ಹಾಯ್ಕಗಳು..
೧
ಸುಂಧರ ಧರೆ
ಸಕಲಜೀವಿಗಳ
ಆವಾಸಸ್ಥಾನ .
೨
ಆವಾರದಲಿ
ಮಕ್ಕಳಾಟವ ನೋಡಿ
ಆನಂದ ಪಡು .
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ತುಮಕೂರು
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಹಾಯ್ಕಗಳು..
೧
ಸುಂಧರ ಧರೆ
ಸಕಲಜೀವಿಗಳ
ಆವಾಸಸ್ಥಾನ .
೨
ಆವಾರದಲಿ
ಮಕ್ಕಳಾಟವ ನೋಡಿ
ಆನಂದ ಪಡು .
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ತುಮಕೂರು
ರಚನಾತ್ಮಕ ಟೀಕೆಗಳನ್ನು ಸ್ವೀಕರಿಸೋಣ.
ಒಂದು ದಿನ ಬುದ್ಧನು ಭಿಕ್ಷಾಟನೆ ಮಾಡುತ್ತಾ ಮನೆಯೊಂದರ ಮುಂದೆ ನಿಲ್ಲುತ್ತಾನೆ. ಮೊದಲೇ ಸಿಡಿಮಿಡಿಗೊಳ್ಳುತ್ತಾ ಮನೆಯಿಂದ ಹೊರಗೆ ಬಂದ ಮನೆಯೊಡತಿ ಎದುರಲ್ಲಿ ನಿಂತಿದ್ದ ಬುದ್ಧನನ್ನು ನೋಡಿ ಕೆಂಡಾಮಂಡಲವಾದಳು. "ನೋಡೋದಕ್ಕೆ ಒಳ್ಳೆ ಗೂಳಿ ತರಹ ಇದ್ದೀಯಾ, ಏನಾದರೂ ಕೆಲಸ ಮಾಡಿಕೊಂಡು ಬದುಕುಬಹುದಲ್ಲಾ…ನೀನು ಸೋಮಾರಿಯಾಗುವುದಲ್ಲದೆ ನಿನ್ನ ಶಿಷ್ಯರು ಎಂದು ಹೇಳಿಕೊಳ್ಳುತ್ತಿರುವ ಇವರನ್ನೂ ಸೋಮಾರಿಗಳನ್ನಾಗಿ ಮಾಡುತ್ತಿದ್ದೀಯಾ" ಎಂದು ಬಾಯಿಗೆ ಬಂದಂತೆ ಬೈಯುತ್ತಾಳೆ.
ಆದರೆ ಬುದ್ಧನು ಆಕೆಯ ಕೋಪದ,ತಾಪದ, ಅವಹೇಳನದ ಮಾತುಗಳನ್ನು ಕೇಳುತ್ತಾ ಕಿರುನಗೆ ಬೀರಿದನೇ ಹೊರತು ಮರು ಮಾತನಾಡಲಿಲ್ಲ. ಆದರೆ ಅವರ ಶಿಷ್ಯರು ಮಾತ್ರ ಕೋಪದಿಂದ ಬುಸುಗುಡುತ್ತಿದ್ದರು. ಆಗ ಬುದ್ಧ ಅವರಿಗೆ ಸಮಾಧಾನ ಹೇಳಿದ,ನಂತರ
ಆಕೆಯನ್ನು ಉದ್ದೇಶಿಸಿ ಪ್ರಸನ್ನ ವದನನಾಗಿ…" ಮಾತೆ! ನನ್ನ ಸಣ್ಣ ಸಂದೇಹವೊಂದನ್ನು ನಿವಾರಿಸುತ್ತೀರಾ? " ಎಂದು ಕೇಳಿದ. ಅದಕ್ಕೆ ಆಕೆ "ಅವಶ್ಯವಾಗಿ ನಿನ್ನ ಸಂದೇಹ ತೀರಿಸುತ್ತೇನೆ" ಎಂದಳು. ಬುದ್ಧನು ತನ್ನ ಕೈಯಲ್ಲಿನ ಭಿಕ್ಷಾಪಾತ್ರೆಯನ್ನು ತೋರುತ್ತಾ… "ತಾಯಿ! ನಾನು ನಿನಗೆ ಒಂದು ವಸ್ತುವನ್ನು ಕೊಟ್ಟಾಗ ಅದನ್ನು ತಿರಸ್ಕರಿಸಿದರೆ ಅದು ಯಾರಿಗೆ ಸೇರುತ್ತದೆ? "ಎಂದು ಕೇಳಿದ. ಅದಕ್ಕೆ ಆಕೆ "ನಾನು ತೆಗೆದುಕೊಳ್ಳದೆ ತಿರಸ್ಕರಿಸಿದೆನಾದ್ದರಿಂದ ಆ ವಸ್ತು ನಿನಗೇ ಸೇರುತ್ತದೆ" ಉತ್ತರ ಕೊಟ್ಟಳು.
"ಹಾಗೆಯೇ…ತಾಯಿ! ನಾನು ನಿನ್ನ ಬೈಗುಳ ಸ್ವೀಕರಿಸುತ್ತಿಲ್ಲ" ಎನ್ನುತ್ತಿದ್ದಂತೆ ಆಕೆ ತನ್ನ ತಪ್ಪಿನ ಅರಿವಾಗಿ ನಾಚಿಕೆಯಿಂದ ತಲೆತಗ್ಗಿಸಿದಳು.
ಕೆಲವೊಮ್ಮೆ ಅನವಶ್ಯಕವಾಗಿ ಕೆಲವರು ನಮ್ಮನ್ನು ಅವಹೇಳನ ಮಾಡುವವರು, ಆಡಿಕೊಳ್ಳುವವರು. ಕೆಲವರು ಬಹಿರಂಗವಾಗಿ ಟೀಕಿಸಿದರೆ, ಇನ್ನೂ ಕೆಲವರು ಹಿಂದೆ ಆಡಿಕೊಳ್ಳುತ್ತಾರೆ. ಒಟ್ಟಾರೆ ಬೇರೆಯವರ ಬಗ್ಗೆ ಆಡಿಕೊಳ್ಳದಿದ್ದರೆ ಪಾಪ.. ಅವರು ತಿಂದ ಅನ್ನ ಜೀರ್ಣವಾಗುವುದಿಲ್ಲ. ಅಂತಹ ವಿಘ್ನ ಸಂತೋಷಿಗಳ ಬಗ್ಗೆ ನಾವು ತಲೆಕೆಡಿಸೊಕೊಳ್ಳಬೇಕಿಲ್ಲ. ನಮ್ಮ ಹಿಂದೆ ನಮ್ಮ ಬಗ್ಗೆ ಮಾತನಾಡಲು ಜನ ಶುರುಮಾಡಿದ್ಧಾರೆ ಎಂದರೆ ಅವರಿಗಿಂತ ನಾವು ಅಷ್ಟರಮಟ್ಟಿಗೆ ಮುಂದಿದ್ದೇವೆ ಎಂದರ್ಥ. ನಿಂದಕರಿರಬೇಕು ಹಂದಿಯ ಹಾಗೆ ಎಂಬ ಮಾತಿನಂತೆ ಸಕಾರಣ, ಸಕಾರಾತ್ಮಕ, ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಿ ನಡೆಯೋಣ .ಕಾಲೆಳೆಯುತ್ತಾ ಇತರರ ಬಗ್ಗೆ ಕಾಲಹರಣ ಮಾಡುವವರ ನಿರ್ಲಕ್ಷಿಸೋಣ. ಹೊಟ್ಟೆ ಕಿಚ್ಚಿನ ಟೀಕೆಗಳನ್ನು ಮೆಟ್ಟಿ ನಿಂತು ಸಾಧಿಸಿ ತೋರಿಸೋಣ.
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ತುಮಕೂರು
ಶಿಕ್ಷಕರು.
ಮಾನವರಾಗೋಣ ೬
ಜಗತ್ತನ್ನೇ ಗೆದ್ದ ಅಲೆಕ್ಸಾಂಡರ್ ತನ್ನ ಮರಣ ಕಾಲದ ಒಂದು ದಿನ ತನ್ನ ಸೇನಾಧಿಪತಿಯನ್ನು ಕರೆದು "ಮೂರು" ಅಪ್ಪಣೆ ಮಾಡಿದ.
ಮೊದಲನೇಯದು, ನನ್ನ ಮರಣದ ನಂತರ, ನನ್ನ ಶವ ಪೆಟ್ಟಿಗೆಯನ್ನು ಇಡೀ ದೇಶಗಳಲ್ಲಿನ ಪ್ರಸಿದ್ದ ವೈದ್ಯರಾದವರು ಹೊರಬೇಕು.
ಎರಡು, ನನ್ನ ಅಧಿಕಾರದ ಅವಧಿಯಲ್ಲಿ ಸಂಪಾದನೆ ಮಾಡಿದ ಎಲ್ಲ ಹೊನ್ನು, ವಜ್ರ, ಬೆಲೆ ಬಾಳುವ ಮಣಿ ಗಳನ್ನು, ನನ್ನನ್ನು ಸ್ಮಶಾನಕ್ಕೆ ಕೊಂಡೊಯ್ಯುವ ದಾರಿಯುದ್ದಕ್ಕೂ ಎಸೆದು ಚಲ್ಲಬೇಕು.
ಮೂರು, ನನ್ನ ಎರಡೂ ಕೈಗಳು ಶವಪೆಟ್ಟಿಯ ಹೊರಗೆ ಎಲ್ಲರಿಗೂ ಕಾಣಿಸುವಂತೆ ಇರಿಸಬೇಕು.
ಅರ್ಥವಾಗದ ಸೇನಾಧಿಪತಿ , ಈ ತಮ್ಮ ಕೋರಿಕೆ ಏಕೆಂದು ಕೇಳಬಹುದೇ ಎಂದು ಪ್ರಶ್ನಿಸಿದ.
ಅಲೆಕ್ಸಾಂಡರ್ ನ ಉತ್ತರ ಹೀಗಿತ್ತು!
ಪ್ರಪಂಚದಲ್ಲಿಯೇ ಪ್ರಖ್ಯಾತರಾದ ವೈದ್ಯರಿಂದಲೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂಬ ಅರಿವು ಜನರಲ್ಲಿ ಮೂಡಿಸಲು ಪ್ರಖ್ಯಾತ ವೈದ್ಯರು ನನ್ನ ಶವ ಪೆಟ್ಟಿಗೆ ಹೊರಲು ಹೇಳಿದೆ.ನನ್ನ ಆಡಳಿತ ಕಾಲದಲ್ಲಿ ಸಂಪಾದಿಸಿದ ಎಲ್ಲವೂ ಈ ಮಣ್ಣಿನಿಂದ ಬಂದಿದ್ದು ಅದನ್ನು ನಾನು ಕೊಂಡೊಯ್ಯಲಾಗದು. ಹಾಗಾಗಿ ಅದು ಮತ್ತೆ ಮಣ್ಣಿನಲ್ಲೇ ಉಳಿಯಲಿದೆ ಎಂಬುದನ್ನು ಪ್ರಜೆಗಳಿಗೆ ತಿಳಿಸಲೆಂದು ವಜ್ರ, ಬಂಗಾರ ಮುಂತಾದ ಸಂಪತ್ತನ್ನು ಭೂಮಿಗೆ ಎಸಯಲಿಕ್ಕೆ ಹೇಳಿದೆ.
ಇನ್ನು ಶವಪೆಟ್ಟಿಯ ಹೊರಗಿಟ್ಟ ನನ್ನ ಎರಡೂ ಕೈಗಳನ್ನೂ ಪ್ರಜೆಗಳು ನೋಡುವ ಉದ್ದೇಶವೆಂದರೆ
ಪ್ರಪಂಚವನ್ನು ಗೆದ್ದ ಅಲೆಕ್ಸಾಂಡರ್ ಸತ್ತಾಗ ಅವನ ಕೈಯಲ್ಲಿ ಏನೂ ಇರಲಿಲ್ಲ ಎಂಬುದು ಪ್ರಜೆಗಳಿಗೆ ತಿಳಿಯಲಿ ಎಂದು.
ಈ ಉತ್ತರಗಳು ನಾವು ಪ್ರತಿಯೊಬ್ಬರೂ ಪ್ರತಿದಿನ ಚಿಂತನ ಮಂಥನ ಮಾಡಬೇಕಾದ ಅಂಶಗಳು.
ಕಾಲಾಯ ತಸ್ಮೈನಮಃ ಎಂಬಂತೆ ನಮ್ಮ ಕೈಯಲ್ಲಿ ಏನೂ ಇಲ್ಲ. ಜಾತಸ್ಯ ಮರಣಂ ಧ್ರುವಂ ಎಂಬಂತೆ ಹುಟ್ಟು ಆಕಸ್ಮಿಕ ಮರಣ ಖಚಿತ . ನಮ್ಮ ಸರದಿ ಬಂದಾಗ ನಾವು ಹೋಗಲೇಬೇಕು ಆ ಸಮಯದಲ್ಲಿ ನಾವು ಜೀವಿಸಿದ ಪರಿಯನ್ನು ನಾವು ಆತ್ಮಾವಲೋಕನ ಮಾಡಿಕೊಂಡು ಒಳಿತೆನೆಡೆಗೆ ಸಾಗಬೇಕಿದೆ.
ಅಲೆಕ್ಸಾಂಡರ್ ನ ಎರಡನೇ ಮತ್ತು ಮೂರನೇ ಉತ್ತರ ಪರಸ್ಪರ ಸಂಬಂಧವನ್ನು ಹೊಂದಿವೆ .ಅನಾದಿ ಕಾಲದಿಂದಲೂ ಜನ ಹೆಣ್ಣು, ಮಣ್ಣು, ಹೊನ್ನಿಗಾಗಿ ಹಾತೊರೆದು ತೊಳಲಾಡಿ ,ಬಡಿದಾಡಿ ಬರಿಗೈಯಲಿ ಅಳಿದುಹೋಗಿರುವುದು ನಮಗೇ ತಿಳಿದೇ ಇದೆ.ಆದರೂ ನಾವು ಈಗಲೂ
ಭೌತಿಕ ಸಂಪತ್ತಿನ ಹಿಂದೆ ಓಡುತ್ತಾ, ಅನೈತಿಕವಾಗಿ ಆಸ್ತಿ ಮಾಡುವುದನ್ನು ನಿಲ್ಲಿಸುವುದೇ ಇಲ್ಲ. ಆಗಾಗ್ಗೆ ಸ್ಮಶಾನ ವೈರಾಗ್ಯದಂತೆ ಆಸೆಗೆ ಮಿತಿ ಹೇರಿಕೊಂಡರೂ ಮತ್ತೆ ಅತಿಯಾಸೆಯಿಂದ ಅಕ್ರಮದಲ್ಲಿ ತೊಡಗಿ ಬೆಂಕಿಯ ಕಡೆ ಪತಂಗದ ಪಯಣ ಮಾಡುವಂತೆ ಓಡುತ್ತೇವೆ.
ಪ್ರತಿದಿನವೂ ಅಲೆಕ್ಸಾಂಡರ್ ನ ಮಾತುಗಳನ್ನು ಮೆಲುಕು ಹಾಕೋಣ .
ನಿಜವಾದ ಶಾಂತಿ ನೆಮ್ಮದಿ ಹಣ ಐಶ್ವರ್ಯದಲ್ಲಿ ಇಲ್ಲ ಅದು ನಮ್ಮ ಒಳಗೆ ಇದೆ ಅದನ್ನು ಹುಡುಕುವ ಪ್ರಯತ್ನ ಮಾಡೋಣ.ಮಾನವರಾಗೋಣ .
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ಶಿಕ್ಷಕರು
ತುಮಕೂರು.
ಪದೇ ಪದೇ ತಲೆ ಬಾಚುವಳು
ಅಲಂಕಾರ ಮಾಡಿಕೊಳ್ಳುವಳು
ಮತ್ತೊಮ್ಮೆ ಕನ್ನಡಿಯಲ್ಲಿ
ನೋಡಿಕೊಳ್ಳುವಳು
ಅಂದು ಕೊಳ್ಳುವಳು
ನಾನೇ ಸುಂದರಿ|
ಕನ್ನಡಿಯ ಮುಂದೆ
ಅತಿ ಹೆಚ್ಚು ಕಾಲ ಕಳೆವ
ಇವಳು ನಿಜಕ್ಕೂ ದರ್ಪಣ ಸುಂದರಿ||
ಸಿಹಿಜೀವಿ
ಸಿ ಜಿ ವೆಂಕಟೇಶ್ವರ.
*ಒಳಿತು ಮಾಡಿ ಬಿಡೋಣ*
ಅವನಿಗೆ ಬಿಟ್ಟು
ಯಾರಿಗೂ ತಿಳಿದಿಲ್ಲ
ಎಂದು ನಮ್ಮ ಅಂತಿಮ ಯಾನ |
ನಾಲ್ಕು ಜನಕ್ಕಾದರೂ
ಒಳಿತು ಮಾಡಿಬಿಡೋಣ
ಅಪೇಕ್ಷಿಸದೇ ಮಾನ ಸಮ್ಮಾನ ||
*ಸಿಹಿಜೀವಿ*
ಸಿ ಜಿ ವೆಂಕಟೇಶ್ವರ