23 ಆಗಸ್ಟ್ 2019

ಫಿಟ್ ಇಂಡಿಯಾ( fit India)

*ಫಿಟ್ ಇಂಡಿಯಾ*

ಅಂದು

ಗಾಂಧೀಜಿಯವರು ಬ್ರಿಟೀಷರನ್ನು ನಮ್ಮ
ದೇಶದಿಂದ  ಓಡಿಸಲು ಕರೆ ಕೊಟ್ಟರು
ಕ್ವಿಟ್ ಇಂಡಿಯಾ.

ಇಂದು

ಮೋದೀಜಿಯವರು
ನಮ್ಮ ದೇಹದಿಂದ ರೋಗ ರುಜಿನಗಳನ್ನು,ಸೋಮಾರಿತನವನ್ನು ತೊಲಗಿಸಲು ಕರೆ ನೀಡಿದ್ದಾರೆ
ಫಿಟ್ ಇಂಡಿಯಾ.

*ಸಿ .ಜಿ  .ವೆಂಕಟೇಶ್ವರ*
*ಗೌರಿಬಿದನೂರು*

(ಇದೇ ತಿಂಗಳ 29ಕ್ಕೆ ಪಿಟ್ ಇಂಡಿಯಾ ಅಭಿಯಾನ ದೇಶಾದ್ಯಂತ ಆರಂಭ ಬನ್ನಿ ಫಿಟ್ ಆಗೋಣ)

31 ಜುಲೈ 2019

ಯಾರು? (ಹನಿಗವನ)

*ಯಾರು*

ಹುಲಿ ಸಂಖ್ಯೆಯಲ್ಲಿ ಹೆಚ್ಚಳ ( ಪ್ರಜಾವಾಣಿ ಸುದ್ದಿ)

ಎಲ್ಲಾ  ಸಂಸಾರದಲ್ಲಿ
ಇದ್ದೇ ಇರುತ್ತವೆ
ಒಂದುಹುಲಿ
ಒಂದು ಇಲಿ
ಅನುಮಾನ ಒಂದೇ
ಯಾರು ಹುಲಿ?

*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*

30 ಜುಲೈ 2019

ಸಿಹಿ ಜೀವಿಯ ಹನಿಗಳು

*ಸಿಹಿಜೀವಿಯ ಹನಿಗಳು*

*೧*

*ಮಾರ್ಗ*

ಒಳಿತು ಮಾಡುತ್ತಿರಲಿ ಕರ
ಕರುಣೆ, ಪ್ರೀತಿ ತುಂಬಿರಲಿ ಉರ
ಸತ್ಚಿಂತನೆಗಳಿಂದ ತುಂಬಿರಲಿ ಶಿರ
ನಿನ್ನ ಹೆಸರಾಗುವುದು ಅಮರ .

*೨*

*ಇಂದ್ರಿಯ ನಿಗ್ರಹ*


ಅಮರತ್ವ ಸಿಗಬೇಕೆಂದು
ಮಾಡದ ಪೂಜೆಗಳಿಲ್ಲ
ಜಪತಪಗಳಿಲ್ಲ ಧ್ಯಾನ
ಸತ್ಸಂಗಗಳಿಗೆ ಕೊನೆಯಿಲ್ಲ
ಆದರೂ ಅಮರತ್ವದ ಸುಳಿವಿಲ್ಲ
ಕಾರಣ ಇಂದ್ರಿಯಗಳ
ನಿಗ್ರಹ ಆಗಲೇ ಇಲ್ಲ.

*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*

29 ಜುಲೈ 2019

*ದಿನ*(ಹನಿಗವನ)

    *ದಿನ*

ದಿನವು
ಬರುವ ದಿನವೇ
ನೀ ಬರದೆ ದಿನವಿಲ್ಲ
ಬರುವೆ ಅನುದಿನ.

ದೀನ ದಲಿತ
ಬಡವ ಬಲ್ಲಿದ
ಎಂಬ ಬೇಧ
ಮಾಡುವುದಿಲ್ಲ
ದಿನಕರ.

ನೀ ಬಂದ ದಿನವೇ ಶುಭ
ಅಶುಭ ದಿನವಿಲ್ಲ
ಏಕೆಂದರೆ
ದಿನವೂ ನೀನು
ಬರುವೆಯಲ್ಲ.

*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*

26 ಜುಲೈ 2019

ಸೈನಿಕ ,( ಕವನ)





*ಸೈನಿಕ*

(ಕಾರ್ಗಿಲ್ ವಿಜಯ ದಿವಸದ 20 ನೇ ವರ್ಷಾಚರಣೆಯ ನೆನಪಿಗೆ ಸೈನಿಕರಿಗೆ ನುಡಿನಮನ)

ಬಿಸಿಲೇ ಇದ್ದರೂ
ಮಳೆಯೇ ಸುರಿದರೂ
ನಿಂತಾ ನೋಡು ಸೈನಿಕ|ಪ|

ಎದುರಾಳಿ ನಿಂತರೂ
ಯುದ್ದ ನಡೆದರೂ
ಎದೆಕೊಟ್ಟು ನಿಲ್ಲುವ ಸೈನಿಕ|

ಕೂಗಿ ಕೂಗಿ ಹೇಳುತೈತೆ
ನಮ್ಮ ಭಾರತ
ಸ್ವಾಭಿಮಾನಿ ನಿನಗೆ ಇದೋ‌
ನಮ್ಮ ಪ್ರಣಾಮ

ಇವನೇ ನೋಡು ಸೈನಿಕ.|೨|

ದೇಶಕ್ಕೆ ಎಲ್ಲಾನೂ  ತ್ಯಾಗ ಮಾಡಿದ
ವೇಶದ ಮಾತೆಂದರೆ ಗೊತ್ತಿಲ್ಲದ
ಭಾಷೆ ಧರ್ಮದ ಹಂಗೆ ಇಲ್ಲ
ಎಲ್ಲರ ರಕ್ಷಣೆ ನಿನ್ನ ಗುರಿ .

ಬೇದ ಭಾವದ ಮಾತೇ ಇಲ್ಲ
ಮಾತೆಯ ಸೇವಕ ನೀನು
ನಿನ್ನ ಶೌರ್ಯವೂ, ನಮ್ಮ ಗರ್ವವೂ
ತನ್ನ ಕಷ್ಟದಿ ಇತರರ ಸುಖವ ಬಯಸೊ
ಆ ಗುಣ
ತಾಯ ರಕ್ಷಣೆಗಾಗಿ ಇವನು ಮಾಡಿದ ಪ್ರಮಾಣ .

ಇವನೇ ನೋಡು‌ಸೈನಿಕ|೧|  ಬಿಸಿಲೇ ಇದ್ದರೂ

ಗುಂಡಿನ ಎದುರು ನಗುವಂತ ಭೂಪ
ಗುಂಡಿಗೆ ಕೊಟ್ಟು ಸೆಣಸಾಡೋ ಧೀರ
ಯಾವುದೆ ತೊಂದರೆ ಬರದುನಿನಗೆ
ನಾವಿರುವೆವು ನಿನ್ನೊಂದಿಗೆ
ಸೋಲು ಗೆಲುವು ನೋಡಿದ ವೀರ.
ನಮನ ನಿನಗೆ ಸಾವಿರ
ಶಿಸ್ತಿಗೆ ಸಿಪಾಯಿ
ಕರುಣೆಗೆ ತಾಯಿ
ದೇಶದಲ್ಲಿ ಎಲ್ಲೆಡೆ ನಿನ್ನ ಹೆಸರೇ ಸವಾಲು
ಬಗ್ಗದೆ ಕುಗ್ಗದೆ ನುಗ್ಗಿ ಹೊಡೆವ  ನಿನ ನಡೆಯೇ ಕಮಾಲು

ಇವನೇ ನೋಡು ಸೈನಿಕ

*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*