This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
07 ಏಪ್ರಿಲ್ 2019
ಗಜಲ್ ೫೬(ಸಾವು)
*ಗಜ್ಹಲ್ ೫೬*
ಸಾಸಿರ ಕೋಟಿಗಳ ಒಡೆಯನಿಗೆ ತಪ್ಪದು ಸಾವು
ಸಾಧು ಸಂತರಿಗು ಬಿಡದೆ ಬಪ್ಪುದು ಸಾವು .
ಸಾಧು ಸಂತರಿಗು ಬಿಡದೆ ಬಪ್ಪುದು ಸಾವು .
ಬಡವ ಬಲ್ಲಿದ ಮೇಲುಕೀಳು ನೋಡುವುದಿಲ್ಲ
ಸಮಾನತೆಯ ಸಂದೇಶ ಸಾರಲು ಬರುವುದು ಸಾವು.
ಸಮಾನತೆಯ ಸಂದೇಶ ಸಾರಲು ಬರುವುದು ಸಾವು.
ಬೆಳಗಾದ ಮೇಲೆ ಮಧ್ಯಾಹ್ನ ಸಂಜೆಯಾಗಲೇಬೇಕು
ಕರುಣಾಮಯಿಗಳಿಗೂ ಕರುಣೆ ತೋರದೆ ಆಗಮಿಸುವುದು ಸಾವು.
ಕರುಣಾಮಯಿಗಳಿಗೂ ಕರುಣೆ ತೋರದೆ ಆಗಮಿಸುವುದು ಸಾವು.
ಬರಿಗೈಲಿ ಬಂದರೂ ಕೈ ತುಂಬಾ ಸಂಪತ್ತು ಸಂಪಾದನೆಯ ಜಪ
ಆರಡಿ ಮೂರಡಿ ತಾಣವ ಸೇರಿಸಲು ಬರದೇ ಇರದು ಸಾವು.
ಆರಡಿ ಮೂರಡಿ ತಾಣವ ಸೇರಿಸಲು ಬರದೇ ಇರದು ಸಾವು.
ದೇವತೆಗಳಂತೆ ಅಮರನಾಗಲು ಸಿಹಿಜೀವಿಗೂ ಹಂಬಲ
ಕಾಲನು ಕರೆ ಮಾಡಲು ಮನೆ ಬಾಗಿಲಲಿ ನಿಲ್ಲುವುದು ಸಾವು.
ಕಾಲನು ಕರೆ ಮಾಡಲು ಮನೆ ಬಾಗಿಲಲಿ ನಿಲ್ಲುವುದು ಸಾವು.
*ಸಿ.ಜಿ ವೆಂಕಟೇಶ್ವರ*
*ಗೌರಿಬಿದನೂರು*
*ಗೌರಿಬಿದನೂರು*
26 ಮಾರ್ಚ್ 2019
25 ಮಾರ್ಚ್ 2019
*ಗಜಲ್೫೫(ಬಾ ಮಳೆಯೇ ಬಾ)
*ಗಜಲ್*
ಧರೆಯತ್ತಿ ಉರಿಯುತಿದೆ ವರ್ಷವೆ ಬಾ
ತಿರೆಯ ಜೀವಿಗಳು ತತ್ತರಿಸಿವೆ ಪರ್ಜನ್ಯವೆ ಬಾ .
ಉತ್ತರೀಯ ನೆನೆಸಲೂ ಜಲವಿಲ್ಲ ಇಲ್ಲಿ
ಬಾಯಾರಿಕೆಗೆ ಉತ್ತರಿಸುವ ಉತ್ತರವೆ ಬಾ.
ನೊಗವ ಹೂಡಿಲ್ಲ ರೈತರು ನೀ ಬರದೆ
ಮೊಗೆದರೂ ಮುಗಿಯದ ಮಘವೆ ಬಾ .
ಹರಿಣಗಳಾದಿಯಾಗಿ ಮೃಗಗಳಿಗೆ ಜಲವಿಲ್ಲ
ಜೀವರಾಶಿಗಳ ರಕ್ಷಕ ಮೃಗಶಿರವೆ ಬಾ .
ಹಸ್ತತೊಳೆಯಲು ನೀರಿಲ್ಲ ಎಲ್ಲೆಡೆಯೂ
ಸೀಹಿಜೀವಿಗಳ ಜೀವನಾಡಿ ಹಸ್ತಚಿತ್ತವೆ ಬಾ.
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಧರೆಯತ್ತಿ ಉರಿಯುತಿದೆ ವರ್ಷವೆ ಬಾ
ತಿರೆಯ ಜೀವಿಗಳು ತತ್ತರಿಸಿವೆ ಪರ್ಜನ್ಯವೆ ಬಾ .
ಉತ್ತರೀಯ ನೆನೆಸಲೂ ಜಲವಿಲ್ಲ ಇಲ್ಲಿ
ಬಾಯಾರಿಕೆಗೆ ಉತ್ತರಿಸುವ ಉತ್ತರವೆ ಬಾ.
ನೊಗವ ಹೂಡಿಲ್ಲ ರೈತರು ನೀ ಬರದೆ
ಮೊಗೆದರೂ ಮುಗಿಯದ ಮಘವೆ ಬಾ .
ಹರಿಣಗಳಾದಿಯಾಗಿ ಮೃಗಗಳಿಗೆ ಜಲವಿಲ್ಲ
ಜೀವರಾಶಿಗಳ ರಕ್ಷಕ ಮೃಗಶಿರವೆ ಬಾ .
ಹಸ್ತತೊಳೆಯಲು ನೀರಿಲ್ಲ ಎಲ್ಲೆಡೆಯೂ
ಸೀಹಿಜೀವಿಗಳ ಜೀವನಾಡಿ ಹಸ್ತಚಿತ್ತವೆ ಬಾ.
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)




