This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
25 ಸೆಪ್ಟೆಂಬರ್ 2019
24 ಸೆಪ್ಟೆಂಬರ್ 2019
22 ಸೆಪ್ಟೆಂಬರ್ 2019
19 ಸೆಪ್ಟೆಂಬರ್ 2019
07 ಸೆಪ್ಟೆಂಬರ್ 2019
ನ್ಯಾನೋ ಕಥೆ(ಹಾರೈಕೆ)ಪ್ರಥಮ ಬಹುಮಾನ ಕವಿ ಕಾವ್ಯ ದೀವಿಗೆ
ಸ್ಪರ್ಧೆಗೆ
*ನ್ಯಾನೋ ಕಥೆ*
ಆರೈಕೆ"
" ನನ್ನ ಮಗ ಅಮೇರಿಕಾದಲ್ಲಿ ದೊಡ್ಡ ಕಂಪನೀಲಿ ಕೆಲಸ ಮಾಡ್ತಾ ಇದ್ದಾನೆ,ನನ್ನ ಹೃದಯದ ಆಪರೇಷನ್ ಮಾಡಿಸಲು ಅಕೌಂಟ್ ಗೆ ಹತ್ತು ಲಕ್ಷ ಹಾಕಿದ್ದಾನೆ ,ನೋಡಿಕೊಳ್ಳಲು ಒಳ್ಳೆಯ ನರ್ಸ್ ನೇಮಕ ಮಾಡಿದ್ದಾನೆ,ನಾಳೇನೆ ಆಪರೇಷನ್, ಆಪರೇಷನ್ ಆದ ಮೇಲೆ ವೀಡಿಯೋ ಕಾಲ್ ಮಾಡಿ ನನ್ನ ಕ್ಷೇಮ ವಿಚಾರಿಸ್ತಾನಂತೆ " ಎಂದು ತನ್ನ ಮಗನ ಕೆಲಸ ಹಣ ಅಂತಸ್ತಿನ ಬಗ್ಗೆ ಹೆಮ್ಮೆಯಿಂದ ಪಕ್ಕದ ಮನೆಯ ಸಾವಿತ್ರಮ್ಮನಿಗೆ ಹೇಳುತ್ತಲೇ ಇದ್ದರು ಬಂಗಾರಮ್ಮ . " ಅಮ್ಮಾ ನಿಧಾನ, ಬಾ ಈ ಸೈಕಲ್ ಮೇಲೆ ಕೂತ್ಕೋ ಆಸ್ಪತ್ರೆಗೆ ಹೋಗೋಣ ,ಬೆಳಿಗ್ಗೆಯಿಂದ ನೆಗೆಡಿ ಕೆಮ್ಮು ಸುಸ್ತು ಅಂತಿದ್ದೆ ,ಲೇಟಾದ್ರೆ ಡಾಕ್ಟರ್ ಸಿಗಲ್ಲ ಎಂದು ಅಮ್ಮನನ್ನು ಸೈಕಲ್ ಮೇಲೆ ಕೂರಿಸಿಕೊಂಡ ಸುರೇಶ್ ಸೈಕಲ್ ತುಳಿಯುತ್ತಾ ಕಣ್ಮರೆಯಾಗುವವರೆಗೂ ನೋಡುತ್ತಲೇ ನಿಂತರು ಬಂಗಾರಮ್ಮ...
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)

 




