಸೆಂಬರ್ 2018

ಪ್ರೋತ್ಸಾಹಿಸಿ ( ವಿಶ್ವ ವಿಕಲಚೇತನ ದಿನಾಚರಣೆಯ ಪ್ರಯುಕ್ತ)

                  *ಪ್ರೋತ್ಸಾಹಿಸಿ*
(ವಿಶ್ವ ವಿಕಲಚೇತನ ದಿನಾಚರಣೆಯ ಪ್ರಯುಕ್ತ)

ಬೈಯದಿರಿ ನೊಯಿಸದಿರಿ
ದಿವ್ಯಾಂಗರ ಮನಗಳ
ಬಯಸಿ ಯಾರೂ
ವಿಕಲಚೇತನರಾಗಲ್ಲ
ಎಲ್ಲರಲೂ ಚೇತನವಿದೆ.

ಎಲ್ಲಾ ಇರುವವರು
ಇಲ್ಲದವರ ಜಾಗದಿ
ನಿಂತು ಯೋಚಿಸಿ .
ಮುತ್ತು ರತ್ನ ಬೇಡ
ವಜ್ರ ಹವಳ ಬೇಡ
ಕರುಣೆ ಅನುಕಂಪ
ಅವರಿಗೆ ಬೇಡವೆ ಬೇಡ.

ಎಲ್ಲರಂತೆ ಬಾಳಲು
ಅವಕಾಶಗಳ ನೀಡಿ
ಅವರನು ಪ್ರೋತ್ಸಾಹಿಸಿ

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

ದಾರಿದೀಪ (ಚುಟುಕು)

           *ದಾರಿದೀಪ*

ದಾರಿಗಳು ನೂರಾರು ಬದುಕಿ ಬಾಳಲು
ಸಾವಿರ ದಾರಿಗಳಿವೆ ಇಂದು ಹಾಳಾಗಲು
ಅಡ್ಡ ದಾರಿಯ ಪಯಣ ಕೊನೆಗೊಳ್ಳಲಿ
ನಿನ್ನ ಬದುಕು ಇತರರಿಗೆ ದಾರಿದೀಪವಾಗಲಿ

*ಸಿ ಜಿ.ವೆಂಕಟೇಶ್ವರ*
*ಗೌರಿಬಿದನೂರು*