This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
08 ಅಕ್ಟೋಬರ್ 2023
ಸೆಲ್ಯುಲಾರ್ ಜೈಲ್...ಅಂಡಮಾನ್..
06 ಅಕ್ಟೋಬರ್ 2023
ಸಿಹಿಜೀವಿ ಕಂಡ ಅಂಡಮಾನ್ ಭಾಗ ೨
ಭಾಗ ೨
ಕೆಂಪೇಗೌಡ ಏರ್ಪೋರ್ಟ್ ನಲ್ಲಿ..
ತುಮಕೂರಿನಿಂದ ಬಸ್ ನ ಮೂಲಕ ಹೊರಟ ನಾವು ದೇವನಹಳ್ಳಿ ತಲುಪಿದಾಗ ಕೆಂಪೇಗೌಡರ ಬೃಹತ್ ಕಂಚಿನ ವಿಗ್ರಹ ನಮ್ಮ ಎಡಭಾಗದಲ್ಲಿ ಗೋಚರಿಸಿತು.ಅದರ ಮುಂದೆ ಸಾಗಿದಾಗ ಸಿಕ್ಕಿದ್ದೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ. ನಾವು ಅಂಡಮಾನ್ ತಲುಪಲು ಬೆಂಗಳೂರಿನಿಂದ ಚೆನ್ನೈ ಗೆ ವಿಮಾನದ ಮೂಲಕ ತೆರಳಿ ಅಲ್ಲಿಂದ ಪೋರ್ಟ್ ಬ್ಲೇರ್ ಗೆ ಪಯಣ ಮಾಡಲು ಟಿಕೆಟ್ ಬುಕ್ ಆಗಿತ್ತು.
ಬೋರ್ಡಿಂಗ್ ಪಾಸ್ ಪಡೆದು ಚೆಕ್ ಇನ್ ಆಗಲು ತೆರಳಿದ ನಮ್ಮ ಪ್ರವಾಸಿ ತಂಡಕ್ಕೆ ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಡಿಜಿ ಯಾತ್ರಾ ಎಂಬ ಉಪಕ್ರಮದ ಮೂಲಕ ಸುಲಭವಾಗಿ ಚೆಕ್ ಇನ್ ಆಗಲು ಸಹಾಯ ಮಾಡಿದರು. ಲಗೇಜ್ ಕೌಂಟರ್ ನಲ್ಲಿ ನಮ್ಮ ಲಗೇಜ್ ನೀಡಿ ವಿಮಾನ ಏರಲು 12 ನೇ ಕೌಂಟರ್ ನಲ್ಲಿ ಚೆಕ್ ಇನ್ ಆಗಿ ನಮ್ಮ ವಿಮಾನದತ್ತ ತರಳಿದೆವು. ಆಗ ನಮ್ಮ ಕಣ್ಣಿಗೆ ಕೆಂಪೇಗೌಡ ವಿಮಾನ ನಿಲ್ದಾಣದ ಕೆಲ ಸಂಗತಿಗಳು ಅಚ್ಚರಿ ಮತ್ತು ಹೆಮ್ಮೆ ಮೂಡಿಸಿದವು.
ಈ ನಿಲ್ದಾಣವು 4700 ಎಕರೆಗಳಷ್ಟು ವಿಸ್ತಾರ ಹೊಂದಿದೆ. ಇದು ಬೆಂಗಳೂರು ಮಧ್ಯ ಭಾಗದಿಂದ ಸುಮಾರು 4೦ ಕಿ.ಮಿ. ದೂರದಲ್ಲಿ ದೇವನಹಳ್ಳಿಯಲ್ಲಿದೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದ ಕೊರತೆಯಿಂದ ಹೊಸದಾಗಿ ಜುಲೈ 2005ರಲ್ಲಿ ಇದರ ಕಟ್ಟುವಿಕೆ ಪ್ರಾರಂಭವಾಗಿ, ಮೇ 23, 2008ರಂದು ತನ್ನ ಕಾರ್ಯಾರಂಭ ಮಾಡಿತು. ಇತ್ತೀಚಿಗೆ ಟರ್ಮಿನಲ್ 2 ನಿರ್ಮಾಣವಾಗಿದೆ ಹಾಗೂ ಅದೀಗ ಕಾರ್ಯಾಚರಣೆಯಲ್ಲಿದೆ. ಇದು ಪ್ರಯಾಣಿಕರ ದಟ್ಟಣೆಯ ಆಧಾರದ ಮೇಲೆ ಭಾರತದ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಮನ್ನಣೆ ಪಡೆದಿದೆ.ಹಾಗೂ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
'ಎಕ್ಸ್ಪ್ರೆಸ್ ವೇ' ಮತ್ತು 'ಹೈಸ್ಪೀಡ್ ರೈಲ್ವೆ' ಲೈನಿನ ಯೋಜನೆಯ 'ನೀಲನಕ್ಷೆ' ತಯಾರಾಗಿದೆ. ಟ್ಯಾಕ್ಸಿ ಸೇವೆ, ಮತ್ತು ಕೆ. ಎಸ್. ಆರ್. ಟಿ. ಸಿ ಹವಾನಿಯಂತ್ರಿತ ಬಸ್ಗಳು ಪ್ರತಿ 15 ನಿಮಿಷಕ್ಕೆ ಒಂದರಂತೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಯಾವ ಮೂಲೆಯಿಂದಲಾದರೂ ಹೊರಟು ವಿಮಾನ ನಿಲ್ದಾಣವನ್ನು ಸುಮಾರು ಒಂದರಿಂದ ಒಂದೂವರೆ ಗಂಟೆಗಳಲ್ಲಿ ತಲುಪುವ ವ್ಯವಸ್ಥೆ ಗಮನಾರ್ಹವಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ 'ಬಿ ಐ ಎ ಎಲ್ ಸಹಾಯವಾಣಿ' ಯ ಸೌಲಭ್ಯವಿದೆ. ವಿಮಾನ ನಿಲ್ದಾಣಕ್ಕೆ ಸಂಪರ್ಕ ಮಾರ್ಗ, ಸಾರಿಗೆ ಸೌಲಭ್ಯಗಳ ವಿವರಗಳು, ಮತ್ತು ಸಾಮಾನ್ಯ ಮಾಹಿತಿಗಳನ್ನು ದೂರವಾಣಿಯ ಮೂಲಕ ಕೂಡಲೆ ಪಡೆಯ ಬಹುದು. ವಿಮಾನವೇರುವ ಮೊದಲು ನಡೆಸುವ 'ಭದ್ರತಾ ತಪಾಸಣೆಯ ವಿಧಿ' ಯಲ್ಲಿ ಪ್ರಯಾಣಿಕರು 'ಹಲವು ಕ್ಯೂ' ಗಳಲ್ಲಿ ಕಾದು ಮುಂದುವರೆಯುವ ಬದಲು, 'ಒಂದೇ ಹಂತದ ತಪಾಸಣಾ ವ್ಯವಸ್ಥೆ 'ಯನ್ನು ನಿರೂಪಿಸಲಾಗಿದೆ. 53 'ಚೆಕ್-ಇನ್ ಕೌಂಟರ್' ಗಳು, ಹಾಗೂ 18 'ಸ್ವಯಂ ತಪಾಸಣಾಯಂತ್ರ' ಗಳನ್ನು ಸ್ಥಾಪಿಸಲಾಗಿದೆ. ಮಕ್ಕಳ ಉಪಚಾರ ಹಾಗೂ ಆರೋಗ್ಯ ಸೇವೆಗೆ ಔಷಧಾಲಯ, ಡಯಾಪರ್ ಬದಲಾವಣೆ, ಹಾಲುಕುಡಿಸುವಿಕೆ ಇತ್ಯಾದಿಗಳಿಗೆ ಪ್ರತ್ಯೇಕ ಜಾಗವಿದೆ.
ನಿಲ್ದಾಣದ ಒಳಗಡೆ ಸ್ವದೇಶಿ ಮತ್ತು ವಿದೇಶಿ ಖಾದ್ಯಗಳನ್ನು ಒಳಗೊಂಡ ಹೋಟೆಲ್ ಗಳಿವೆ. ನಮ್ಮ ಅನುಭವ ಕ್ಕಾಗಿ ಒಂದು ಕಾಫಿ ಕುಡಿದೆವು .ಕಾಫಿ ಸಾದಾರಣಾಗಿತ್ತು ಬೆಲೆ ಮಾತ್ರ ತುಸು ದುಬಾರಿ 200 ರೂಪಾಯಿಗಳು! ಎಷ್ಟೇ ಆದರೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲವೇ?
ಸಿಹಿಜೀವಿ ಕಂಡ ಅಂಡಮಾನ್
ಭಾಗ ೧
ಸಿಹಿಜೀವಿ ಕಂಡ ಅಂಡಮಾನ್
ಅಂಡಮಾನ್ ನಲ್ಲಿ ಸಿಹಿಜೀವಿಯ ಸಿಹಿ ನೆನಪುಗಳು..
ಅಂಡಮಾನ್ ನಲ್ಲಿ ಸಿಹಿಜೀವಿ
ಏನಿವು ಒಂದೇ ವಾಕ್ಯವನ್ನು ಬೇರೆ ಬೇರೆ ರೀತಿಯಲ್ಲಿ ಬರೆದಿರುವಿರಲ್ಲ ಎಂಬ ನಿಮ್ಮ ಪ್ರಶ್ನೆ ಅಹಜ. ಈ ವಾಕ್ಯಗಳು ನನ್ನ ಸಹೋದ್ಯೋಗಿ ಬಂಧುಗಳು ನಾನು ಅಂಡಮಾನ್ ಪ್ರವಾಸ ಹೊರಟು ನಿಂತಾಗ ನನ್ನ ಮುಂಬರುವ ಪ್ರವಾಸ ಕುರಿತಾಗಿ ನಾನು ಪ್ರವಾಸ ಕಥನ ಬರೆಯಲೇಬೇಕೆಂದು ಆಗ್ರಹಪೂರ್ವಕವಾಗಿ ನೀಡಿದ ಆಕರ್ಷಕ ಶೀರ್ಷಿಕೆಗಳು! ನನ್ನೆಲ್ಲಾ ಸಹೋದ್ಯೋಗಿ ಬಂಧುಗಳಿಗೆ ನಮನಗಳು
ಖಂಡಿತವಾಗಿಯೂ ಅವರ ನಿರೀಕ್ಷೆ ಹುಸಿಗೊಳಿಸುವುದಿಲ್ಲ.
ನನ್ನ ವಿದ್ಯಾರ್ಥಿಗಳಿಗೆ ಭಾರತದ ಭೂಪಟ ಬರೆಯಲು ಹೇಳಿದರೆ ಅಂಡಮಾನ್ ನಿಕೋಬಾರ್ ಲಕ್ಷ್ಯ ದ್ವೀಪಗಳನ್ನು ಬರೆಯದೇ ನಕ್ಷೆ ಬಿಡಿಸುತ್ತಿದ್ದರು. ಎಷ್ಟು ಬಾರಿ ಹೇಳಿದರೂ ಆ ದ್ವೀಪಗಳನ್ನು ಬರೆಯುತ್ತಿರಲಿಲ್ಲ.ನಾನು ಪದೇ ಪದೇ ದ್ವೀಪಗಳ ಬರೆಯಲು ತಾಕೀತು ಮಾಡಿದಾಗ ಒಬ್ಬ ವಿದ್ಯಾರ್ಥಿ ಕೇಳಿಯೇ ಬಿಟ್ಟ ಸಾರ್ ನೀವು ಅಂಡಮಾನ್ ದ್ವೀಪಗಳ ನೋಡಿದ್ದೀರಾ? ಇಲ್ಲ ಎಂದೆ. ಅಂದೆ ಅಂಡಮಾನ್ ನೋಡುವ ನನ್ನ ಬಯಕೆ ಚಿಗುರೊಡೆಯಿತು.
ಮೈಸೂರಿನ ಸಿ ಟಿ ಇ ನಲ್ಲಿ ಬಿ ಎಡ್ ಓದುವಾಗ ನನ್ನ ಸಹಪಾಠಿಗಳೊಂದಿಗೆ ಪ್ರವಾಸ ಹೋದಾಗ
ನಮ್ಮ ಕರ್ನಾಟಕ ಸೇಂಟ್ ಮೇರೀಸ್ ಐಲ್ಯಾಂಡ್ ನೋಡಿ ಪುಳಕಗೊಂಡಿದ್ದೆ. ಈಗ ಮೂರು ಲಕ್ಷ ಜನಸಂಖ್ಯೆಯಿರುವ ತುಮಕೂರಿನಿಂದ ಮೂರುವರೆ ಚಿಲ್ರೆ ಲಕ್ಷ ಜನಸಂಖ್ಯೆ ಇರುವ ಅಂಡಮಾನ್ ನಿಕೋಬಾರ್ ದ್ವೀಪಕ್ಕೆ ಹೊರಟಿರುವೆ..
ಹೆಚ್ಚಿನ ವಿವರಗಳನ್ನು ನಂತರ ನೀಡುವೆ.
05 ಅಕ್ಟೋಬರ್ 2023
ವಿಶ್ವ ಕ್ರಿಕೆಟ್ ಹಬ್ಬ
ವಿಶ್ವ ಕ್ರಿಕೆಟ್ ಹಬ್ಬ
ವಿಶ್ವ ಕ್ರಿಕೆಟ್ ಹಬ್ಬ ಶುರುವಾಗಿದೆ
ಕಾದು ಕುಳಿತಿಹೆವು ಕಣ್ತುಂಬಿಕೊಳ್ಳಲು
ದಾಂಡಿಗರ, ಎಸೆತಗಾರರ ,ಕ್ಷೇತ್ರ ರಕ್ಷಕರ ಚಮತ್ಕಾರ|
ಯಾರು ಗೆದ್ದರೂ ಸಂತೋಷ
ಪ್ರತಿ ಮನೆ ಮನದಲ್ಲೂ ಮನರಂಜನೆಯ ಸಡಗರ||
ಸಿಹಿಜೀವಿ ವೆಂಕಟೇಶ್ವರ
ತುಮಕೂರು.
01 ಅಕ್ಟೋಬರ್ 2023
ದಿಟ್ಟ ನೀರೆ ನೀರಾ ಆರ್ಯ...
ದಿಟ್ಟ ನೀರೆ ನೀರಾ ಆರ್ಯ.
ಸ್ವಾತಂತ್ರ್ಯ ಹೋರಾಟದಲ್ಲಿ ತಾಯ್ನಾಡಿನ ಸೇವೆಗೆ ಅಡ್ಡಿಯಾದ ಗಂಡನನ್ನೇ ಕೊಂದು ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅಂಡಮಾನ್ ನ ಸೆಲ್ಯುಲಾರ್ ಜೈಲಿನಲ್ಲಿ ಕಾಲಾಪಾನಿ ಶಿಕ್ಷೆಗೆ ಗುರಿಯಾದ ಮಹಾನ್ ಹೋರಾಟಗಾರ್ತಿ ನೀರಾ ಆರ್ಯ!
ನೀರಾ ಆರ್ಯ ಅವರು ಮಾರ್ಚ್ 5 1902 ರಂದು ಖೇಕ್ರಾ ನಗರದಲ್ಲಿ ಜನಿಸಿದರು. ಅವರ ತಂದೆ ಶ್ರೀಮಂತ ಉದ್ಯಮಿಯಾಗಿದ್ದರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಕಲ್ಕತ್ತಾದಲ್ಲಿ ಮುಗಿಸಿದರು.ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿದ ನೀರಾ ಸುಭಾಷ್ ಚಂದ್ರ ಬೋಸರ ಕಟ್ಟಾ ಅಭಿಮಾನಿ. ಅವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಸೇರಿ. INA ಯ ರಾಣಿ ಆಫ್ ಝಾನ್ಸಿ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸಿದರು.
ನೀರಾ ಆರ್ಯ ಅವರು ಬ್ರಿಟಿಷ್ ಸಿಐಡಿ ಅಧಿಕಾರಿಯಾಗಿದ್ದ ಶ್ರೀಕಾಂತ್ ಜೈರಂಜನ್ ದಾಸ್ ಅವರನ್ನು ವಿವಾಹವಾಗಿದ್ದರು. ನೀರಾರವರು ಭಾರತೀಯ ರಾಷ್ಟ್ರೀಯ ಸೇನೆಗೆ ಸೇರಿದ್ದಾರೆ ಎಂದು ಅರಿತ ಶ್ರೀಕಾಂತ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ನೀರಾ ಅವರು ಹತ್ಯೆ ಮಾಡಬೇಕೆಂದು ಬಯಸಿದ್ದರು. ನೀರಾರವರು ನಿರಾಕರಿಸಿದಾಗ, ನೇತಾಜಿಯನ್ನೇ ಹತ್ಯೆ ಮಾಡಲು ನೇತಾಜಿ ಇರುವ ಸ್ಥಳವನ್ನು ಬಹಿರಂಗಪಡಿಸಬೇಕೆಂದು ಶ್ರೀಕಾಂತ್ ಬಯಸಿದ್ದರು. ವಿಫಲವಾದ ಹತ್ಯೆಯ ಪ್ರಯತ್ನದ ಸಂದರ್ಭದಲ್ಲಿ, ಶ್ರೀಕಾಂತ್ ನೇತಾಜಿ ಕಡೆಗೆ ಗುಂಡು ಹಾರಿಸಿದ್ದರು. ನೇತಾಜಿ ಗುಂಡಿನ ದಾಳಿಯಿಂದ ಬದುಕುಳಿದರು. ಆದರೆ ಅವರ ಚಾಲಕ ಕೊಲ್ಲಲ್ಪಟ್ಟರು. ಇದನ್ನು ಕೇಳಿದ ನೀರಾರವರು ಶ್ರೀಕಾಂತ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು.
ಶ್ರೀಕಾಂತ್ನನ್ನು ಕೊಂದಿದ್ದಕ್ಕಾಗಿ ನೀರಾರವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿ ಬಂಧಿಯಾಗಿದ್ದರು ಮತ್ತು ಅಮಾನುಷವಾಗಿ ಚಿತ್ರಹಿಂಸೆ ನೀಡಲಾಯಿತು ನೇತಾಜಿ ಇರುವ ತಾಣವನ್ನು ಬಹಿರಂಗಪಡಿಸಲು ಅಧಿಕಾರಿಗಳು ನೇತಾಜಿ ಎಲ್ಲಿರುವರು ಹೇಳು ಎಂದು ಕೇಳಿದಾಗ ಮೀರಾರವರು ಬ್ರಿಟೀಷರ ಮೇಲಿನ ಸಿಟ್ಟು ಮತ್ತು ಸುಭಾಷ್ ರವರ ಮೇಲಿನ ಹೆಮ್ಮೆಯಿಂದ ನೇತಾಜಿ ನನ್ನ ಹೃದಯದಲ್ಲಿ ಇರುವರು ಎಂದಾಗ ದುರುಳ ಬ್ರಿಟಿಷ್ ಅಧಿಕಾರಿಗಳು ನಿರ್ದಯವಾಗಿ ಅವರ ಸ್ತನಗಳನ್ನು ಕತ್ತರಿಸಿದರು.
ಸ್ವಾತಂತ್ರ್ಯಾನಂತರ ನೀರಾರವರ ಬಿಡುಗಡೆಯಾಯಿತು. ತಮ್ಮ ಕೊನೆಯ ದಿನಗಳನ್ನು ಹೈದರಾಬಾದ್ ನಲ್ಲಿ ಕಳೆದರು. ಜುಲೈ 26 1998 ರಂದು ಕೊನೆಯುಸಿರೆಳೆದರು.
ನಮ್ಮ ಇಂದಿನ ಸ್ವಾತಂತ್ರ್ಯದ ಹಿಂದೆ ಇಂತಹ ಮಹಾನ್ ಹೋರಾಟಗಾರರ ತ್ಯಾಗವಿದೆ ಅಂತಹ ಮಹಾನ್ ಆತ್ಮಗಳಿಗೆ ಗೌರವಪೂರ್ವಕವಾಗಿ ನಮಿಸೋಣ...
ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529







