22 ಅಕ್ಟೋಬರ್ 2023

ಬಿಲ್ಗವನ .



*ಅಂಬೆ*


(ಬಿಲ್ಗವನ)


ಓಂ

ದೇವಿ

ನಮನ

ನಿನ್ನಡಿಗೆ

ಹರಸೆಮ್ಮನು

ಕರುಣದಿಂದಲಿ 

ಭಜಿಸುವೆವು ನಿನ್ನ

ಸಹಸ್ರ ನಾಮದಿಂದಲಿ 

ಮನ್ನಿಸೆಮ್ಮ ತಪ್ಪನು 

ಸದ್ಬುದ್ದಿಯ ನೀಡು

ಒಳಿತು ಮಾಡಿಸು

ಸ್ವಾರ್ಥ ಬಿಡಿಸು

ಕೈಹಿಡಿದು

ಕಾಪಾಡು

ಅಂಬೆ 

ನೀ 


*ಸಿಹಿಜೀವಿ ವೆಂಕಟೇಶ್ವರ*

ತುಮಕೂರು

19 ಅಕ್ಟೋಬರ್ 2023

ಅಂಡಮಾನ್ ನ ವೀರ್ ಸಾವರ್ಕರ್ ವಿಮಾನ ನಿಲ್ದಾಣ....

 


ಭಾಗ 7

ವೀರ ಸಾವರ್ಕರ್ ವಿಮಾನ ನಿಲ್ದಾಣ...

ಅಂದು ಬೆಳಿಗ್ಗೆ ನನ್ನ ಜೀವನದ ಎರಡನೇ ವಿಮಾನ ಯಾನಕ್ಕೆ ಸಿದ್ದತೆ ಮಾಡಿಕೊಂಡು ಬೆಳಿಗ್ಗೆ ಏಳಕ್ಕೆ ನಿಲ್ದಾಣ ಪ್ರವೇಶಿಸಿ , ಬೋರ್ಡಿಂಗ್ ಪಾಸ್ ತೆಗೆದುಕೊಂಡು ನಮ್ಮ ಲಗೇಜ್ ಗಳನ್ನು ಲಗೇಜ್ ಕೌಂಟರ್ ನಲ್ಲಿ ನೀಡಿ   ಚೆಕ್ ಇನ್ ಆಗಿ ಇನ್ನೂ ಸಮಯ ಇದ್ದದ್ದರಿಂದ ನಿಲ್ದಾಣದ ಪುಸ್ತಕದ ಅಂಗಡಿ, ಕಾಫಿ ಶಾಪ್, ಇತ್ಯಾದಿ ನೋಡಲು ಒಂದು ರೌಂಡ್ ಹಾಕಿದೆ.
ಚೆನ್ನೈ ನ ಅಣ್ಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8 .10 ಕ್ಕೆ ಹೊರಟ ನಾವು ವಿಮಾನದಲ್ಲಿ ಎರ್ ಇಂಡಿಯಾ ದವರು ನೀಡಿದ ಬೆಳಗಿನ ಉಪಹಾರ  ಸೇವಿಸಿದೆವು. ಉಪ್ಪಿಟ್ಟು ,ಇಡ್ಲಿ,  ಚಟ್ನಿ, ಸಾಂಬಾರ್, ಬನ್, ಬೆಣ್ಣೆ ಎಲ್ಲಾ ರುಚಿಕರವಾಗಿತ್ತು. ವಿಮಾನದಲ್ಲಿ ಅಂಡಮಾನ್ ನ ಟ್ರಾವೆಲ್ ಏಜೆಂಟ್ ಆದ ತಿರುಪತಿ ರವರ ಪರಿಚಯವಾಯಿತು. ಇಂಗ್ಲಿಷ್ ನಲ್ಲಿ ನಮ್ಮ ಸಂಭಾಷಣೆ ಸಾಗಿತ್ತು, ಅವರ ವೃತ್ತಿ, ಪ್ರವಾಸ, ಅಂಡಮಾನ್ ವಿಶೇಷತೆ ,ಕೃಷಿ ರಾಷ್ಟ್ರದ ಮತ್ತು ಅಂತರರಾಷ್ಟ್ರೀಯ ವಿಚಾರಗಳ ಬಗ್ಗೆ ಚರ್ಚೆ ಮುಂದುವರೆಯಿತು. ಅಂಡಮಾನ್ ನಲ್ಲಿ ಸಹಾಯ ಬೇಕಾದರೆ ಕರೆ ಮಾಡಲು ಪೋನ್ ನಂಬರ್ ಸಹ ನೀಡಿದರು.
2 ಗಂಟೆಗಳ ವಿಮಾನ ಯಾನದ ಬಳಿಕ ವಿಮಾನ ವೀರ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು.
ವಿಮಾನ ಇಳಿಯುವಾಗ 65 ವರ್ಷಗಳ ನನ್ನ ಸಹಯಾನಿ "ಎಲ್ಲಾ ಸರಿ ಈ ಏರ್ ಇಂಡಿಯಾ ದವರು ಗಗನ ಸಖಿ ಯವರ ಬದಲಾಗಿ ಗಗನ ಸಖರನ್ನು ಕಳಿಸಿದ್ದು ಯಾಕೋ ನನಗೆ ಇಷ್ಟ ಆಗಲಿಲ್ಲ " ಎಂದು ಗೊನಗಿದರು!
ವಿಮಾನ ಇಳಿದು ಟರ್ಮಿನಲ್ ತಲುಪುವಾಗ ಆ ವಿಮಾನ ನಿಲ್ದಾಣದ ಬಗ್ಗೆ ತಿರುಪತಿ ರವರು ಮಾಹಿತಿ ನೀಡಿದರು.

 ಪೋರ್ಟ್ ಬ್ಲೇರ್ನ ದಕ್ಷಿಣಕ್ಕೆ 2 ಕಿಮೀ  ದೂರದಲ್ಲಿರುವ ನಿಲ್ದಾಣವೇ ವೀರ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲು ಇದು ದೇಶೀಯ ವಿಮಾನ ನಿಲ್ದಾಣವಾಗಿದ್ದು   "ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣ" ಎಂದು ಕರೆಯಲ್ಪಡುತ್ತಿತ್ತು. ಇದನ್ನು 2002 ರಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ 11 ವರ್ಷಗಳ ಕಾಲ ನಗರದ ಸೆಲ್ಯುಲಾರ್ ಜೈಲಿನಲ್ಲಿ ಬಂಧಿಸಲಾಗಿದ್ದ ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲಾಯಿತು.  

ಹಳೆಯ ಟರ್ಮಿನಲ್ 400 ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದೆ. ಇದು 6,100 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇದು ಏರೋಬ್ರಿಡ್ಜ್‌ಗಳಿಲ್ಲದ ಎರಡು ಗೇಟ್‌ಗಳನ್ನು ಹೊಂದಿದೆ . ಟರ್ಮಿನಲ್‌ನಿಂದ ಏಪ್ರನ್‌ನಲ್ಲಿ ನಿಲುಗಡೆ ಮಾಡಿರುವ ವಿಮಾನಕ್ಕೆ ಸಾರಿಗೆಯನ್ನು ಒದಗಿಸಲು ಬಸ್‌ಗಳನ್ನು ಬಳಸಲಾಗುತ್ತದೆ.
ಎಡಭಾಗದಲ್ಲಿ ಹಳೆಯ ಟರ್ಮಿನಲ್ ಜೊತೆಗೆ ಟರ್ಮಿನಲ್ 2 ನಿರ್ಮಾಣ ಮಾಡಲಾಗಿದೆ.

ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದಾಗಿ 40,837 ಚ.ಮೀ.  ವ್ಯಾಪ್ತಿಯಲ್ಲಿ   707 ಕೋಟಿ   ರೂಪಾಯಿ ವೆಚ್ಚದಲ್ಲಿ ಪ್ರಯಾಣಿಕರ ಟರ್ಮಿನಲ್ 2019 ರಲ್ಲಿ ನಿರ್ಮಾಣವನ್ನು ಪ್ರಾರಂಭಿಸಿತು. ಇದು ಮೂರು ಮಹಡಿಗಳನ್ನು ಹೊಂದಿದೆ-ಒಂದು ಆಗಮನಕ್ಕೆ, ಎರಡನೆಯದು ನಿರ್ಗಮನಕ್ಕೆ ಮತ್ತು ಮೂರನೆಯದು ಕಾಯಲು. ಟರ್ಮಿನಲ್ ಒಳಗೆ, 28 ಚೆಕ್-ಇನ್ ಕೌಂಟರ್‌ಗಳು, ನಾಲ್ಕು ಕನ್ವೇಯರ್ ಬೆಲ್ಟ್‌ಗಳು ಮತ್ತು ಮೂರು ಏರೋಬ್ರಿಡ್ಜ್‌ಗಳಿವೆ. ಇದು ಪೀಕ್ ಅವರ್‌ಗಳಲ್ಲಿ 1,200  ಪ್ರಯಾಣಿಕರನ್ನು ,600 ದೇಶೀಯ ಮತ್ತು 600 ಅಂತರರಾಷ್ಟ್ರೀಯ  ನಿಭಾಯಿಸಲು ಸಾಧ್ಯವಾಗುತ್ತದೆ ಮತ್ತು ವರ್ಷಕ್ಕೆ 5 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ.  ಇದು ಜೂನ್ 2023 ರಲ್ಲಿ ಪೂರ್ಣಗೊಂಡಿತು ಮತ್ತು 18 ಜುಲೈ 2023 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದರು.
ಉದ್ಘಾಟನೆಯಾದ ಮೂರು ತಿಂಗಳ ಬಳಿಕ ನೋಡಿದ ಈ ನಿಲ್ದಾಣದ ವಿನ್ಯಾಸ ಮತ್ತು ನೋಟ ನಯನ ಮನೋಹರವಾಗಿದೆ. ಪೋಟೋ ತೆಗೆದುಕೊಳ್ಳಲು ಮನಸ್ಸಾದರೂ ಭದ್ರತಾ ಕಾರಣದಿಂದ ಅಧಿಕಾರಿಗಳ ಕಟ್ಟು ನಿಟ್ಟಿನ ನಿರಾಕರಣೆಯಿಂದ ಅವರ ಅಪ್ಪಣೆ ಪಡೆದು ಕೆಲ ಪೋಟೋ ತೆಗೆದುಕೊಂಡು ಹೊರಬಂದ ನಮ್ಮನ್ನು ಸಾವರ್ಕರ್ ರವರ ಕಂಚಿನ ಪುತ್ಥಳಿ ಸ್ವಾಗತಿಸಿತು ಅದರ ಮುಂದೆ ನಿಂತು ಪೋಟೋ ಕ್ಲಕ್ಕಿಸಿಕೊಂಡ ನಮ್ಮನ್ನು ನಮ್ಮ ಟ್ರಾವೆಲ್ ಏಜೆನ್ಸಿಯ ಪ್ರಕಾಶ್ ರವರು ಸ್ವಾಗತಿಸಿ ಎನ್ ಕೆ ಲಾಡ್ಜ್ ಗೆ ಕರೆದುಕೊಂಡುಹೋದರು...

ಮುಂದುವರೆಯುತ್ತದೆ...

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529





18 ಅಕ್ಟೋಬರ್ 2023

ಹಾಯ್ಕುಗಳು...

 



ಗತಕಾಲದಿ

ಚಾಪಶರ ಕಲಿಕೆ

ವೀರಲಕ್ಷಣ.




ದೇಶಭಕ್ತರ 

ಚಾಗವ ನೆನೆಯುತ 

ಗೌರವಿಸೋಣ.


ಸಿಹಿಜೀವಿ ವೆಂಕಟೇಶ್ವರ

ತುಮಕೂರು


10 ಅಕ್ಟೋಬರ್ 2023

ನೇತಾಜಿ ಐಲ್ಯಾಂಡ್

 






ಜನವಸತಿ ರಹಿತ ನೇತಾಜಿ ಸುಭಾಷ್ ಚಂದ್ರ ಬೋಸ್ ಐಲ್ಯಾಂಡ್. 


ಈಗ  ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು   ಮರುನಾಮಕರಣ ಹೊಂದಿರುವ ದ್ವೀಪಕ್ಕೆ ಸಮಾನ ಮನಸ್ಕರ ತಂಡದೊಂದಿಗೆ ಅಂಡಮಾನ್ ನ ಸೆಲ್ಯುಲಾರ್ ಜೈಲ್ ನೋಡಿದ ಮರು ದಿನ  ಭೇಟಿ ನೀಡಿದೆವು.ಪೋರ್ಟ್ ಬ್ಲೇರ್ ನಿಂದ ಮಹೇಶ್ವರಿ ಎಂಬ ಕ್ರೂಸರ್ ನಲ್ಲಿ  ನಮ್ಮ  ತಂಡದೊಂದಿಗೆ  ನೇತಾಜಿ ದ್ವೀಪದೆಡೆಗೆ ಪಯಣ ಬೆಳೆಸಿದೆವು.ನಮ್ಮ ಟೂರ್ ಗೈಡ್ ಈ ದ್ವೀಪದ ವಿಶೇಷತೆಗಳು ಮತ್ತು ಇತಿಹಾಸದ ಬಗ್ಗೆ ಹೇಳುತ್ತಾ ಹೋದ ನಮ್ಮ ಕಿವಿಗಳು ಅವನ ಮಾಹಿತಿಯನ್ನು ಕೇಳುತ್ತಾ ಕಣ್ಣುಗಳು ನಿಸರ್ಗ ಸೌಂದರ್ಯ ಸವಿಯುತ್ತಿದ್ದವು .ಆಗಾಗ್ಗೆ ನಮ್ಮ ಮೊಬೈಲ್ ನಲ್ಲಿ ಅದ್ಬುತ ಪ್ರಕೃತಿ ಸೌಂದರ್ಯ ಸೆರೆಯಾಗುತ್ತಿತ್ತು.
 ಮೊದಲು ರಾಸ್ ಐಲ್ಯಾಂಡ್ ಎಂದು ಕರೆಯಲಾಗುತ್ತಿದ್ದ ಇದು  ಅಂಡಮಾನ್ ದ್ವೀಪಸಮೂಹದಲ್ಲಿರುವ ಒಂದು  ದ್ವೀಪವಾಗಿದೆ. ಇದು ದಕ್ಷಿಣ ಅಂಡಮಾನ್ ಆಡಳಿತ ಜಿಲ್ಲೆ , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸೇರಿದೆ. ಈ    ದ್ವೀಪವು ಕೇಂದ್ರ ಪೋರ್ಟ್ ಬ್ಲೇರ್ನಿಂದ ಪೂರ್ವಕ್ಕೆ 3 ಕಿಮೀ ದೂರದಲ್ಲಿದೆ.ಇದು   ಐತಿಹಾಸಿಕ ಅವಶೇಷಗಳನ್ನು ಒಳಗೊಂಡ  ಪ್ರವಾಸಿ ಆಕರ್ಷಣೆಯಾಗಿದೆ. 

ರಾಸ್ ದ್ವೀಪಕ್ಕೆ ಸಮುದ್ರ ಸಮೀಕ್ಷಕ ಡೇನಿಯಲ್ ರಾಸ್ ಹೆಸರಿಡಲಾಗಿತ್ತು. ಡಿಸೆಂಬರ್ 2018 ರಲ್ಲಿ ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಗೌರವಾರ್ಥವಾಗಿ ಇದನ್ನು ನೇತಾಜಿ ಸುಭಾಸ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ.

ಈ ದ್ವೀಪವನ್ನು ಪ್ರವಾಸಿಗರು ಕಾಲ್ನಡಿಗೆಯಲ್ಲಿ ಸಾಗುತ್ತಾ ಅಲ್ಲಲ್ಲಿ ಸಿಗುವ ಜಿಂಕೆ ಮತ್ತು ನವಿಲುಗಳ ನೋಡುತ್ತಾ ಆನಂದಿಸಬಹುದು. ವೃದ್ಧರು ಮತ್ತು ಮಕ್ಕಳಿಗೆ ಎಲೆಕ್ಟ್ರಿಕ್ ಕಾರ್ ವ್ಯವಸ್ಥೆ ಇದೆ. ಒಬ್ಬರಿಗೆ 80 ರೂಪಾಯಿಗಳನ್ನು ಪಾವತಿಸಿ ಈ ಸೌಲಭ್ಯ ಪಡೆಯಬಹುದು.
 ಬಜಾರ್, ಬೇಕರಿ, ಅಂಗಡಿಗಳ ಅವಶೇಷಗಳು,ನೀರಿನ ಸಂಸ್ಕರಣಾ ಘಟಕ , ಚರ್ಚ್ , ಟೆನ್ನಿಸ್ ಕೋರ್ಟ್ , ಪ್ರಿಂಟಿಂಗ್ ಪ್ರೆಸ್ , ಸೆಕ್ರೆಟರಿಯೇಟ್, ಆಸ್ಪತ್ರೆ , ಸ್ಮಶಾನ , ಈಜುಕೊಳ ,  ಬೃಹತ್ ಉದ್ಯಾನಗಳು ಮತ್ತು  ಮುಖ್ಯ ಆಯುಕ್ತರ ನಿವಾಸ , ಸರ್ಕಾರಿ ಭವನ , ಹಳೆಯ ಅಂಡಮಾನೀಸ್ ಹೋಮ್, ಟ್ರೂಪ್ ಬ್ಯಾರಕ್ಗಳು , ಎಲ್ಲಾ ಶಿಥಿಲಾವಸ್ಥೆಯಲ್ಲಿದ್ದು, ಹಳೆಯ ಬ್ರಿಟಿಷ್ ಆಡಳಿತವನ್ನು ನೆನಪಿಸುತ್ತದೆ.    

1880 ರ ದಶಕದ ಉತ್ತರಾರ್ಧದಲ್ಲಿ ರಾಸ್ ಐಲ್ಯಾಂಡ್ ಲಿಟರರಿ ಎಂಬ ಸಣ್ಣ  ನಿಯತಕಾಲಿಕವನ್ನು ಆರಂಭಿಸಿದ.  ಈ ಪ್ರದೇಶದ ಮೊದಲ ವಸಾಹತುಶಾಹಿ ದಿನಗಳ ಕಥೆಗಳು ಮತ್ತು ಆತ್ಮಚರಿತ್ರೆಗಳನ್ನು ಒಳಗೊಂಡ   ಪ್ರಕಟಣೆ ಮಾಡಲಾಗುತ್ತಿತ್ತು. ಇವು  ಇದೇ  ದ್ವೀಪದ ಉತ್ತರದ ತುದಿಯಲ್ಲಿರುವ ಪ್ರಿಂಟಿಂಗ್ ಪ್ರೆಸ್ ನಲ್ಲಿ ಪ್ರಿಂಟ್ ಆಗುತ್ತಿದ್ದವು.ಇಂದು ಅದರ ಶಿಥಿಲವಾದ ಕಟ್ಟಡ ನೋಡಬಹುದು.  

ದ್ವೀಪದ ಉತ್ತರದ ತುದಿಯವರೆಗೆ ಒಂದು ಮಾರ್ಗವಿದೆ, ಅಲ್ಲಿ ಹೊಸ ಕಾಂಕ್ರೀಟ್ 10 ಮೀ ಎತ್ತರದ ವೃತ್ತಾಕಾರದ ಲೈಟ್ಹೌಸ್ ಟವರ್ ಅನ್ನು 1977 ರಲ್ಲಿ ನಿರ್ಮಿಸಲಾಗಿದೆ. ತೀರದ ಕಡೆಯಿಂದ ಸುಮಾರು 50 ಮೀಟರ್  ದೂರದಲ್ಲಿರುವ ಬಂಡೆಯ ಮೇಲೆ. ಕಡಿಮೆ ಅಲೆಗಳಿರುವ ಸಂದರ್ಭದಲ್ಲಿ  ಗೋಪುರವನ್ನು ತಲುಪಬಹುದು. ನಾವು ಹೋದಾಗ ಕಡಿಮೆ ಅಲೆಗಳಿದ್ದ ಪರಿಣಾಮ ಲೈಟ್ ಹೌಸ್ ತಲುಪಿ ಫೋಟೋಗಳನ್ನು ಕ್ಲಿಕ್ ಮಾಡಿಕೊಂಡೆವು.  ಈ ಲೈಟ್ಹೌಸ್ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ  ಬ್ಯಾಟರಿಗಳನ್ನು ಚಾರ್ಜ್ ಮಾಡಲು ಫೋಟೋ ವೋಲ್ಟಾಯಿಕ್ ಪ್ಯಾನೆಲ್ಗಳನ್ನು ಪರಿಚಯಿಸಲಾಗಿದೆ ಎಂಬ ಮಾಹಿತಿಯನ್ನು ಗೈಡ್ ನೀಡಿದನು. 

ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪವು ದಟ್ಟವಾದ ಕಾಡುಗಳನ್ನು ಹೊಂದಿದೆ.  ಪ್ರವಾಸಿಗರ ಹೊರತಾಗಿ ಜನವಸತಿಗೆ ಇಲ್ಲಿ ಅವಕಾಶ ಕೊಟ್ಟಿಲ್ಲ.
ದ್ವೀಪದ ಅದ್ಭುತ ಪ್ರಕೃತಿ ಸೌಂದರ್ಯ ಸವಿಯಲು,ಮಚ್ಚೆಯುಳ್ಳ ಜಿಂಕೆಗಳು ಮತ್ತು ನವಿಲುಗಳನ್ನು ನೋಡಲು  ತಾಳೆ ಮತ್ತು ತೆಂಗಿನ ಮರಗಳ ಸೊಬಗು ಸವಿಯಲು ನೀವೂ  ಒಮ್ಮೆ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪಕ್ಕೆ ಬಂದು ಬಿಡಿ.

ಸಿಹಿಜೀವಿ ವೆಂಕಟೇಶ್ವರ
ತುಮಕೂರು
9900925529


ಅಂಡಮಾನ್.ಬಗ್ಗೆ ಒಂದು ಪರಿಚಯ...





 


ಭಾಗ ೫ ಅಂಡಮಾನ್.. ಒಂದು ಪರಿಚಯ..


ಅಂಡಮಾನ್ ದ್ವೀಪಗಳು   ಬಂಗಾಳ ಕೊಲ್ಲಿಯಲ್ಲಿರುವ ಭಾರತದ ಆಧೀನಕ್ಕೆ ಒಳಪಟ್ಟ ದ್ವೀಪ ಸಮೂಹ. ಈ ಸಮೂಹದಲ್ಲಿರುವ ಹೆಚ್ಚಿನ ದ್ವೀಪಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ ಎಂಬ ಹೆಸರಿನಲ್ಲಿ ಕೇಂದ್ರಾಧೀನ ಪ್ರದೇಶವಾಗಿ ಭಾರತಕ್ಕೆ ಸೇರಿದ್ದರೂ ಕೆಲವು ಸಣ್ಣ ದ್ವೀಪಗಳು ಮ್ಯಾನ್ಮಾರ್ ದೇಶಕ್ಕೆ ಸೇರಿವೆ.


ಪುರಾತತ್ವ ಶಾಸ್ತ್ರದ ಅನುಸಾರ ಅಂಡಮಾನ್ ದ್ವೀಪ ಸಮೂಹಗಳಲ್ಲಿ ಜನವಸತಿ ಸಾವಿರಾರು ವರ್ಷಗಳಿಂದಲೂ ಕಂಡುಬರುತ್ತದೆ.ಮಧ್ಯ ಶಿಲಾಯುಗದಿಂದ ದೇಶೀಯ ಅಂಡಮಾನ್ ಜನಾಂಗ 18ನೆಯ ಶತಮಾನದವರೆಗೆ ಅಲ್ಲಲ್ಲಿ ಚದುರಿದಂತೆ ಬದುಕಿದ್ದರು.ಪ್ರಸಿದ್ಧ ಭೂಗೋಳ ಶಾಸ್ತ್ರಜ್ಞ ಟಾಲೆಮಿ ಈ ದ್ವೀಪ ಸಮೂಹಗಳ ಅರಿತಿದ್ದು ತನ್ನ ಬರಹಗಳಲ್ಲಿ ಬೇರೊಂದು ಹೆಸರಿನಲ್ಲಿ ಉಲ್ಲೇಖಿಸಿದ್ದಾನೆ.20ನೆಯ ಶತಮಾನದ ಪರ್ಷಿಯನ್ ನಾವಿಕ ಬುಜುರ್ಗ್ ಇಬಿನ್ ಶೆಹ್ರಿಯಾರ್ ತನ್ನ ಪ್ರವಾಸ ಕಥನ ಐಜಾಬ್ ಅಲ್ ಹಿಂದ್ ಅಂದರೆ ಭಾರತದ ಅದ್ಭುತಗಳು  ಎಂಬ ಪುಸ್ತ್ರಕದಲ್ಲಿ ಈ ದ್ವೀಪ ಸಮೂಹಗಳಿಗೆ ಅಂಡಮಾನ್ ಎಂದೇ ಉಲ್ಲೇಖಿಸಿ ಇಲ್ಲಿ ನರಭಕ್ಷಕ ಜನಾಂಗದವರು ವಾಸಿಸುತ್ತಿದ್ದಾರೆ ಎಂದು ಬರೆದಿದ್ದಾನೆ.ಸಾ ಶ . 8೦೦ ರಿಂದ 1200ರ ವರೆಗೆ ತಮಿಳು ಚೋಳರು ತಮ್ಮ ಸಾಮ್ರಾಜ್ಯವನ್ನು ಸಮುದ್ರಾಚೆಗೆ ಈಗಿನ ಮಲೇಷ್ಯಾದವರೆಗೆ ವಿಸ್ತರಿಸಿದರು. ರಾಜೇಂದ್ರ ಚೋಳ  ಈ ದ್ವೀಪ ಸಮೂಹಗಳನ್ನು ಸುಮಾತ್ರದ ಶ್ರೀವಿಜಯ ಸಾಮ್ರಾಜ್ಯದ ಮೇಲೆ ದಂಡೆತ್ತಲು ಆಯಕಟ್ಟಿನ ನೌಕಾನೆಲೆಗಳನ್ನಾಗಿ ಮಾಡಿಕೊಂಡಿದ್ದನು.1798ರಲ್ಲಿ ಬ್ರಿಟಿಷರು ಇಲ್ಲಿ ತಮ್ಮ ನೌಕಾ ನೆಲೆ ಮತ್ತು ಕೈದಿಗಳಿಗಾಗಿ ವಸಾಹತನ್ನು ಸ್ಥಾಪಿಸಿದರು.1857ರ ಪ್ರಥಮ  ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸೆರೆಸಿಕ್ಕ ಕೈದಿಗಳನ್ನು ಬಂಧಿಸಲು  ಪೋರ್ಟ್ ಬ್ಲೇರ್‍ ನಲ್ಲಿ ಬ್ರಿಟಿಷರು ದೊಡ್ಡ ಬಂಧೀಖಾನೆಯನ್ನು ನಿರ್ಮಿಸಿದರು.ಎರಡನೆಯ ಮಹಾಯುದ್ಧ ದಲ್ಲಿ ಈ ದ್ವೀಪ ಸಮೂಹಗಳು ಜಪಾನ್ ದೇಶದ ಸೇನೆಯ ವಶವಾಯಿತು. ಇಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ನೇತೃತ್ವದಲ್ಲಿ ಸ್ವತಂತ್ರ ನಮ್ಮ ತ್ರಿವರ್ಣ ಧ್ವಜ ಹಾರಿಸಿ  ಭಾರತದ ಮೊದಲ ಸರಕಾರವನ್ನು ರಚಿಸಲಾಯಿತು. 


ಬೌಗೋಳಿಕ ಲಕ್ಷಣಗಳು


ಉತ್ತರ ದಕ್ಷಿಣವಾಗಿ ಹಬ್ಬಿದ 300ರಿಂದ 700 ಮೀಟರ್ ಎತ್ತರದ ಬೆಟ್ಟಗಳು ಮತ್ತು ಅದರಿಂದಾದ ಕಣಿವೆಗಳು ಇಲ್ಲಿಯ ಮೇಲ್ಮೈ ಲಕ್ಷಣ.ಕರಾವಳಿಯಲ್ಲಿ ಅನೇಕ ಕೊಲ್ಲಿಗಳಿವೆ.ನದಿಗಳೆಲ್ಲವೂ ಸಣ್ಣವು.ಸಾಗರಿಕ ಉಷ್ಣವಲಯದ ಹವಾಮಾನ ಇಲ್ಲಿಯದು.ನಿತ್ಯಹರಿದ್ವರ್ಣದ ಕಾಡು ಗಳು, ಮ್ಯಾನ್‍ಗ್ರೋವ್ ಸಸ್ಯಗಳು ಇಲ್ಲಿಯ ಸಸ್ಯ ವೈವಿಧ್ಯಗಳು.ಇಲ್ಲಿ ನಾಟಾ ಮಾಡಬಹುದಾದ ಸುಮಾರು 200ಕ್ಕೂ ಹೆಚ್ಚಿನ ಸಸ್ಯ ಪ್ರಭೇದಗಳು ಕಂಡು ಬರುತ್ತವೆ.ವಾಣಿಜ್ಯಿಕ ಬಳಕೆಯಲ್ಲಿರುವ ಪ್ರಭೇದಗಳಲ್ಲಿ ಗರ್ಜನ್, ಪಡೋಕ್ ಮುಖ್ಯವಾದರೆ ಇತರೆ ಮರಗಳಲ್ಲಿ ರುದ್ರಾಕ್ಷ, ಧೂಪ ಮರ ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.


2011 ಜನಗಣತಿಯಂತೆ ಇಲ್ಲಿಯ ಜನಸಂಖ್ಯೆ 3,43,125. ಈ ಜನಸಂಖ್ಯೆಯಲ್ಲಿ ಇಲ್ಲಿಯ ಮೂಲವಾಸಿಗಳಾದ ಅಂಡಮಾನೀ ಅದಿವಾಸಿಗಳ ಸಂಖ್ಯೆ ಅತ್ಯಲ್ಪ..ಇದು ಐದು ಮುಖ್ಯ ಪಂಗಡಗಳಾದ ಗ್ರೇಟ್ ಅಂಡಮಾನೀಸ್, ಜರವಾ,ಜಂಗಿಲ್,ಒಂಗೇಸ್ ಮತ್ತು ಸೆಂಟನಲೀಸ್ ಗಳಲ್ಲಿ ಹರಡಿಕೊಂಡಿದೆ.ಹಲವಾರು ಜನಾಂಗಗಳು ನಶಿಸಿ ಹೋಗಿವೆ.ಇವುಗಳು ಪ್ರಪಂಚದ ಪ್ರಾಚೀನ ಜನಾಂಗಗಳಿಗೆ ಸೇರಿದವರು.