ಜ್ಞಾನಾರ್ಜನೆ
ಸುಮ್ಮನೆ ಜ್ಞಾನಾರ್ಜನೆ
ಮಾಡುತ್ತಾ ಸಾಗು ತಮ್ಮ|
ನಿನಗರಿವಿಲ್ಲದೆ ಓಡುವುದು
ನಿನ್ನಲಿರುವ ತಮ||
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಇನ್ನೆಲ್ಲಿಯ ತಮ
ನಿನ್ನ ನಯನಗಳ ಬೆಳಕಿರುವಾಗ
ನನ್ನ ಬಾಳಲಿ ಇನ್ನೆಲಿಯ ತಮ|
ನೀ ಸೂರ್ಯ ನಾ ನಿನ್ನ ಪ್ರತಿಬಿಂಬ
ಮಾತ್ರವೇ ಪ್ರಿಯತಮ||
ಇಷ್ಟದ ಕಲರ್
ಆಗಸದಲ್ಲಿರುವ ಕಾಮನ ಬಿಲ್ಲು
ತಂದು ಕೊಡುವೆ ಎಂದ ಲವರ್ರು |
ಸಿಡುಕಿನಿಂದಲೇ ಉತ್ತರಿಸಿದಳು
ಬೇಕಿಲ್ಲ ನನಗೆ ಕಾಮನಬಿಲ್ಲು
ಅದರಲ್ಲಿಲ್ಲ ನನ್ನಿಷ್ಷದ ಕಲರ್ಗಳಾಗ ಗೋಲ್ಡು ಸಿಲ್ವರು ||
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಅನುಭವಾತ್ಮಕ ಕಲಿಕೆಯಲ್ಲಿ ನಿರತರಾದ ಕ್ಯಾತ್ಸಂದ್ರ ಶಾಲೆಯ ಮಕ್ಕಳು.
ಅಂದು ನಾಲ್ಕು ಗೋಡೆಗಳ ಮಧ್ಯೆ ಕಲಿಕೆಯ ಬದಲಾಗಿ ಕ್ಯಾತ್ಸಂದ್ರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅನುಭವಾತ್ಮಕ ಕಲಿಕೆಗೆ ಸಿದ್ದವಾಗಿ ಹಾಲು ಸಂಸ್ಕರಣಾ ಘಟಕದೊಳಗೊಂದು ಸುತ್ತು ಹಾಕಿ ಕ್ಷೇತ್ರ ಭೇಟಿ ಮಾಡಿ ತಮ್ಮ ಜ್ಞಾನಾರ್ಜನೆ ಮಾಡಿಕೊಂಡರು.
ಆಯ್ದ ಮಾದರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸ್ಥೆಗಳ ಭೇಟಿಗಾಗಿ ಶಿಕ್ಷಕರ ಕಲ್ಯಾಣ ನಿಧಿಯ ಪ್ರಾಯೋಜಕತ್ವದಲ್ಲಿ ಕ್ಯಾತ್ಸಂದ್ರ ಪ್ರೌಢಶಾಲೆಯ ಆಯ್ದ ವಿದ್ಯಾರ್ಥಿಗಳು ತುಮಕೂರು ಬಳಿಯ ಮಲ್ಲಸಂದ್ರದ ಹಾಲು ಸಂಸ್ಕರಣಾ ಘಟಕಕ್ಕೆ ತರಳಿದ್ದರು.
ತುಮಕೂರು ಹಾಲು ಒಕ್ಕೂಟವು 30ನೇ ಮಾರ್ಚ್ 1977 ರಂದು ಸಹಕಾರ ಸಂಘಗಳ ರಿಜಿಸ್ಟ್ರಾರ್ ಕಾಯ್ದೆಯಡಿಯಲ್ಲಿ "ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್" ಎಂದು ನೋಂದಾಯಿಸಲ್ಪಟ್ಟಿದೆ. ಡೈರಿ ಸಹಕಾರಿಗಳನ್ನು ಮೂರು ಹಂತದ ವ್ಯವಸ್ಥೆಯಲ್ಲಿ ಆನಂದ್ ಮಾದರಿಯಲ್ಲಿ ಸ್ಥಾಪಿಸಲಾಯಿತು. ಹಾಲಿನ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರಾಟವನ್ನು ನೋಡಿಕೊಳ್ಳಲು ಗ್ರಾಮ ಮಟ್ಟದಲ್ಲಿ ಗ್ರಾಮ ಮಟ್ಟದ ಡೈರಿ ಸಹಕಾರ ಸಂಘಗಳು ಅಸ್ತಿತ್ವಕ್ಕೆ ಬಂದಿವೆ.
1975-76ರಲ್ಲಿ ದಿನಕ್ಕೆ ಸರಾಸರಿ 1035 ಕೆಜಿ ಹಾಲು ಸಂಗ್ರಹವಾಗುತ್ತಿತ್ತು. ಒಕ್ಕೂಟದ ನೋಂದಣಿ ಸಮಯದಲ್ಲಿ, ಹಾಲು ಸಂಗ್ರಹಣೆಯು ದಿನಕ್ಕೆ 9,486 ಕೆಜಿಗೆ ಏರಿತು. ಅಂದಿನಿಂದ, ವಿವಿಧ ಇನ್ಪುಟ್ ಚಟುವಟಿಕೆಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಹಾಲಿನ ಸಂಗ್ರಹವು ಅನೇಕ ಪಟ್ಟು ಹೆಚ್ಚಾಗಿದೆ. ಪ್ರಸ್ತುತ ದಿನವೊಂದಕ್ಕೆ 8.94 ಲಕ್ಷ ಕೆಜಿ ಹಾಲು ಸಂಗ್ರಹವಾಗುತ್ತಿದೆ. ಜೂನ್ 29, 2022 ರಂದು, ಒಕ್ಕೂಟವು 9,31,684 ಕೆಜಿಗಳನ್ನು ಸಂಗ್ರಹಿಸಿದೆ ಮತ್ತು ಇದು ಪ್ರಾರಂಭದಿಂದಲೂ ಅತಿ ಹೆಚ್ಚು ಹಾಲು ಸಂಗ್ರಹಣೆಯಾಗಿದೆ.
ಒಕ್ಕೂಟವು ವಿವಿಧ ರೀತಿಯ ಹಾಲುಗಳನ್ನು ಮಾರಾಟ ಮಾಡುತ್ತದೆ ಅಂದರೆ ಟೋನ್ಡ್ ಮಿಲ್ಕ್, ಹೋಮೋಜೆನೈಸ್ಡ್ ಟೋನ್ಡ್ ಹಾಲು, ಹೋಮೊಜೆನೈಸ್ಡ್ ಹಸುವಿನ ಹಾಲು, ವಿಶೇಷ ಹಾಲು ಮತ್ತು ಶುಭಂ ಹಾಲು. ತಯಾರಿಸಿದ ಮತ್ತು ಮಾರಾಟ ಮಾಡಲಾಗುವ ಉತ್ಪನ್ನಗಳ ಇತರ ಶ್ರೇಣಿಯು ಮೊಸರು, UHT-FP ಹಾಲು, ತುಪ್ಪ, ಬೆಣ್ಣೆ ಹಾಲು, ಮೈಸೂರು ಪಾಕ್, ಗೋಡಂಬಿ ಬರ್ಫಿ ಮತ್ತು ಪೇಡಾವನ್ನು ಒಳಗೊಂಡಿದೆ. ಇದಲ್ಲದೆ, ಒಕ್ಕೂಟವು ನಂದಿನಿ ಹಾಲಿನ ಉತ್ಪನ್ನಗಳಿಂದ ಉತ್ಪತ್ತಿಯಾಗುವ ಎಲ್ಲಾ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ, ಕೆಎಂಎಫ್ ಘಟಕವು ತನ್ನ ಮಾರುಕಟ್ಟೆ ಪಾಲನ್ನು ಸ್ಥಿರವಾಗಿ ಹೆಚ್ಚಿಸುತ್ತಿದೆ. ಪ್ರಸ್ತುತ ದಿನಕ್ಕೆ 2.88 ಲಕ್ಷ ಲೀಟರ್ ಮಾರಾಟ ಮಾಡುತ್ತಿದ್ದೇವೆ. ಎಂದು ನಳಿನ ರವರು ಮಾಹಿತಿ ನೀಡಿದರು.
ಮಾಹಿತಿಯನ್ನು ಕೇಳುತ್ತಾ ಬೆಣ್ಣೆ ತಯಾರಿಸುವ ಘಟಕ, ತುಪ್ಪ ,ಮತ್ತು 6 ರೀತಿಯ ಹಾಲು ಪ್ಯಾಕ್ ಮಾಡುವ ಘಟಕಗಳನ್ನು ಸ್ವತಃ ನೋಡುತ್ತಾ ಅಚ್ಚರಿ ಪಡುತ್ತಾ ಮುಂದೆ ಸಾಗುತ್ತಿದ್ದರು.
ಓದೋಣ ಓದಿಸೋಣ..
ಒಂದು ಭಾನುವಾರ ಸಂಜೆ ತುಮಕೂರಿನ ಬಾಯರ್ಸ್ ಕಾಪೀ ಹೌಸ್ ನಲ್ಲಿ ಟೀ ಕುಡಿಯುತ್ತಾ ಸಮಾನ ಮನಸ್ಕ ಗೆಳೆಯರ ಜೊತೆ ಕುಳಿತು ಟೀ ಕುಡಿಯುವಾಗ ಸಾಹಿತ್ಯ, ಸಮಾಜ ,ಶಿಕ್ಷಣ ಹೀಗೆ ನಮ್ಮ ಮಾತುಕತೆ ಸಾಗುವಾಗ ಓದುವ ಹವ್ಯಾಸ ಕ್ರಮೇಣ ಕಡಿಮೆಯಾಗಿರುವ ಬಗ್ಗೆ ಚರ್ಚೆ ನಡೆಯುವಾಗ ಸ್ಟೂಡೆಂಟ್ ಬುಕ್ ಹೌಸ್ ಮಾಲೀಕರು ಪ್ರಕಾಶಕರಾದ ಸದಾಶಿವ್ ರವರು ಒಂದು ಘಟನೆ ಹೇಳಿದರು .ಒಮ್ಮೆ ನನ್ನ ಪುಸ್ತಕದ ಅಂಗಡಿಗೆ ನಾಲ್ಕು ಜನ ಕಾರಿನಲ್ಲಿ ಬಂದು ಶಿಕ್ಷಕರು ಎಂದು ಪರಿಚಯ ಮಾಡಿಕೊಂಡು ಓರ್ವ ಶಿಕ್ಷಕರು ಸುಮಾರು ಎಂಟತ್ತು ಉತ್ತಮ ಅಭಿರುಚಿಯ ಪುಸ್ತಕಗಳನ್ನು ಕೊಂಡರು .ಅವರ ಜೊತೆಯಲ್ಲಿ ಇದ್ದ ಶಿಕ್ಷಕರೊಬ್ಬರು "ಸಾಕು ಬಾರಪ್ಪ ಅದೇನ್ ಪುಸ್ತಕ ಓದ್ತಿಯಾ ನೀನು " ಎಂದು ವ್ಯಂಗ್ಯವಾಗಿ ಹೇಳಿದರು ಇದರಿಂದ ನನಗೆ ಬಹಳ ಬೇಸರ ವಾಯಿತು ಎಂದರು.. ಅವರು ಮುಂದುವರೆದು ನಾನು ಪುಸ್ತಕ ಅಂಗಡಿಯಿಟ್ಟು ಹದಿನೈದು ವರ್ಷಗಳಾದವು ಶಿಕ್ಷಕರು ಪುಸ್ತಕ ಕೊಳ್ಳುವುದು ಬಹಳ ಕಡಿಮೆ ಎಂದರು ಅದಕ್ಕೆ ನಾನು ಆಕ್ಷೇಪಿಸಿ ನಾನು ಈ ವರ್ಷ ಹದಿನೈದು ಪುಸ್ತಕ ಕೊಂಡು ಓದಿರುವೆ ಎಂದೆ .ನೀವು ಹಾಗೂ ನಿಮ್ಮಂತವರು ಕೆಲವೇ ಮಂದಿ ಸರ್ ನಮ್ಮ ಮನೆಯ ಪಕ್ಕ ಎರಡು ಶಿಕ್ಷಕರ ಕುಟುಂಬ ಇವೆ ಅವರ ಮನೆಯಲ್ಲಿ ಒಂದು ನ್ಯೂಸ್ ಪೇಪರ್ ಸಹ ತರಿಸಲ್ಲ ಅವರು ನ್ಯೂಸ್ ಪೇಪರನ್ನೇ ಓದಲ್ಲ ಎಂದರೆ ಪುಸ್ತಕ ಓದುವ ಮಾತೆಲ್ಲಿ ಬಂತು? ಅಂದು ನನ್ನ ಬಾಯಿ ಮುಚ್ಚಿಸಿದರು.
ರವೀಂದ್ರನಾಥ ಟಾಗೋರ್ ರವರು ಒಂದು ದೀಪ ತಾನು ಉರಿಯದೇ ಮತ್ತೊಂದು ದೀಪ ಹಚ್ಚಲಾಗದು ಎಂದಂತೆ ಶಿಕ್ಷಕರಾದವರು ಮೊದಲು ತಾವು ಓದಿ ಜ್ಞಾನವನ್ನು ಪಡೆದರೆ ಮಾತ್ರ ಮಕ್ಕಳಿಗೆ ಜ್ಞಾನ ನೀಡಲು ಸಾದ್ಯ. ಸಾಧಾರಣ ಶಿಕ್ಷಕ ಪಾಠ ಮಾಡುತ್ತಾನೆ ಉತ್ತಮ ಶಿಕ್ಷಕ ಅರ್ಥ ಮಾಡಿಸುತ್ತಾನೆ ಅತ್ಯುತ್ತಮ ಶಿಕ್ಷಕ ಪ್ರೇರಣೆ ನೀಡುತ್ತಾನೆ ಅಂತಹ ಪ್ರೇರಣೆ ನೀಡುವ ಶಿಕ್ಷಕ ಮೊದಲು ಕಲಿಕಾರ್ಥಿಯಾಗಿ ಕಲಿತಿರಬೇಕು.ಬಹುತೇಕರು ನಂಬಿದಂತೆ ಶಿಕ್ಷಕ ವೃತ್ತಿ ಸಿಕ್ಕಿದ ಮೇಲೆ ಕಲಿಯಲು ಏನೂ ಇಲ್ಲ ಎಂಬುದು ಸುಳ್ಳು. ಕಲಿಕೆಯು ವರ್ಷದಿಂದ ಗೋರಿಯವರೆಗೆ ನಡೆವ ನಿರಂತರ ಪ್ರಕ್ರಿಯೆಯಾಗಿದೆ. ಅದರಲ್ಲೂ ಈ ಇಪ್ಪತ್ತೊಂದನೇ ಶತಮಾನದ ರೋಬಾಟಿಕ್ ಮತ್ತು ಕೃತಕ ಬುದ್ಧಿಮತ್ತೆಯ ಕಾಲದಲ್ಲಿ ಮಕ್ಕಳು ಶಿಕ್ಷಕರಿಗಿಂತ ಒಂದು ಹೆಜ್ಜೆ ಮುಂದೆ ಇರುವುದು ನೋಡಬಹುದು. ಶಿಕ್ಷಕರಾದವರು ಅಪ್ಡೇಟ್ ಆಗುತ್ತ ಇರಬೇಕು ಹೊಸ ತಂತ್ರಜ್ಞಾನದ ತಿಳುವಳಿಕೆ, ಬೋಧನಾ ಕ್ಷೇತ್ರದಲ್ಲಿ ನಾವೀನ್ಯತೆಯ ಅಳವಡಿಸಿಕೊಂಡು ಬೋಧನೆ ಮಾಡಿದರೆ ಮಕ್ಕಳು ಶಿಕ್ಷಕರನ್ನು ಆರಾಧಿಸುತ್ತಾರೆ. ಆಗ ಶಿಕ್ಷಕರಿಗಾಗುವ ಆನಂದ ಅನುಭವಿಸಿಯೇ ತಿಳಿಯಬೇಕು ಆ ಅನುಭವ ನನಗಾಗಿದೆ ಎಂದು ಹೆಮ್ಮೆಯಿಂದ ಹೇಳಬಲ್ಲೆ. ಶಿಕ್ಷಕರಾದವರು ಅಪ್ಡೇಟ್ ಆಗಲಿಲ್ಲ ಎಂದರೆ ಔಟ್ ಡೇಟ್ ಆಗಿಬಿಡುತ್ತೇವೆ ನಮ್ಮ ನಮ್ಮ ಬೋಧನಾ ವಿಷಯಗಳಲ್ಲಿ ಪ್ರಾವೀಣ್ಯತೆ ಪಡೆಯಲು ಸದಾ ನಾವು ಕಲಿಯುತ್ತಲೇ ಇರಬೇಕು.ಇದರ ಜೊತೆಯಲ್ಲಿ ಶಿಕ್ಷಕರಾದವರು "teachers must know something about everything and everything about something" ಎಂಬಂತೆ ನಮಗೆ ಇತರೆ ವಿಷಯಗಳ ಜ್ಞಾನವು ಅಗತ್ಯ . 2020 ರ ಹೊಸ ಶಿಕ್ಷಣ ನೀತಿಯು ಸಹ ಇದೇ ಆಧಾರದ ಮೇಲೆ ಶಿಕ್ಷಕರಾದವರು ಕಲಿಯುತ್ತಾ ಕಲಿಸಬೇಕು ಎಂಬುವ ಆಶಯ ಹೊಂದಿದೆ. ಈ ನಿಟ್ಟಿನಲ್ಲಿ ಶಿಕ್ಷಕರಾದ ನಾವು ಕಲಿಯುತ್ತಾ ಕಲಿಸೋಣ, ಕಲಿಸುತ್ತಾ ಕಲಿಯೋಣ .
ಸಿಹಿಜೀವಿ ವೆಂಕಟೇಶ್ವರ
ತುಮಕೂರು.