07 ಏಪ್ರಿಲ್ 2019

ಯುಗಾದಿ (ಹನಿ)

       
*ಯುಗಾದಿ*

 ಜಗವೆಲ್ಲಾ ಸಂತಸದಿ ಆಚರಿಸಿದೆ *ಯುಗಾದಿ*
ಈ ರಾಜಕಾರಣಿಗಳಿಗೆ ಒಂದೇ ಚಿಂತೆ ಯಾವಾಗ ಸಿಗುವುದು *ಗಾದಿ*

26 ಮಾರ್ಚ್ 2019

ಪುರಸ್ಕಾರ ಮಾಲೆ(ಚಿತ್ರ ಕವನ)

*ಪುರಸ್ಕಾರದ ಮಾಲೆ*

ಓದಬೇಕು ನಾನೀಗ
ತಿಳಿಯಲು ಈ ಜಗ
ಬರೆದುಕೊಳ್ಳಬೇಕು
ನನ್ನ ಹಣೆಬರಹ ನಾನೇ
ಕಾಲಿಲ್ಲದಿದ್ದರೂ ನಿಲ್ಲಬೇಕು
ನನ್ನ ಕಾಲ ಮೇಲೆ
ಸಾಧಿಸಿದ ನನ್ನ ಕೊರಳಿಗೆ
ಬಿದ್ದೇ ಬೀಳುವುದು
ಪುರಸ್ಕಾರದ ಮಾಲೆ

*ಸಿ.ಜಿ ವೆಂಕಟೇಶ್ವರ*
*ಗೌರಿಬಿದನೂರು*

25 ಮಾರ್ಚ್ 2019

*ಗಜಲ್೫೫(ಬಾ ಮಳೆಯೇ ಬಾ)

         *ಗಜಲ್*

ಧರೆಯತ್ತಿ ಉರಿಯುತಿದೆ ವರ್ಷವೆ ಬಾ
ತಿರೆಯ ಜೀವಿಗಳು ತತ್ತರಿಸಿವೆ ಪರ್ಜನ್ಯವೆ ಬಾ .

ಉತ್ತರೀಯ ನೆನೆಸಲೂ ಜಲವಿಲ್ಲ ಇಲ್ಲಿ
ಬಾಯಾರಿಕೆಗೆ ಉತ್ತರಿಸುವ ಉತ್ತರವೆ ಬಾ.

ನೊಗವ ಹೂಡಿಲ್ಲ ರೈತರು ನೀ ಬರದೆ
ಮೊಗೆದರೂ ಮುಗಿಯದ ಮಘವೆ ಬಾ .

ಹರಿಣಗಳಾದಿಯಾಗಿ ಮೃಗಗಳಿಗೆ ಜಲವಿಲ್ಲ
ಜೀವರಾಶಿಗಳ ರಕ್ಷಕ ಮೃಗಶಿರವೆ ಬಾ .

ಹಸ್ತತೊಳೆಯಲು ನೀರಿಲ್ಲ ಎಲ್ಲೆಡೆಯೂ
ಸೀಹಿಜೀವಿಗಳ ಜೀವನಾಡಿ ಹಸ್ತಚಿತ್ತವೆ ಬಾ.

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*





23 ಮಾರ್ಚ್ 2019

ಗಜಲ್ ೫೪(ನನ್ನ ಶಿಕ್ಷಕ)


         *ಗಜಲ್೫೪*


ಕನಸು ಕಾಣಲು ಹೇಳಿಕೊಟ್ಟವನೇ ನನ್ನ ಶಿಕ್ಷಕ,
ನನಸಾದ ನನ್ನ ಗುರಿಗಳ ತಲುಪಿಸಿದವನೇ ನನ್ನ ಶಿಕ್ಷಕ .

ದೇವರು ಕಣ್ಣಿಗೆ ಕಾಣುವುದು ಅಪರೂಪ,
ಶಿವನ ಸ್ವರೂಪಿಯಾಗಿ ಕ್ಷಕಿರಣ ಬೀರಿದವನೇ ನನ್ನ ಶಿಕ್ಷಕ

ಕೆಡಲು ನೂರು ದಾರಿಗಳು ಆಧುನಿಕ ಜಗದಿ,
ಬದುಕಲು ಮಾರ್ಗದರ್ಶನ ನೀಡಿದವನೇ ನನ್ನ ಶಿಕ್ಷಕ.

ಸಮಾಜ ತಿದ್ದುವವರು ಬಹಳಿಲ್ಲ ಭವದಿ ,
ಸಾಮ ದಾನ ಭೇದ  ದಂಡಗಳಲಿ ಕಲಿಸಿದವನೇ ನನ್ನ ಶಿಕ್ಷಕ.

ಸೀಜೀವಿಯು ಅಂಧಕಾರದಲ್ಲಿದ್ದು ತೊಳಲುತಲಿದ್ದನು ,
ಜ್ಞಾನದ ಪಂಜನಿಡಿದು ಬಾಳ ಬೆಳಗಿಸಿದವನೇ ನನ್ನ ಶಿಕ್ಷಕ.

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*





22 ಮಾರ್ಚ್ 2019

*ಮಹಾಮಾತೆ*(ಹನಿಗವನ)

              *ಮಹಾಮಾತೆ*(ಹನಿಗವನ)

ಜನ್ಮ‌ನೀಡಿದ ಜನ್ಮದಾತೆ
ಬತ್ತದ ಪ್ರೀತಿಯ ವರತೆ
ನನ್ನ ಸಲಹಿದ ವಾತ್ಸಲ್ಯದಾತೆ
ಅವಳೇ ಮಹಾಮಾತೆ

*ಸಿ.ಜಿ ವೆಂಕಟೇಶ್ವರ*
*ಗೌರಿಬಿದನೂರು*