This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
23 ಆಗಸ್ಟ್ 2019
31 ಜುಲೈ 2019
30 ಜುಲೈ 2019
ಸಿಹಿ ಜೀವಿಯ ಹನಿಗಳು
*ಸಿಹಿಜೀವಿಯ ಹನಿಗಳು*
*೧*
*ಮಾರ್ಗ*
ಒಳಿತು ಮಾಡುತ್ತಿರಲಿ ಕರ
ಕರುಣೆ, ಪ್ರೀತಿ ತುಂಬಿರಲಿ ಉರ
ಸತ್ಚಿಂತನೆಗಳಿಂದ ತುಂಬಿರಲಿ ಶಿರ
ನಿನ್ನ ಹೆಸರಾಗುವುದು ಅಮರ .
*೨*
*ಇಂದ್ರಿಯ ನಿಗ್ರಹ*
ಅಮರತ್ವ ಸಿಗಬೇಕೆಂದು
ಮಾಡದ ಪೂಜೆಗಳಿಲ್ಲ
ಜಪತಪಗಳಿಲ್ಲ ಧ್ಯಾನ
ಸತ್ಸಂಗಗಳಿಗೆ ಕೊನೆಯಿಲ್ಲ
ಆದರೂ ಅಮರತ್ವದ ಸುಳಿವಿಲ್ಲ
ಕಾರಣ ಇಂದ್ರಿಯಗಳ
ನಿಗ್ರಹ ಆಗಲೇ ಇಲ್ಲ.
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
*೧*
*ಮಾರ್ಗ*
ಒಳಿತು ಮಾಡುತ್ತಿರಲಿ ಕರ
ಕರುಣೆ, ಪ್ರೀತಿ ತುಂಬಿರಲಿ ಉರ
ಸತ್ಚಿಂತನೆಗಳಿಂದ ತುಂಬಿರಲಿ ಶಿರ
ನಿನ್ನ ಹೆಸರಾಗುವುದು ಅಮರ .
*೨*
*ಇಂದ್ರಿಯ ನಿಗ್ರಹ*
ಅಮರತ್ವ ಸಿಗಬೇಕೆಂದು
ಮಾಡದ ಪೂಜೆಗಳಿಲ್ಲ
ಜಪತಪಗಳಿಲ್ಲ ಧ್ಯಾನ
ಸತ್ಸಂಗಗಳಿಗೆ ಕೊನೆಯಿಲ್ಲ
ಆದರೂ ಅಮರತ್ವದ ಸುಳಿವಿಲ್ಲ
ಕಾರಣ ಇಂದ್ರಿಯಗಳ
ನಿಗ್ರಹ ಆಗಲೇ ಇಲ್ಲ.
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
29 ಜುಲೈ 2019
26 ಜುಲೈ 2019
ಸೈನಿಕ ,( ಕವನ)
*ಸೈನಿಕ*
(ಕಾರ್ಗಿಲ್ ವಿಜಯ ದಿವಸದ 20 ನೇ ವರ್ಷಾಚರಣೆಯ ನೆನಪಿಗೆ ಸೈನಿಕರಿಗೆ ನುಡಿನಮನ)
ಬಿಸಿಲೇ ಇದ್ದರೂ
ಮಳೆಯೇ ಸುರಿದರೂ
ನಿಂತಾ ನೋಡು ಸೈನಿಕ|ಪ|
ಎದುರಾಳಿ ನಿಂತರೂ
ಯುದ್ದ ನಡೆದರೂ
ಎದೆಕೊಟ್ಟು ನಿಲ್ಲುವ ಸೈನಿಕ|
ಕೂಗಿ ಕೂಗಿ ಹೇಳುತೈತೆ
ನಮ್ಮ ಭಾರತ
ಸ್ವಾಭಿಮಾನಿ ನಿನಗೆ ಇದೋ
ನಮ್ಮ ಪ್ರಣಾಮ
ಇವನೇ ನೋಡು ಸೈನಿಕ.|೨|
ದೇಶಕ್ಕೆ ಎಲ್ಲಾನೂ ತ್ಯಾಗ ಮಾಡಿದ
ವೇಶದ ಮಾತೆಂದರೆ ಗೊತ್ತಿಲ್ಲದ
ಭಾಷೆ ಧರ್ಮದ ಹಂಗೆ ಇಲ್ಲ
ಎಲ್ಲರ ರಕ್ಷಣೆ ನಿನ್ನ ಗುರಿ .
ಬೇದ ಭಾವದ ಮಾತೇ ಇಲ್ಲ
ಮಾತೆಯ ಸೇವಕ ನೀನು
ನಿನ್ನ ಶೌರ್ಯವೂ, ನಮ್ಮ ಗರ್ವವೂ
ತನ್ನ ಕಷ್ಟದಿ ಇತರರ ಸುಖವ ಬಯಸೊ
ಆ ಗುಣ
ತಾಯ ರಕ್ಷಣೆಗಾಗಿ ಇವನು ಮಾಡಿದ ಪ್ರಮಾಣ .
ಇವನೇ ನೋಡುಸೈನಿಕ|೧| ಬಿಸಿಲೇ ಇದ್ದರೂ
ಗುಂಡಿನ ಎದುರು ನಗುವಂತ ಭೂಪ
ಗುಂಡಿಗೆ ಕೊಟ್ಟು ಸೆಣಸಾಡೋ ಧೀರ
ಯಾವುದೆ ತೊಂದರೆ ಬರದುನಿನಗೆ
ನಾವಿರುವೆವು ನಿನ್ನೊಂದಿಗೆ
ಸೋಲು ಗೆಲುವು ನೋಡಿದ ವೀರ.
ನಮನ ನಿನಗೆ ಸಾವಿರ
ಶಿಸ್ತಿಗೆ ಸಿಪಾಯಿ
ಕರುಣೆಗೆ ತಾಯಿ
ದೇಶದಲ್ಲಿ ಎಲ್ಲೆಡೆ ನಿನ್ನ ಹೆಸರೇ ಸವಾಲು
ಬಗ್ಗದೆ ಕುಗ್ಗದೆ ನುಗ್ಗಿ ಹೊಡೆವ ನಿನ ನಡೆಯೇ ಕಮಾಲು
ಇವನೇ ನೋಡು ಸೈನಿಕ
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)