This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
19 ಸೆಪ್ಟೆಂಬರ್ 2019
07 ಸೆಪ್ಟೆಂಬರ್ 2019
ನ್ಯಾನೋ ಕಥೆ(ಹಾರೈಕೆ)ಪ್ರಥಮ ಬಹುಮಾನ ಕವಿ ಕಾವ್ಯ ದೀವಿಗೆ
ಸ್ಪರ್ಧೆಗೆ
*ನ್ಯಾನೋ ಕಥೆ*
ಆರೈಕೆ"
" ನನ್ನ ಮಗ ಅಮೇರಿಕಾದಲ್ಲಿ ದೊಡ್ಡ ಕಂಪನೀಲಿ ಕೆಲಸ ಮಾಡ್ತಾ ಇದ್ದಾನೆ,ನನ್ನ ಹೃದಯದ ಆಪರೇಷನ್ ಮಾಡಿಸಲು ಅಕೌಂಟ್ ಗೆ ಹತ್ತು ಲಕ್ಷ ಹಾಕಿದ್ದಾನೆ ,ನೋಡಿಕೊಳ್ಳಲು ಒಳ್ಳೆಯ ನರ್ಸ್ ನೇಮಕ ಮಾಡಿದ್ದಾನೆ,ನಾಳೇನೆ ಆಪರೇಷನ್, ಆಪರೇಷನ್ ಆದ ಮೇಲೆ ವೀಡಿಯೋ ಕಾಲ್ ಮಾಡಿ ನನ್ನ ಕ್ಷೇಮ ವಿಚಾರಿಸ್ತಾನಂತೆ " ಎಂದು ತನ್ನ ಮಗನ ಕೆಲಸ ಹಣ ಅಂತಸ್ತಿನ ಬಗ್ಗೆ ಹೆಮ್ಮೆಯಿಂದ ಪಕ್ಕದ ಮನೆಯ ಸಾವಿತ್ರಮ್ಮನಿಗೆ ಹೇಳುತ್ತಲೇ ಇದ್ದರು ಬಂಗಾರಮ್ಮ . " ಅಮ್ಮಾ ನಿಧಾನ, ಬಾ ಈ ಸೈಕಲ್ ಮೇಲೆ ಕೂತ್ಕೋ ಆಸ್ಪತ್ರೆಗೆ ಹೋಗೋಣ ,ಬೆಳಿಗ್ಗೆಯಿಂದ ನೆಗೆಡಿ ಕೆಮ್ಮು ಸುಸ್ತು ಅಂತಿದ್ದೆ ,ಲೇಟಾದ್ರೆ ಡಾಕ್ಟರ್ ಸಿಗಲ್ಲ ಎಂದು ಅಮ್ಮನನ್ನು ಸೈಕಲ್ ಮೇಲೆ ಕೂರಿಸಿಕೊಂಡ ಸುರೇಶ್ ಸೈಕಲ್ ತುಳಿಯುತ್ತಾ ಕಣ್ಮರೆಯಾಗುವವರೆಗೂ ನೋಡುತ್ತಲೇ ನಿಂತರು ಬಂಗಾರಮ್ಮ...
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
03 ಸೆಪ್ಟೆಂಬರ್ 2019
ಗಜಲ್ ೫೮ (ನಾರಿಕೇಳ)
*ಗಜ್ಹಲ್೫೮*
ಕಲಿಯುಗದ ಕಲ್ಪವೃಕ್ಷವೆಂದು ಹೆಸರಾಗಿದೆ ನಾರಿಕೇಳ.
ನಾರಿಯರ ನೀಳ ಕೂದಲಿಗೆ ಕಾರಣವಾಗಿದೆ ನಾರಿಕೇಳ.
ಭಗವಂತನಿಗೆ ಅರ್ಪಿಸಲು ಕಾಯಿ ನೀಡುವೆ
ಔಷದಿಯ ಆಗರದ ಎಳನೀರು ನೀಡಿದೆ ನಾರಿಕೇಳ.
ಬಡವರ ಗುಡಿಸಲಿಗೆ ತೆಂಗಿನ ಚಾಪೆ ಆಧಾರ
ರೈತರ ಬೇಸಾಯಕೆ ಹಗ್ಗವ ಕರುಣಿಸಿದೆ ನಾರಿಕೇಳ.
ಸಾರಿಗೆ ಸಾರ ಕೊಡಲು ತೆಂಗಿನ ತುರಿ ಬೇಕು
ಸಾಮನ್ಯರ ಉರುವಲಿನ ಮೂಲವಾಗಿದೆ ನಾರಿಕೇಳ.
ಸ್ವಚ್ಛ ಭಾರತ ಅಭಿಯಾನಕೆ ಪೊರಕೆ ನೀಡಿದೆ
ಸಿಹಿಜೀವಿಗಳಿಗೆ ಒಳಿತುಮಾಡುತಲಿದೆ ನಾರಿಕೇಳ
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
ಕಲಿಯುಗದ ಕಲ್ಪವೃಕ್ಷವೆಂದು ಹೆಸರಾಗಿದೆ ನಾರಿಕೇಳ.
ನಾರಿಯರ ನೀಳ ಕೂದಲಿಗೆ ಕಾರಣವಾಗಿದೆ ನಾರಿಕೇಳ.
ಭಗವಂತನಿಗೆ ಅರ್ಪಿಸಲು ಕಾಯಿ ನೀಡುವೆ
ಔಷದಿಯ ಆಗರದ ಎಳನೀರು ನೀಡಿದೆ ನಾರಿಕೇಳ.
ಬಡವರ ಗುಡಿಸಲಿಗೆ ತೆಂಗಿನ ಚಾಪೆ ಆಧಾರ
ರೈತರ ಬೇಸಾಯಕೆ ಹಗ್ಗವ ಕರುಣಿಸಿದೆ ನಾರಿಕೇಳ.
ಸಾರಿಗೆ ಸಾರ ಕೊಡಲು ತೆಂಗಿನ ತುರಿ ಬೇಕು
ಸಾಮನ್ಯರ ಉರುವಲಿನ ಮೂಲವಾಗಿದೆ ನಾರಿಕೇಳ.
ಸ್ವಚ್ಛ ಭಾರತ ಅಭಿಯಾನಕೆ ಪೊರಕೆ ನೀಡಿದೆ
ಸಿಹಿಜೀವಿಗಳಿಗೆ ಒಳಿತುಮಾಡುತಲಿದೆ ನಾರಿಕೇಳ
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
02 ಸೆಪ್ಟೆಂಬರ್ 2019
01 ಸೆಪ್ಟೆಂಬರ್ 2019
ಸುಭಿಕ್ಷವ ನೀಡು
*ಗೌರಿ ಗಣೇಶ ಹಬ್ಬದ ಶುಭಾಶಯಗಳು*
*ಸುಭಿಕ್ಷವ ನೀಡು*
ಗಣನಾಯಕ ಬೆನಕನೆ
ನೀಡುವೆ ನಿನಗೆ ಕಡುಬನ್ನ
ಮೂಷಿಕವಾಹನ ಮೋದಕಹಸ್ತನೆ
ಕರಿಮುಖ ಕಾಯೋ ನಮ್ಮನ್ನ.
ಗೌರಿಯ ಪುತ್ರ ,ಮೊದಲವಂದಿಪ
ಸಂಕಷ್ಟಗಳ ನೀ ನೀಗು
ಸುಬ್ರಹ್ಮಣ್ಯ ಸೋದರ ಗಣಪನೆ
ನಮ್ಮಯ ಬಾಳಿಗೆ ಬೆಳಕಾಗು.
ಗೌರಿತನಯ ವಿಶ್ವ ವಂದ್ಯನೆ
ನಮ್ಮನೆಲ್ಲರ ಒಂದುಗೂಡಿಸು
ಎಕದಂತ ವಕ್ರತುಂಡನೆ
ವಿದ್ಯೆ ಬುದ್ದಿಯ ನೀಡಿ ಹರಸು
ಚಾಮರ ಕರ್ಣ ಶಿವಸುತನೆ
ಭಕ್ತಿಯಲಿ ಹಾಡುವೆ ಈ ಹಾಡು
ವಿಘ್ನವಿನಾಯಕ ಗಜಾನನ
ಧರೆಯಲೆಲ್ಲಾ ಸುಭಿಕ್ಷವ ನೀಡು
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
*ಸುಭಿಕ್ಷವ ನೀಡು*
ಗಣನಾಯಕ ಬೆನಕನೆ
ನೀಡುವೆ ನಿನಗೆ ಕಡುಬನ್ನ
ಮೂಷಿಕವಾಹನ ಮೋದಕಹಸ್ತನೆ
ಕರಿಮುಖ ಕಾಯೋ ನಮ್ಮನ್ನ.
ಗೌರಿಯ ಪುತ್ರ ,ಮೊದಲವಂದಿಪ
ಸಂಕಷ್ಟಗಳ ನೀ ನೀಗು
ಸುಬ್ರಹ್ಮಣ್ಯ ಸೋದರ ಗಣಪನೆ
ನಮ್ಮಯ ಬಾಳಿಗೆ ಬೆಳಕಾಗು.
ಗೌರಿತನಯ ವಿಶ್ವ ವಂದ್ಯನೆ
ನಮ್ಮನೆಲ್ಲರ ಒಂದುಗೂಡಿಸು
ಎಕದಂತ ವಕ್ರತುಂಡನೆ
ವಿದ್ಯೆ ಬುದ್ದಿಯ ನೀಡಿ ಹರಸು
ಚಾಮರ ಕರ್ಣ ಶಿವಸುತನೆ
ಭಕ್ತಿಯಲಿ ಹಾಡುವೆ ಈ ಹಾಡು
ವಿಘ್ನವಿನಾಯಕ ಗಜಾನನ
ಧರೆಯಲೆಲ್ಲಾ ಸುಭಿಕ್ಷವ ನೀಡು
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)