೧
ಗತಕಾಲದಿ
ಚಾಪಶರ ಕಲಿಕೆ
ವೀರಲಕ್ಷಣ.
೨
ದೇಶಭಕ್ತರ
ಚಾಗವ ನೆನೆಯುತ
ಗೌರವಿಸೋಣ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಜನವಸತಿ ರಹಿತ ನೇತಾಜಿ ಸುಭಾಷ್ ಚಂದ್ರ ಬೋಸ್ ಐಲ್ಯಾಂಡ್.
ಈಗ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಹೊಂದಿರುವ ದ್ವೀಪಕ್ಕೆ ಸಮಾನ ಮನಸ್ಕರ ತಂಡದೊಂದಿಗೆ ಅಂಡಮಾನ್ ನ ಸೆಲ್ಯುಲಾರ್ ಜೈಲ್ ನೋಡಿದ ಮರು ದಿನ ಭೇಟಿ ನೀಡಿದೆವು.ಪೋರ್ಟ್ ಬ್ಲೇರ್ ನಿಂದ ಮಹೇಶ್ವರಿ ಎಂಬ ಕ್ರೂಸರ್ ನಲ್ಲಿ ನಮ್ಮ ತಂಡದೊಂದಿಗೆ ನೇತಾಜಿ ದ್ವೀಪದೆಡೆಗೆ ಪಯಣ ಬೆಳೆಸಿದೆವು.ನಮ್ಮ ಟೂರ್ ಗೈಡ್ ಈ ದ್ವೀಪದ ವಿಶೇಷತೆಗಳು ಮತ್ತು ಇತಿಹಾಸದ ಬಗ್ಗೆ ಹೇಳುತ್ತಾ ಹೋದ ನಮ್ಮ ಕಿವಿಗಳು ಅವನ ಮಾಹಿತಿಯನ್ನು ಕೇಳುತ್ತಾ ಕಣ್ಣುಗಳು ನಿಸರ್ಗ ಸೌಂದರ್ಯ ಸವಿಯುತ್ತಿದ್ದವು .ಆಗಾಗ್ಗೆ ನಮ್ಮ ಮೊಬೈಲ್ ನಲ್ಲಿ ಅದ್ಬುತ ಪ್ರಕೃತಿ ಸೌಂದರ್ಯ ಸೆರೆಯಾಗುತ್ತಿತ್ತು.
ಮೊದಲು ರಾಸ್ ಐಲ್ಯಾಂಡ್ ಎಂದು ಕರೆಯಲಾಗುತ್ತಿದ್ದ ಇದು ಅಂಡಮಾನ್ ದ್ವೀಪಸಮೂಹದಲ್ಲಿರುವ ಒಂದು ದ್ವೀಪವಾಗಿದೆ. ಇದು ದಕ್ಷಿಣ ಅಂಡಮಾನ್ ಆಡಳಿತ ಜಿಲ್ಲೆ , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸೇರಿದೆ. ಈ ದ್ವೀಪವು ಕೇಂದ್ರ ಪೋರ್ಟ್ ಬ್ಲೇರ್ನಿಂದ ಪೂರ್ವಕ್ಕೆ 3 ಕಿಮೀ ದೂರದಲ್ಲಿದೆ.ಇದು ಐತಿಹಾಸಿಕ ಅವಶೇಷಗಳನ್ನು ಒಳಗೊಂಡ ಪ್ರವಾಸಿ ಆಕರ್ಷಣೆಯಾಗಿದೆ.
ರಾಸ್ ದ್ವೀಪಕ್ಕೆ ಸಮುದ್ರ ಸಮೀಕ್ಷಕ ಡೇನಿಯಲ್ ರಾಸ್ ಹೆಸರಿಡಲಾಗಿತ್ತು. ಡಿಸೆಂಬರ್ 2018 ರಲ್ಲಿ ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಗೌರವಾರ್ಥವಾಗಿ ಇದನ್ನು ನೇತಾಜಿ ಸುಭಾಸ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ.
ಈ ದ್ವೀಪವನ್ನು ಪ್ರವಾಸಿಗರು ಕಾಲ್ನಡಿಗೆಯಲ್ಲಿ ಸಾಗುತ್ತಾ ಅಲ್ಲಲ್ಲಿ ಸಿಗುವ ಜಿಂಕೆ ಮತ್ತು ನವಿಲುಗಳ ನೋಡುತ್ತಾ ಆನಂದಿಸಬಹುದು. ವೃದ್ಧರು ಮತ್ತು ಮಕ್ಕಳಿಗೆ ಎಲೆಕ್ಟ್ರಿಕ್ ಕಾರ್ ವ್ಯವಸ್ಥೆ ಇದೆ. ಒಬ್ಬರಿಗೆ 80 ರೂಪಾಯಿಗಳನ್ನು ಪಾವತಿಸಿ ಈ ಸೌಲಭ್ಯ ಪಡೆಯಬಹುದು.
ಬಜಾರ್, ಬೇಕರಿ, ಅಂಗಡಿಗಳ ಅವಶೇಷಗಳು,ನೀರಿನ ಸಂಸ್ಕರಣಾ ಘಟಕ , ಚರ್ಚ್ , ಟೆನ್ನಿಸ್ ಕೋರ್ಟ್ , ಪ್ರಿಂಟಿಂಗ್ ಪ್ರೆಸ್ , ಸೆಕ್ರೆಟರಿಯೇಟ್, ಆಸ್ಪತ್ರೆ , ಸ್ಮಶಾನ , ಈಜುಕೊಳ , ಬೃಹತ್ ಉದ್ಯಾನಗಳು ಮತ್ತು ಮುಖ್ಯ ಆಯುಕ್ತರ ನಿವಾಸ , ಸರ್ಕಾರಿ ಭವನ , ಹಳೆಯ ಅಂಡಮಾನೀಸ್ ಹೋಮ್, ಟ್ರೂಪ್ ಬ್ಯಾರಕ್ಗಳು , ಎಲ್ಲಾ ಶಿಥಿಲಾವಸ್ಥೆಯಲ್ಲಿದ್ದು, ಹಳೆಯ ಬ್ರಿಟಿಷ್ ಆಡಳಿತವನ್ನು ನೆನಪಿಸುತ್ತದೆ.
1880 ರ ದಶಕದ ಉತ್ತರಾರ್ಧದಲ್ಲಿ ರಾಸ್ ಐಲ್ಯಾಂಡ್ ಲಿಟರರಿ ಎಂಬ ಸಣ್ಣ ನಿಯತಕಾಲಿಕವನ್ನು ಆರಂಭಿಸಿದ. ಈ ಪ್ರದೇಶದ ಮೊದಲ ವಸಾಹತುಶಾಹಿ ದಿನಗಳ ಕಥೆಗಳು ಮತ್ತು ಆತ್ಮಚರಿತ್ರೆಗಳನ್ನು ಒಳಗೊಂಡ ಪ್ರಕಟಣೆ ಮಾಡಲಾಗುತ್ತಿತ್ತು. ಇವು ಇದೇ ದ್ವೀಪದ ಉತ್ತರದ ತುದಿಯಲ್ಲಿರುವ ಪ್ರಿಂಟಿಂಗ್ ಪ್ರೆಸ್ ನಲ್ಲಿ ಪ್ರಿಂಟ್ ಆಗುತ್ತಿದ್ದವು.ಇಂದು ಅದರ ಶಿಥಿಲವಾದ ಕಟ್ಟಡ ನೋಡಬಹುದು.
ದ್ವೀಪದ ಉತ್ತರದ ತುದಿಯವರೆಗೆ ಒಂದು ಮಾರ್ಗವಿದೆ, ಅಲ್ಲಿ ಹೊಸ ಕಾಂಕ್ರೀಟ್ 10 ಮೀ ಎತ್ತರದ ವೃತ್ತಾಕಾರದ ಲೈಟ್ಹೌಸ್ ಟವರ್ ಅನ್ನು 1977 ರಲ್ಲಿ ನಿರ್ಮಿಸಲಾಗಿದೆ. ತೀರದ ಕಡೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಬಂಡೆಯ ಮೇಲೆ. ಕಡಿಮೆ ಅಲೆಗಳಿರುವ ಸಂದರ್ಭದಲ್ಲಿ ಗೋಪುರವನ್ನು ತಲುಪಬಹುದು. ನಾವು ಹೋದಾಗ ಕಡಿಮೆ ಅಲೆಗಳಿದ್ದ ಪರಿಣಾಮ ಲೈಟ್ ಹೌಸ್ ತಲುಪಿ ಫೋಟೋಗಳನ್ನು ಕ್ಲಿಕ್ ಮಾಡಿಕೊಂಡೆವು. ಈ ಲೈಟ್ಹೌಸ್ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಫೋಟೋ ವೋಲ್ಟಾಯಿಕ್ ಪ್ಯಾನೆಲ್ಗಳನ್ನು ಪರಿಚಯಿಸಲಾಗಿದೆ ಎಂಬ ಮಾಹಿತಿಯನ್ನು ಗೈಡ್ ನೀಡಿದನು.
ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪವು ದಟ್ಟವಾದ ಕಾಡುಗಳನ್ನು ಹೊಂದಿದೆ. ಪ್ರವಾಸಿಗರ ಹೊರತಾಗಿ ಜನವಸತಿಗೆ ಇಲ್ಲಿ ಅವಕಾಶ ಕೊಟ್ಟಿಲ್ಲ.
ದ್ವೀಪದ ಅದ್ಭುತ ಪ್ರಕೃತಿ ಸೌಂದರ್ಯ ಸವಿಯಲು,ಮಚ್ಚೆಯುಳ್ಳ ಜಿಂಕೆಗಳು ಮತ್ತು ನವಿಲುಗಳನ್ನು ನೋಡಲು ತಾಳೆ ಮತ್ತು ತೆಂಗಿನ ಮರಗಳ ಸೊಬಗು ಸವಿಯಲು ನೀವೂ ಒಮ್ಮೆ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪಕ್ಕೆ ಬಂದು ಬಿಡಿ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529
ಭಾಗ ೫ ಅಂಡಮಾನ್.. ಒಂದು ಪರಿಚಯ..
ಅಂಡಮಾನ್ ದ್ವೀಪಗಳು ಬಂಗಾಳ ಕೊಲ್ಲಿಯಲ್ಲಿರುವ ಭಾರತದ ಆಧೀನಕ್ಕೆ ಒಳಪಟ್ಟ ದ್ವೀಪ ಸಮೂಹ. ಈ ಸಮೂಹದಲ್ಲಿರುವ ಹೆಚ್ಚಿನ ದ್ವೀಪಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ ಎಂಬ ಹೆಸರಿನಲ್ಲಿ ಕೇಂದ್ರಾಧೀನ ಪ್ರದೇಶವಾಗಿ ಭಾರತಕ್ಕೆ ಸೇರಿದ್ದರೂ ಕೆಲವು ಸಣ್ಣ ದ್ವೀಪಗಳು ಮ್ಯಾನ್ಮಾರ್ ದೇಶಕ್ಕೆ ಸೇರಿವೆ.
ಪುರಾತತ್ವ ಶಾಸ್ತ್ರದ ಅನುಸಾರ ಅಂಡಮಾನ್ ದ್ವೀಪ ಸಮೂಹಗಳಲ್ಲಿ ಜನವಸತಿ ಸಾವಿರಾರು ವರ್ಷಗಳಿಂದಲೂ ಕಂಡುಬರುತ್ತದೆ.ಮಧ್ಯ ಶಿಲಾಯುಗದಿಂದ ದೇಶೀಯ ಅಂಡಮಾನ್ ಜನಾಂಗ 18ನೆಯ ಶತಮಾನದವರೆಗೆ ಅಲ್ಲಲ್ಲಿ ಚದುರಿದಂತೆ ಬದುಕಿದ್ದರು.ಪ್ರಸಿದ್ಧ ಭೂಗೋಳ ಶಾಸ್ತ್ರಜ್ಞ ಟಾಲೆಮಿ ಈ ದ್ವೀಪ ಸಮೂಹಗಳ ಅರಿತಿದ್ದು ತನ್ನ ಬರಹಗಳಲ್ಲಿ ಬೇರೊಂದು ಹೆಸರಿನಲ್ಲಿ ಉಲ್ಲೇಖಿಸಿದ್ದಾನೆ.20ನೆಯ ಶತಮಾನದ ಪರ್ಷಿಯನ್ ನಾವಿಕ ಬುಜುರ್ಗ್ ಇಬಿನ್ ಶೆಹ್ರಿಯಾರ್ ತನ್ನ ಪ್ರವಾಸ ಕಥನ ಐಜಾಬ್ ಅಲ್ ಹಿಂದ್ ಅಂದರೆ ಭಾರತದ ಅದ್ಭುತಗಳು ಎಂಬ ಪುಸ್ತ್ರಕದಲ್ಲಿ ಈ ದ್ವೀಪ ಸಮೂಹಗಳಿಗೆ ಅಂಡಮಾನ್ ಎಂದೇ ಉಲ್ಲೇಖಿಸಿ ಇಲ್ಲಿ ನರಭಕ್ಷಕ ಜನಾಂಗದವರು ವಾಸಿಸುತ್ತಿದ್ದಾರೆ ಎಂದು ಬರೆದಿದ್ದಾನೆ.ಸಾ ಶ . 8೦೦ ರಿಂದ 1200ರ ವರೆಗೆ ತಮಿಳು ಚೋಳರು ತಮ್ಮ ಸಾಮ್ರಾಜ್ಯವನ್ನು ಸಮುದ್ರಾಚೆಗೆ ಈಗಿನ ಮಲೇಷ್ಯಾದವರೆಗೆ ವಿಸ್ತರಿಸಿದರು. ರಾಜೇಂದ್ರ ಚೋಳ ಈ ದ್ವೀಪ ಸಮೂಹಗಳನ್ನು ಸುಮಾತ್ರದ ಶ್ರೀವಿಜಯ ಸಾಮ್ರಾಜ್ಯದ ಮೇಲೆ ದಂಡೆತ್ತಲು ಆಯಕಟ್ಟಿನ ನೌಕಾನೆಲೆಗಳನ್ನಾಗಿ ಮಾಡಿಕೊಂಡಿದ್ದನು.1798ರಲ್ಲಿ ಬ್ರಿಟಿಷರು ಇಲ್ಲಿ ತಮ್ಮ ನೌಕಾ ನೆಲೆ ಮತ್ತು ಕೈದಿಗಳಿಗಾಗಿ ವಸಾಹತನ್ನು ಸ್ಥಾಪಿಸಿದರು.1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸೆರೆಸಿಕ್ಕ ಕೈದಿಗಳನ್ನು ಬಂಧಿಸಲು ಪೋರ್ಟ್ ಬ್ಲೇರ್ ನಲ್ಲಿ ಬ್ರಿಟಿಷರು ದೊಡ್ಡ ಬಂಧೀಖಾನೆಯನ್ನು ನಿರ್ಮಿಸಿದರು.ಎರಡನೆಯ ಮಹಾಯುದ್ಧ ದಲ್ಲಿ ಈ ದ್ವೀಪ ಸಮೂಹಗಳು ಜಪಾನ್ ದೇಶದ ಸೇನೆಯ ವಶವಾಯಿತು. ಇಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ನೇತೃತ್ವದಲ್ಲಿ ಸ್ವತಂತ್ರ ನಮ್ಮ ತ್ರಿವರ್ಣ ಧ್ವಜ ಹಾರಿಸಿ ಭಾರತದ ಮೊದಲ ಸರಕಾರವನ್ನು ರಚಿಸಲಾಯಿತು.
ಬೌಗೋಳಿಕ ಲಕ್ಷಣಗಳು
ಉತ್ತರ ದಕ್ಷಿಣವಾಗಿ ಹಬ್ಬಿದ 300ರಿಂದ 700 ಮೀಟರ್ ಎತ್ತರದ ಬೆಟ್ಟಗಳು ಮತ್ತು ಅದರಿಂದಾದ ಕಣಿವೆಗಳು ಇಲ್ಲಿಯ ಮೇಲ್ಮೈ ಲಕ್ಷಣ.ಕರಾವಳಿಯಲ್ಲಿ ಅನೇಕ ಕೊಲ್ಲಿಗಳಿವೆ.ನದಿಗಳೆಲ್ಲವೂ ಸಣ್ಣವು.ಸಾಗರಿಕ ಉಷ್ಣವಲಯದ ಹವಾಮಾನ ಇಲ್ಲಿಯದು.ನಿತ್ಯಹರಿದ್ವರ್ಣದ ಕಾಡು ಗಳು, ಮ್ಯಾನ್ಗ್ರೋವ್ ಸಸ್ಯಗಳು ಇಲ್ಲಿಯ ಸಸ್ಯ ವೈವಿಧ್ಯಗಳು.ಇಲ್ಲಿ ನಾಟಾ ಮಾಡಬಹುದಾದ ಸುಮಾರು 200ಕ್ಕೂ ಹೆಚ್ಚಿನ ಸಸ್ಯ ಪ್ರಭೇದಗಳು ಕಂಡು ಬರುತ್ತವೆ.ವಾಣಿಜ್ಯಿಕ ಬಳಕೆಯಲ್ಲಿರುವ ಪ್ರಭೇದಗಳಲ್ಲಿ ಗರ್ಜನ್, ಪಡೋಕ್ ಮುಖ್ಯವಾದರೆ ಇತರೆ ಮರಗಳಲ್ಲಿ ರುದ್ರಾಕ್ಷ, ಧೂಪ ಮರ ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.
2011 ಜನಗಣತಿಯಂತೆ ಇಲ್ಲಿಯ ಜನಸಂಖ್ಯೆ 3,43,125. ಈ ಜನಸಂಖ್ಯೆಯಲ್ಲಿ ಇಲ್ಲಿಯ ಮೂಲವಾಸಿಗಳಾದ ಅಂಡಮಾನೀ ಅದಿವಾಸಿಗಳ ಸಂಖ್ಯೆ ಅತ್ಯಲ್ಪ..ಇದು ಐದು ಮುಖ್ಯ ಪಂಗಡಗಳಾದ ಗ್ರೇಟ್ ಅಂಡಮಾನೀಸ್, ಜರವಾ,ಜಂಗಿಲ್,ಒಂಗೇಸ್ ಮತ್ತು ಸೆಂಟನಲೀಸ್ ಗಳಲ್ಲಿ ಹರಡಿಕೊಂಡಿದೆ.ಹಲವಾರು ಜನಾಂಗಗಳು ನಶಿಸಿ ಹೋಗಿವೆ.ಇವುಗಳು ಪ್ರಪಂಚದ ಪ್ರಾಚೀನ ಜನಾಂಗಗಳಿಗೆ ಸೇರಿದವರು.
ಭಾಗ ೨
ಕೆಂಪೇಗೌಡ ಏರ್ಪೋರ್ಟ್ ನಲ್ಲಿ..
ತುಮಕೂರಿನಿಂದ ಬಸ್ ನ ಮೂಲಕ ಹೊರಟ ನಾವು ದೇವನಹಳ್ಳಿ ತಲುಪಿದಾಗ ಕೆಂಪೇಗೌಡರ ಬೃಹತ್ ಕಂಚಿನ ವಿಗ್ರಹ ನಮ್ಮ ಎಡಭಾಗದಲ್ಲಿ ಗೋಚರಿಸಿತು.ಅದರ ಮುಂದೆ ಸಾಗಿದಾಗ ಸಿಕ್ಕಿದ್ದೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ. ನಾವು ಅಂಡಮಾನ್ ತಲುಪಲು ಬೆಂಗಳೂರಿನಿಂದ ಚೆನ್ನೈ ಗೆ ವಿಮಾನದ ಮೂಲಕ ತೆರಳಿ ಅಲ್ಲಿಂದ ಪೋರ್ಟ್ ಬ್ಲೇರ್ ಗೆ ಪಯಣ ಮಾಡಲು ಟಿಕೆಟ್ ಬುಕ್ ಆಗಿತ್ತು.
ಬೋರ್ಡಿಂಗ್ ಪಾಸ್ ಪಡೆದು ಚೆಕ್ ಇನ್ ಆಗಲು ತೆರಳಿದ ನಮ್ಮ ಪ್ರವಾಸಿ ತಂಡಕ್ಕೆ ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಡಿಜಿ ಯಾತ್ರಾ ಎಂಬ ಉಪಕ್ರಮದ ಮೂಲಕ ಸುಲಭವಾಗಿ ಚೆಕ್ ಇನ್ ಆಗಲು ಸಹಾಯ ಮಾಡಿದರು. ಲಗೇಜ್ ಕೌಂಟರ್ ನಲ್ಲಿ ನಮ್ಮ ಲಗೇಜ್ ನೀಡಿ ವಿಮಾನ ಏರಲು 12 ನೇ ಕೌಂಟರ್ ನಲ್ಲಿ ಚೆಕ್ ಇನ್ ಆಗಿ ನಮ್ಮ ವಿಮಾನದತ್ತ ತರಳಿದೆವು. ಆಗ ನಮ್ಮ ಕಣ್ಣಿಗೆ ಕೆಂಪೇಗೌಡ ವಿಮಾನ ನಿಲ್ದಾಣದ ಕೆಲ ಸಂಗತಿಗಳು ಅಚ್ಚರಿ ಮತ್ತು ಹೆಮ್ಮೆ ಮೂಡಿಸಿದವು.
ಈ ನಿಲ್ದಾಣವು 4700 ಎಕರೆಗಳಷ್ಟು ವಿಸ್ತಾರ ಹೊಂದಿದೆ. ಇದು ಬೆಂಗಳೂರು ಮಧ್ಯ ಭಾಗದಿಂದ ಸುಮಾರು 4೦ ಕಿ.ಮಿ. ದೂರದಲ್ಲಿ ದೇವನಹಳ್ಳಿಯಲ್ಲಿದೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದ ಕೊರತೆಯಿಂದ ಹೊಸದಾಗಿ ಜುಲೈ 2005ರಲ್ಲಿ ಇದರ ಕಟ್ಟುವಿಕೆ ಪ್ರಾರಂಭವಾಗಿ, ಮೇ 23, 2008ರಂದು ತನ್ನ ಕಾರ್ಯಾರಂಭ ಮಾಡಿತು. ಇತ್ತೀಚಿಗೆ ಟರ್ಮಿನಲ್ 2 ನಿರ್ಮಾಣವಾಗಿದೆ ಹಾಗೂ ಅದೀಗ ಕಾರ್ಯಾಚರಣೆಯಲ್ಲಿದೆ. ಇದು ಪ್ರಯಾಣಿಕರ ದಟ್ಟಣೆಯ ಆಧಾರದ ಮೇಲೆ ಭಾರತದ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಮನ್ನಣೆ ಪಡೆದಿದೆ.ಹಾಗೂ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
'ಎಕ್ಸ್ಪ್ರೆಸ್ ವೇ' ಮತ್ತು 'ಹೈಸ್ಪೀಡ್ ರೈಲ್ವೆ' ಲೈನಿನ ಯೋಜನೆಯ 'ನೀಲನಕ್ಷೆ' ತಯಾರಾಗಿದೆ. ಟ್ಯಾಕ್ಸಿ ಸೇವೆ, ಮತ್ತು ಕೆ. ಎಸ್. ಆರ್. ಟಿ. ಸಿ ಹವಾನಿಯಂತ್ರಿತ ಬಸ್ಗಳು ಪ್ರತಿ 15 ನಿಮಿಷಕ್ಕೆ ಒಂದರಂತೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಯಾವ ಮೂಲೆಯಿಂದಲಾದರೂ ಹೊರಟು ವಿಮಾನ ನಿಲ್ದಾಣವನ್ನು ಸುಮಾರು ಒಂದರಿಂದ ಒಂದೂವರೆ ಗಂಟೆಗಳಲ್ಲಿ ತಲುಪುವ ವ್ಯವಸ್ಥೆ ಗಮನಾರ್ಹವಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ 'ಬಿ ಐ ಎ ಎಲ್ ಸಹಾಯವಾಣಿ' ಯ ಸೌಲಭ್ಯವಿದೆ. ವಿಮಾನ ನಿಲ್ದಾಣಕ್ಕೆ ಸಂಪರ್ಕ ಮಾರ್ಗ, ಸಾರಿಗೆ ಸೌಲಭ್ಯಗಳ ವಿವರಗಳು, ಮತ್ತು ಸಾಮಾನ್ಯ ಮಾಹಿತಿಗಳನ್ನು ದೂರವಾಣಿಯ ಮೂಲಕ ಕೂಡಲೆ ಪಡೆಯ ಬಹುದು. ವಿಮಾನವೇರುವ ಮೊದಲು ನಡೆಸುವ 'ಭದ್ರತಾ ತಪಾಸಣೆಯ ವಿಧಿ' ಯಲ್ಲಿ ಪ್ರಯಾಣಿಕರು 'ಹಲವು ಕ್ಯೂ' ಗಳಲ್ಲಿ ಕಾದು ಮುಂದುವರೆಯುವ ಬದಲು, 'ಒಂದೇ ಹಂತದ ತಪಾಸಣಾ ವ್ಯವಸ್ಥೆ 'ಯನ್ನು ನಿರೂಪಿಸಲಾಗಿದೆ. 53 'ಚೆಕ್-ಇನ್ ಕೌಂಟರ್' ಗಳು, ಹಾಗೂ 18 'ಸ್ವಯಂ ತಪಾಸಣಾಯಂತ್ರ' ಗಳನ್ನು ಸ್ಥಾಪಿಸಲಾಗಿದೆ. ಮಕ್ಕಳ ಉಪಚಾರ ಹಾಗೂ ಆರೋಗ್ಯ ಸೇವೆಗೆ ಔಷಧಾಲಯ, ಡಯಾಪರ್ ಬದಲಾವಣೆ, ಹಾಲುಕುಡಿಸುವಿಕೆ ಇತ್ಯಾದಿಗಳಿಗೆ ಪ್ರತ್ಯೇಕ ಜಾಗವಿದೆ.
ನಿಲ್ದಾಣದ ಒಳಗಡೆ ಸ್ವದೇಶಿ ಮತ್ತು ವಿದೇಶಿ ಖಾದ್ಯಗಳನ್ನು ಒಳಗೊಂಡ ಹೋಟೆಲ್ ಗಳಿವೆ. ನಮ್ಮ ಅನುಭವ ಕ್ಕಾಗಿ ಒಂದು ಕಾಫಿ ಕುಡಿದೆವು .ಕಾಫಿ ಸಾದಾರಣಾಗಿತ್ತು ಬೆಲೆ ಮಾತ್ರ ತುಸು ದುಬಾರಿ 200 ರೂಪಾಯಿಗಳು! ಎಷ್ಟೇ ಆದರೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲವೇ?