*ಆಕಾರ- ಅಹಂಕಾರ*
ಎಂತಹ ಕಗ್ಗಲ್ಲಾದರೂ
ತಿದ್ದಿ ತೀಡಿದರೆ ಆಗುವುದು
ವಿಗ್ರಹದ ಆಕಾರ|
ಏನೇ ತಿದ್ದಿ ತೀಡಿದರೂ
ನಾಶದತ್ತ ಸಾಗುವರು
ಸೇರಿದರೆ ಅಹಂಕಾರ||
*ಸಿಹಿಜೀವಿ ವೆಂಕಟೇಶ್ವರ*
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
*ಆಕಾರ- ಅಹಂಕಾರ*
ಎಂತಹ ಕಗ್ಗಲ್ಲಾದರೂ
ತಿದ್ದಿ ತೀಡಿದರೆ ಆಗುವುದು
ವಿಗ್ರಹದ ಆಕಾರ|
ಏನೇ ತಿದ್ದಿ ತೀಡಿದರೂ
ನಾಶದತ್ತ ಸಾಗುವರು
ಸೇರಿದರೆ ಅಹಂಕಾರ||
*ಸಿಹಿಜೀವಿ ವೆಂಕಟೇಶ್ವರ*
ಯಶಸ್ಸಿನ ಶಿಖರ ಏರೋಣ.
ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ನಮಗೊಂದು ಸ್ಪಷ್ಟವಾದ ಗುರಿಯಿರಬೇಕು.ಜೊತೆಗೆ ಮಾರ್ಗದರ್ಶನ ಮಾಡಲು ಗುರುವಿರಬೇಕು. "ಮಾರ್ನೇ ತೋ ಹಾತಿ ಮಾರೋ ಲೂಟ್ನೇ ತೊ ಭಂಡಾರ್ ಲೂಟೋ " ಎಂಬಂತೆ ಚಿಕ್ಕ ಗುರಿಯನ್ನು ಹೊಂದದೆ ದೊಡ್ಡ ಗುರಿಯನ್ನು ಇಟ್ಟುಕೊಂಡು ಆ ಕಡೆ ಸಾಗಬೇಕು.
ನಮ್ಮ ಗುರಿಯೆಡೆಗೆ ಸಾಗುವಾಗ ನಮಗೆ ಕೆಲ ಅಡೆತಡೆಗಳು ಬರುವುದು ಸಹಜ ಅವುಗಳ ಮೆಟ್ಟಿ ಮುಂದೆ ಸಾಗಬೇಕು. ಅದರಂತೆ ಅಲ್ಲಲ್ಲಿ ನಮಗೆ ಯಶಸ್ಸು ಕೂಡಾ ಸಿಗುತ್ತವೆ ಆ ಯಶಸ್ಸು ನಮ್ಮ ತಲೆಗೇರಬಾರದು.ಆ ಯಶಸ್ಸಿಗೆ ಸಂತಸಪಟ್ಟು ಮುಂದೆ ಸಾಗಬೇಕು. ಏಕೆಂದರೆ ಯಶಸ್ಸಿಗೆ ಪುಲ್ ಸ್ಟಾಪ್ ಇಲ್ಲ ಬರೀ ಕಾಮಾಗಳು ಮಾತ್ರ ಇರುತ್ತವೆ. ನಮ್ಮ ಯಶಸ್ಸಿನ ಪಯಣ ನಿರಂತರವಾಗಿರಬೇಕು.
ಕಂಫರ್ಟ್ ಜೋನ್ ನಿಂದ ಹೊರಬಂದು ರಿಸ್ಕ್ ತೆಗೆದುಕೊಂಡ ಮಹನಿಯರು ಜೀವನದಲ್ಲಿ ಉನ್ನತವಾದದ್ದನ್ನು ಸಾಧಿಸಿದ್ದಾರೆ. ಈ ನಿಟ್ಟಿನಲ್ಲಿ ನಾವು ಯೋಚಿಸಬಹುದು ಫಾರ್ಚೂನ್ ಪೇವರ್ಸ್ ದ ಬ್ರೇವ್ ಎಂಬಂತೆ ಒಳ್ಳೆಯ ಕೆಲಸ ಮಾಡಲು ಕ್ಯಾಲ್ಕುಲೇಟೆಡ್ ರಿಸ್ಕ್ ತೆಗೆದುಕೊಂಡು ಯಶಸ್ಸು ಪಡೆಯಲು ಪ್ರಯತ್ನ ಮಾಡಬಹುದು.
ಯಶಸ್ಸಿನೆಡೆಗಿನ ನಮ್ಮ ಪಯಣದಲ್ಲಿ ಆಗಾಗ್ಗೆ ನಮ್ಮನ್ನು ಎದೆಗುಂದಿಸುವ ಟೀಕೆಗಳು ಎದುರಾಗಬಹುದು ಅವುಗಳ ಬಗ್ಗೆ ಅಷ್ಟು ತಲೆಕೆಡಿಸಿಕೊಳ್ಳದೇ ನಮ್ಮ ಕರ್ತವ್ಯಗಳಿಂದ ಅವರಿಗೆ ಉತ್ತರ ನೀಡಬೇಕು.ಉನ್ನತ ಸಾಧನೆಯ ಹಾದಿಯಲ್ಲಿ ಕಲ್ಲು ಮುಳ್ಳುಗಳ ದಾಟಿದ ಮೇಲೆ ಯಶಸ್ಸಿನ ಶಿಖರ ಖಂಡಿತವಾಗಿಯೂ ಸಿಕ್ಕೇ ಸಿಗುತ್ತದೆ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಶಿಕ್ಷಣದಲ್ಲಿ ರಂಗಕಲೆ ಇಂದಿನ ಅಗತ್ಯ
ವಿದ್ಯಾರ್ಥಿಗೆ ಕೇವಲ ಪರಿಕಲ್ಪನೆಯ ಬಗ್ಗೆ ತಿಳಿಸುವುದು ಸಾಕಾಗುವುದಿಲ್ಲ. ಉತ್ತಮ ಶಿಕ್ಷಕರು ವಿದ್ಯಾರ್ಥಿಯಲ್ಲಿ ವಿಮರ್ಶಾತ್ಮಕ ಚಿಂತನೆಯ ಸಾಮರ್ಥ್ಯವನ್ನು ಮತ್ತು ಮೌಲ್ಯ ಶಿಕ್ಷಣವನ್ನು ಪ್ರೇರೇಪಿಸಬೇಕು ಅದಕ್ಕೆ ರಂಗಕಲೆಯು ಉಪಯುಕ್ತ ಎಂದು ಮಹಾನ್ ತತ್ವಜ್ಞಾನಿ ಪ್ಲೇಟೋ ತಾನು ಅಕಾಡೆಮಿಯನ್ನು ಆರಂಭಿಸಿದ ಕಾಲದಲ್ಲೇ ಹೇಳಿದ್ದರು.
ನಾಟಕಗಳನ್ನು ಬೋಧನಾ ಸಾಧನವಾಗಿ ಬಳಸುವ ಮೂಲಕ ವಿದ್ಯಾರ್ಥಿಗಳು ಬೌದ್ಧಿಕವಾಗಿ, ದೈಹಿಕವಾಗಿ, ಸಾಮಾಜಿಕವಾಗಿ ಅಥವಾ ಭಾವನಾತ್ಮಕವಾಗಿ ಎಲ್ಲ ರೀತಿಯಲ್ಲೂ ಬೆಳವಣಿಗೆಗೆ ಹಾಗೂ ಸಮಗ್ರ ಕಲಿಕೆಗೆ ಕಾರಣವಾಗುತ್ತದೆ.
ಇದರ ಜೊತೆಯಲ್ಲಿ ಜೀವನ ಕೌಶಲ್ಯಗಳು, ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳು, ನಾಯಕತ್ವ, ಸಹಕಾರ ಮತ್ತು ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ನೀಡುತ್ತದೆ.
'ನಾಟಕ' ಪದವು ವಾಸ್ತವವಾಗಿ ಗ್ರೀಕ್ ಪದ 'ಡ್ರಾಮಾ'ಅಥವಾ'ಡ್ರಾವೋ' ನಿಂದ ತೆಗೆದುಕೊಳ್ಳಲಾಗಿದೆ, ಇದು 'ನಾನು ಮಾಡುತ್ತೇನೆ' ಅಥವಾ ಕ್ರಿಯೆಯನ್ನು ಸೂಚಿಸುತ್ತದೆ. ಹೀಗಾಗಿ, ನಾಟಕೀಯ, ರೇಡಿಯೋ, ಟಿವಿ ಅಥವಾ ಕಾಲ್ಪನಿಕ ಕಥೆಯ ನೇರ ಪ್ರದರ್ಶನಗಳ ಮೂಲಕ ನಟನೆ ಅಥವಾ ಪ್ರದರ್ಶನ ಕ್ರಿಯೆಯು ನಾಟಕದಲ್ಲಿ ಬರುತ್ತದೆ.
ಶಿಕ್ಷಣದಲ್ಲಿ ರಂಗಕಲೆಯ ಮಹತ್ವ
ಬರೀ ಸ್ಪೂನ್ ಫೀಡ್ ಮಾಡಿದ ಮಾಹಿತಿ ಮತ್ತು ವಿದ್ಯಾರ್ಥಿಗಳು ಉರುಹೊಡೆದು ಹಾಕುವುದು ಸಮಾಜಕ್ಕೆ ಹಾನಿಕಾರಕ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸ್ಮಾರ್ಟ್ ಕಲಿಕೆ, ವಿಮರ್ಶಾತ್ಮಕ ಚಿಂತನೆ ಮತ್ತು ತಾರ್ಕಿಕ ಚಿಂತನೆಯ ಉತ್ತೇಜಿಸಲು , ನಾಟಕ ಮತ್ತು ಕಲೆಗಳು ಶಿಕ್ಷಣ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಿಯಂತ್ರಿತ ವಾತಾವರಣದಲ್ಲಿ, ಒಂದು ಐತಿಹಾಸಿಕ ದೃಶ್ಯವನ್ನು ಪುನರಾವರ್ತಿಸಲು ವಿದ್ಯಾರ್ಥಿಗಳ ಗುಂಪನ್ನು ಕೇಳಿದರೆ, ವಿದ್ಯಾರ್ಥಿಗಳು ಇತಿಹಾಸದಿಂದ ಹೆಸರುಗಳು ಮತ್ತು ದಿನಾಂಕಗಳ ಗುಂಪನ್ನು ಸಂಗ್ರಹಿಸದೆಯೇ ನೆನಪಿಟ್ಟುಕೊಳ್ಳಲು ಮತ್ತು ಅರ್ಥಮಾಡಿಕೊಳ್ಳಲು ಸುಲಭವಾಗುತ್ತದೆ. ಪರಿಣಾಮಕಾರಿ ಕಲಿಕೆಯನ್ನು ಉತ್ತೇಜಿಸಲು ಪ್ರಪಂಚದಾದ್ಯಂತದ ಅನೇಕ ಸಂಸ್ಥೆಗಳಲ್ಲಿ ಶಿಕ್ಷಣ ದಲ್ಲಿ ನಾಟಕ ಮತ್ತು ಕಲೆಗಳನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಲಾಗಿದೆ. ರೋಲ್-ಪ್ಲೇ ಮೂಲಕ ವಿದ್ಯಾರ್ಥಿಗಳು ಪರಸ್ಪರ ಮತ್ತು ಗುಂಪು ಸಂವಹನ, ಮತ್ತು ಸಾರ್ವಜನಿಕ ಮಾತನಾಡುವ ಕೌಶಲ್ಯಗಳನ್ನು ಕಲಿಯುತ್ತಾರೆ ಮತ್ತು ಅವರಲ್ಲಿ ಪರಿಶೋಧನೆಯ ಕೌಶಲ್ಯವನ್ನು ಬೆಳೆಸಲು ಈ ವಿಧಾನವು ಸಹಾಯ ಮಾಡುತ್ತದೆ.
ಶಿಕ್ಷಣ ದಲ್ಲಿ ನಾಟಕ ಮತ್ತು ಕಲೆಗಳ ಪ್ರಾಮುಖ್ಯತೆಗೆ ಪ್ರಮುಖ ಕಾರಣಗಳು ಇಲ್ಲಿವೆ
ಸ್ವಯಂ ಅಭಿವ್ಯಕ್ತಿಯನ್ನು ಕಲಿಸುತ್ತದೆ
ಮಕ್ಕಳು ಶಿಕ್ಷಣ ದಲ್ಲಿ ನಾಟಕ ಮತ್ತು ಕಲೆಗಳ ಬಳಕೆಯ ಮೂಲಕ ಮತ್ತು ಸೃಜನಶೀಲ ಅಭಿವ್ಯಕ್ತಿಯ ಮೂಲಕ ಸ್ವಯಂ ಅಭಿವ್ಯಕ್ತಿಯ ಪ್ರಾಮುಖ್ಯತೆಯ ಬಗ್ಗೆ ಕಲಿಯುತ್ತಾರೆ. ಅವರ ಗ್ರಹಿಕೆ ಮತ್ತು ವಿಶ್ವ ದೃಷ್ಟಿಕೋನವು ವಿಶಾಲವಾಗಿದೆ. ಇದು ಜೀವನದಲ್ಲಿ ಭವಿಷ್ಯದಲ್ಲಿ
ಸಮಸ್ಯೆಗಳನ್ನು ಎದುರಿಸುವ ಕೌಶಲ್ಯಕ್ಕೆ ಅವರನ್ನು ಸಜ್ಜುಗೊಳಿಸುತ್ತದೆ.
ಲೈಪ್ ಸ್ಕಿಲ್ ಟ್ರೈನಿಂಗ್
ಇದು ಟೀಮ್ ವರ್ಕ್, ಸಹಾನುಭೂತಿ, ಸಹಕಾರ ಮತ್ತು ಸಹಯೋಗದಂತಹ ವಿವಿಧ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತದೆ.
ರಚನಾತ್ಮಕ ಟೀಕೆಗಳನ್ನು ಕಲಿಯುತ್ತಾರೆ
ಮಕ್ಕಳು ಉತ್ತಮ ವ್ಯಕ್ತಿಗಳಾಗಲು ಸಹಾಯ ಮಾಡುವ ರೀತಿಯಲ್ಲಿ ರಚನಾತ್ಮಕ ಟೀಕೆ ಮತ್ತು ಪ್ರತಿಕ್ರಿಯೆಯನ್ನು ಸ್ವೀಕರಿಸುವ ಬಗ್ಗೆ ಕಲಿಯುತ್ತಾರೆ.
ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ
ಶಿಕ್ಷಣ ದಲ್ಲಿ ನಾಟಕ ಮತ್ತು ಕಲೆಯ ಬಳಕೆಯು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನವನ್ನು ವೇಗಗೊಳಿಸುತ್ತದೆ.
ಸಮಸ್ಯೆ ಪರಿಹರಿಸುವ ಕೌಶಲ ಬೆಳೆಸುತ್ತದೆ.
ಸೃಜನಾತ್ಮಕ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳು ಗುಂಪಿನಲ್ಲಿ ಕಲಿಯುವಾಗ ಪ್ರತಿ ಸನ್ನಿವೇಶದಲ್ಲಿ ಸಮಸ್ಯೆ ಪರಿಹರಿಸುವ ಮೌಲ್ಯದ ಬಗ್ಗೆ ಕಲಿಯುತ್ತಾರೆ.ತಂಡವಾಗಿ ಕೆಲಸ ಮಾಡುತ್ತಾ ಸಮಸ್ಯೆ ಪರಿಹರಿಸುವಲ್ಲಿ ಅತ್ಯುತ್ತಮರಾಗುತ್ತಾರೆ.
ನಾಯಕತ್ವ ಗುಣ ಬೆಳೆಯುತ್ತದೆ.
ಶಿಕ್ಷಣದಲ್ಲಿ ನಾಟಕ ಮತ್ತು ಕಲೆಯನ್ನು ಬಳಸುವುದು ವಿದ್ಯಾರ್ಥಿಗಳಿಗೆ ನಾಯಕನ ಟೋಪಿಯನ್ನು ಧರಿಸಲು ಮತ್ತು ನಾಯಕತ್ವ ಮತ್ತು ಟೀಮ್ವರ್ಕ್ಗೆ ಸಂಬಂಧಿಸಿದ ಕೇಂದ್ರ ಕೌಶಲ್ಯಗಳನ್ನು ಅಳವಡಿಸಿಕೊಳ್ಳಲು ಕಲಿಸುತ್ತದೆ.
ಹೀಗೆ ರಂಗಕಲೆಯು ಮಕ್ಕಳಿಗೆ ಬಹುಆಯಾಮದ ಉಪಯುಕ್ತತೆ ಒದಗಿಸುತ್ತದೆ ಅದರಲ್ಲೂ ಜೀವನದ ಕೌಶಲಗಳನ್ನು ಕಲಿಯಲು ಹಾಗೂ ವೈಯಕ್ತಿಕವಾಗಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಅಂಶಗಳನ್ನು ರಂಗಕಲೆ ಕಲಿಸುತ್ತದೆ. ಆದ್ದರಿಂದ ಶಿಕ್ಷಣದಲ್ಲಿ ರಂಗಕಲೆಯನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಟಿಕೆಟ್
ಚುನಾವಣೆಗೆ ಟಿಕಟ್ ಕೊಟ್ಟರೆ
ನಾನು ನಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ಸದಾ ಬದ್ದ|
ಟಿಕೆಟ್ ಕೈ ತಪ್ಪಿದರೆ ಮುಗಿಯಿತು ಶೀಘ್ರವಾಗಿ ಮತ್ತೊಂದು
ಪಕ್ಷದ ಕದ ತಟ್ಟಲು ಸಿದ್ದ|
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಪ್ರಜಾಪ್ರಭುತ್ವ ಹೋಳಿ
ಈಗ ಎಲ್ಲೆಡೆ ಬಿಸಿಲ ಜೊತೆಗೆ ಬೀಸುತ್ತಿದೆ ಚುನಾವಣಾ ಗಾಳಿ
ಆಮಿಷ ನೀಡಿ ಪಕ್ಷಗಳಿಂದ ಮತದಾರರ ಮೇಲೆ ದಾಳಿ
ಮನಸ್ಸಾಕ್ಷಿಗೆ ಮನಸೋತು
ಮತದಾನ ಮಾಡಲು ಎದ್ದೇಳಿ
ಎಲ್ಲರೂ ಸೇರಿ ಆಡೋಣ ಬನ್ನಿ
ಭಾರತದ ಪ್ರಜಾಪ್ರಭುತ್ವ ಹೋಳಿ
ಸಿಹಿಜೀವಿ ವೆಂಕಟೇಶ್ವರ
ತುಮಕೂರು