ಭಾರತದ ವಿರುದ್ಧ ಯು ಎ ಇ
ಹೀನಾಯವಾಗಿ ಸೋತರು ಪಾಪ!
ಇದಕ್ಕೆ ಪ್ರಮುಖ ಕಾರಣ
ನಮ್ಮ ಸ್ಪಿನ್ ಬೌಲರ್ ಕುಲದೀಪ!!
ಸಿಹಿಜೀವಿ ವೆಂಕಟೇಶ್ವರ
ತುಮಕೂರು
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಅವರೊಬ್ಬ ಸಾಮಾನ್ಯ ಲಾರಿ ಚಾಲಕ ದಿನಕ್ಕೆ ₹150 ಮಾತ್ರ ಸಂಪಾದಿಸುತ್ತಿದ್ದ ಅವರ ಬ್ರಾಂಡ್ ಮೌಲ್ಯ ಈಗ 5 ಕೋಟಿ ಇದೊಂತರ ನಮ್ಮ ವಿ ಅರ್ ಎಲ್ ಓನರ್ ವಿಜಯ್ ಸಂಕೇಶ್ವರ ಕಥೆಯಂತಿದ್ದರೂ ಸ್ವಲ್ಪ ವಿಭಿನ್ನ. ನಾನೀಗ ನಿಮಗೆ ಪರಿಚಯ ಮಾಡುವ ವ್ಯಕ್ತಿಯ ಹೆಸರು ರಾಜೇಶ್! ಜಾರ್ಖಂಡ್ ಮೂಲದ ರಾಜೇಶ್ ರವರ ಪೂರ್ಣ ಹೆಸರು ರಾಜೇಶ್ ರವಾನಿ. ಈಗಲೂ ಲಾರಿ ಚಾಲಕನಾಗಿ ಕೆಲಸ ಮಾಡುತ್ತಾರೆ. ಬರೀ ಲಾರಿ ಡ್ರೈವರ್ ಆಗಿದ್ರೆ ಅವರು ಲಕ್ಷದಲ್ಲಿ ಒಬ್ಬ ಸಾಮಾನ್ಯ ಡ್ರೈವರ್ ಆಗಿರುತ್ತಿದ್ದರು ಆದರೆ ಯೂಟ್ಯೂಬ್ ಅವರನ್ನು ಸ್ಟಾರ್ ಆಗಿ ಪರಿವರ್ತಿಸುವ ಮೂಲಕ ಕೋಟಿ ಸಂಪಾದಿಸುವ ಡಿಜಿಟಲ್ ಕ್ರಿಯೇಟರ್,ಹಾಗೂ ಯೂಟ್ಯೂಬರ್ ಆಗಿ ಪರಿವರ್ತಿಸಿದೆ.
ಬಿಸಿಲು, ಮಳೆ,ಚಳಿ,ಹಗಲು,ರಾತ್ರಿಗಳ ಪರಿವೆ ಇಲ್ಲದೆ ಸಂಸಾರದಿಂದ ವಾರ, ಮಾಸಗಳ ಕಾಲ ದೂರವಿರುವ ಲಾರಿ ಡ್ರೈವರ್ ಗಳ ಲೋಕವೇ ವಿಶಿಷ್ಟ. ಅಂತಹ ಕಾಯಕ ಮಾಡುವ ರಾಜೇಶ್ ಒಮ್ಮೆ ಕುತೂಹಲಕ್ಕೆ ತನ್ನ ಲಾರಿ ಡ್ರೈವಿಂಗ್ ಅನುಭವಗಳನ್ನು ಪುಟ್ಟ ವೀಡಿಯೋ ಮಾಡಿ ಹರಿಬಿಟ್ಟರು. ಜನರು ಅವರ ವೀಡಿಯೋ ನೋಡಿ ಖುಷಿ ಪಟ್ಟು ಸಬ್ಸ್ಕ್ರೈಬ್ ಲೈಕ್ ಶೇರ್ ಮಾಡಿ ಬೆಂಬಲಿಸಿದರು.ಅಲ್ಲೊಂದು ಪವಾಡವೇ ಜರುಗಿತು.ಈಗ ಅವರ "ಆರ್ ರಾಜೇಶ್ ವ್ಲಾಗ್" ಹೆಸರಿನ ಯೂಟ್ಯೂಬ್ ಚಾನೆಲ್ ಗೆ ಬರೋಬ್ಬರಿ ಕಾಲು ಕೋಟಿ ಚಂದಾದಾರರರು.ಎಂಬತ್ತು ಕೋಟಿಗಿಂತ ಹೆಚ್ಚು ವೀಕ್ಷಣೆ ಕಂಡ ಅವರ ಸಂಪಾದನೆ ತಿಂಗಳಿಗೆ ಐದರಿಂದ ಹತ್ತು ಲಕ್ಷಗಳು!
ರಾಜೇಶ್ ತಮ್ಮ ವ್ಲಾಗ್ ಗಳಲ್ಲಿ ಚಾಲಕರ ದಿನನಿತ್ಯದ ಸಂಕಷ್ಟಗಳು, ರಸ್ತೆಗಳಲ್ಲಿ ಕಂಡುಬರುವ ಅದ್ಭುತ ದೃಶ್ಯಗಳು, ವಾಹನ ಸಂಬಂಧವಾದ ಸಲಹೆಗಳು, ರಸ್ತೆ ಸುರಕ್ಷತಾ ಮಾಹಿತಿಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮೊದಲಿಗೆ ಕೆಲವರು ಮಾತ್ರ ನೋಡುತ್ತಿದ್ದರು, ಆದರೆ ನಿಧಾನವಾಗಿ ಸಾವಿರಾರು ಜನರು ಅವರ ವಿಡಿಯೋಗಳನ್ನು ನೋಡಲು ಪ್ರಾರಂಭಿಸಿದರು.
ರಾಜೇಶ್ ಅವರ ಸರಳತೆ, ನಿಜವಾದ ಅನುಭವ ಮತ್ತು ಮನಸಾರೆ ಆಡುವ ಮಾತುಗಳು ಜನರನ್ನು ಆಕರ್ಷಿಸಿದವು. ಅತಿರೇಕವಿಲ್ಲದೆ ತಾನು ಬದುಕುತ್ತಿದ್ದ ಜೀವನವನ್ನೇ ಜನರಿಗೆ ತೋರಿಸುತ್ತಿದ್ದುದರಿಂದ ಎಲ್ಲರೂ ಅವರಿಗೆ ಹತ್ತಿರವಾದರು.
ಕಾಲಕಳೆದಂತೆ ಅವರ ಯೂಟ್ಯೂಬ್ ಚಾನೆಲ್ ಬೆಳೆಯಿತು. ಹವ್ಯಾಸವಾಗಿ ಪ್ರಾರಂಭಿಸಿದ ಕೆಲಸವೇ ಅವರಿಗೆ ಎರಡನೇ ಉದ್ಯೋಗವಾಯಿತು. ಈಗ ಬ್ರಾಂಡ್ಗಳು ಅವರನ್ನು ಸಂಪರ್ಕ ಮಾಡಿ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತವೆ.ಯಾಕೆಂದರೆ ಈಗ ಅವರೇ ಒಂದು ಬ್ರಾಂಡ್!
ದುಡ್ಡು ಬಂತು ಎಂದು ರಾಜೇಶ್ ಅರ್ಧ ರಾತ್ರಿಯಲ್ಲಿ ಛತ್ರಿ ಹಿಡಿಯಲಿಲ್ಲ ಬದಲಿಗೆ
ಇಂದಿಗೂ ರಾಜೇಶ್ ತಮ್ಮ ಲಾರಿಯನ್ನು ಓಡಿಸುತ್ತಲೇ ಇದ್ದಾರೆ. ಜೊತೆಗೆ ಸಾವಿರಾರು ಜನರಿಗೆ ಪ್ರೇರಣೆಯೂ ಆಗಿದ್ದಾರೆ. ಮೋಟಾರು ವಾಹನ ತಯಾರಿಕಾ ದೈತ್ಯ ಕಂಪನಿಯ ಮಾಲಿಕರಲ್ಲಿ ಒಬ್ಬರಾದ ಆನಂದ್ ಮಹಿಂದ್ರ ರಾಜೇಶ್ ರವರನ್ನು ಮನಸಾರೆ ಹೊಗಳಿದ್ದಾರೆ.ಪ್ರಸ್ತುತ ಅವರು ಒಂದು ಕೋಟಿ ಬೆಲೆ ಬಾಳುವ ಮನೆಯನ್ನು ಕಟ್ಟಿಸಿದ್ದಾರೆ.ಅವರ ಮೂವರು ಮಕ್ಕಳು ಅವರ ಯೂಟ್ಯೂಬ್ ವೀಡಿಯೋಗಳನ್ನು ಎಡಿಟ್ ಮಾಡುವ ಪ್ರಮೋಟ್ ಮಾಡುವಲ್ಲಿ ತಂದೆಗೆ ಸಹಾಯ ಮಾಡುತ್ತಿದ್ದಾರೆ.
ಯಾವುದೇ ಕೆಲಸವನ್ನು ಶ್ರದ್ಧೆ, ಮತ್ತು ಅಚ್ಚುಕಟ್ಟಾಗಿ ಮಾಡಿದರೆ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡರೆ ಯೂಟ್ಯೂಬ್ ನಂತಹ ವೇದಿಕೆಗಳು ಹೇಗೆ ನಮ್ಮ ಜೀವನವನ್ನು ಧನಾತ್ಮಕವಾಗಿ ಬದಲಾಯಿಸುತ್ತವೆ ಎಂಬುದಕ್ಕೆ ರಾಜೇಶ್ ರವರ ಬದುಕೇ ಉದಾಹರಣೆ. ಇಂದಿನ ಯುವ ಜನರಿಗೆ ರಾಜೇಶ್ ಬಹುದೊಡ್ಡ ಪ್ರೇರಣೆ. ನಮ್ಮ ಹಿನ್ನಲೆ ಏನೇ ಇರಲಿ ಕೆಲಸದೆಡೆಗಿನ ಒಲವು ಮತ್ತು ನಿರಂತರ ಪರಿಶ್ರಮ ಇದ್ದರೆ ಜೀವನವನ್ನು ಬದಲಾಯಿಸಬಹುದು ಎಂಬುದನ್ನು ರಾಜೇಶ್ ಸಾಬೀತು ಮಾಡಿದ್ದಾರೆ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಕೆಲಸ ಸಿಗಲಿಲ್ಲ ಎಂದು ಪರಿತಪಿಸುತ್ತಾ ಸರ್ಕಾರಿ ಉದ್ಯೋಗ ಪಡೆಯಲು ಪರದಾಡುತ್ತಿರುವ ಮಧ್ಯೆಸಾಮಾನ್ಯ ರೈತ ಕುಟುಂಬದ ಮೂವರು ಒಡಹುಟ್ಟಿದವರು ಸರ್ಕಾರಿ ನೌಕರಿ ಗಿಟ್ಟಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಮೂಲಕ ತಂದೆಯ ಕನಸನ್ನು ಈ ಮೂವರು ಮಕ್ಕಳು ಈಡೇರಿಸಿದ್ದಾರೆ.
ಕರೀಂನಗರ ಜಿಲ್ಲೆಯ ವೀನವಂಕ ಬಳಿಯ ರೆಡ್ಡಿಪಲ್ಲಿ ಗ್ರಾಮದ ಪೊತುಲು ಇಂದಿರಾ ಮತ್ತು ಚಂದ್ರೈ ದಂಪತಿಯ ಮೂವರೂ ಮಕ್ಕಳು ಸರ್ಕಾರಿ ಹುದ್ದೆ ಪಡೆದಿದ್ದಾರೆ. 2 ಎಕರೆಯಲ್ಲಿ ದಂಪತಿ ಕೃಷಿ ಜೊತೆಗೆ ಕೂಲಿ ಕೆಲಸ ಮಾಡುತ್ತಾ ಕಷ್ಟಪಟ್ಟು ಮಕ್ಕಳನ್ನು ಓದಿಸಿದ್ದರು. ಎಲ್ಲ ಪೋಷಕರು ಬಯಸುವಂತೆ ತಮ್ಮ ಮಕ್ಕಳನ್ನು ಸರ್ಕಾರಿ ಕೆಲಸಕ್ಕೆ ಸೇರಿಸಬೇಕು ಎಂದು ತಂದೆ ಕನಸು ಕಂಡಿದ್ದರು.
ಸರ್ಕಾರಿ ಶಾಲೆಯಲ್ಲೇ ಕಲಿತು ಸರ್ಕಾರಿ ಉದ್ಯೋಗ ಪಡೆದ ಮಕ್ಕಳ ಸಾಧನೆ ಕಂಡ ಪೋಷಕರು ಆನಂದ ಭಾಷ್ಪ ಸುರಿಸಿದ್ದಾರೆ.
ಓರ್ವ ಮಗ ಸಿಆರ್ಪಿಎಫ್ ಅಸಿಸ್ಟಂಟ್ ಕಮಾಂಡರ್, ಇನ್ನೊಬ್ಬ ಸಿಐಎಸ್ಪಿ ಕಾನ್ಸ್ಟೇಬಲ್ ಮತ್ತು ಪುತ್ರಿ ಅಬಕಾರಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ರೈತನ ಹಿರಿಯ ಮಗ ಎಂ ಬಿ ಬಿ ಎಸ್ ಓದಿದದರೂ ಸರ್ಕಾರಿ ಹುದ್ದೆ ಸಿಗದ ಕಾರಣದಿಂದ ಡಾಕ್ಟರ್ ಹುದ್ದೆ ತೊರೆದು ತಂದೆಯ ಆಸೆಯಂತೆ ಸರ್ಕಾರಿ ಕೆಲಸ ಪಡೆದಿದ್ದಾರೆ.
ಅಜಯ್ ಕರೀಂ ನಗರದ ಪ್ರತಿಮಾ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಇವರು ವೈದ್ಯಕೀಯ ವೃತ್ತಿಯಲ್ಲಿ ಮುಂದುವರಿಯದೇ ಅಪ್ಪನ ಆಸೆಯಂತೆ ಪೊಲೀಸ್ ಸಮವಸ್ತ್ರ ಧರಿಸಬೇಕೆಂದು ನಿರ್ಧರಿಸಿದ್ದರು. ಅಂತೆಯೇ ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಿಆರ್ಪಿಎಫ್ ಅಸಿಸ್ಟಂಟ್ ಕಮಾಂಡರ್ ಆಗಿ ಆಯ್ಕೆ ಆಗಿದ್ದಾರೆ.
"ಚೆನ್ನಾಗಿ ಓದಿ ಪೊಲೀಸ್ ಅಧಿಕಾರಿಯಾಗುವಂತೆ ನಮ್ಮ ತಂದೆ ನನಗೆ ಬಾಲ್ಯದಿಂದಲೂ ಹೇಳುತ್ತಿದ್ದರು. ಆದರೆ ಡಾಕ್ಟರ್ ಆಗಬೇಕೆಂಬ ನನ್ನ ಕನಸು ಪೂರೈಸಿಕೊಳ್ಳಲು ಎಂಬಿಬಿಎಸ್ ಮಾಡಿದೆ. ತಂದೆಯ ಮಾತು ನನ್ನನ್ನು ಕಾಡುತ್ತಿತ್ತು. ಆದ್ದರಿಂದ ಸ್ಫರ್ಧಾತ್ಮಕ ಪರೀಕ್ಷೆ ಪಡೆದು ಕಮಾಂಡರ್ ಆಗಿ ತಂದೆಯ ಕನಸು ನನಸು ಮಾಡಿರುವೆ" ಎಂದು ಅಜಯ್ ತಿಳಿಸಿದ್ದಾರೆ.
ಅಜಯ್ ಅವರ ತಂಗಿ ನವಥಾ ಸರ್ಕಾರಿ ಶಾಲೆಯಲ್ಲಿ ಕಲಿತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರು ಕೂಡ ನೇಮಕಾತಿ ಪರೀಕ್ಷೆಯಲ್ಲಿ ಪಾಸಾಗಿ ಅಬಕಾರಿ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೆಯೇ ಇವರ ಸಹೋದರ ಶ್ರವಣ ಕೂಡ ಉತ್ತರ ಪ್ರದೇಶದ ಲಖನೌದಲ್ಲಿ ಸಿಐಎಸ್ಎಫ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದಾರೆ.
ತಂದೆ ತಾಯಿಗಳು ಕಷ್ಟ ಪಟ್ಟು ಶಿಕ್ಷಣ ನೀಡಿದರು. ಅದಕ್ಕೆ ತಕ್ಕಂತೆ ಮಕ್ಕಳು ಸತತ ಪ್ರಯತ್ನ ಮತ್ತು ಪರಿಶ್ರಮದಿಂದ ಸರ್ಕಾರಿ ಉದ್ಯೋಗ ಪಡೆದರು.
ಮಧ್ಯಮ ವರ್ಗದ ಕುಟುಂಬದ ಗ್ರಾಮೀಣ ಹಿನ್ನೆಲೆಯಿಂದ ಬಂದ ಈ ಮೂವರ ಸಾಧನೆ ಇತರರಿಗೆ ಪ್ರೇರಣೆಯಾಗಿದೆ.
ಸಿಹಿಜೀವಿ ವೆಂಕಟೇಶ್ವರ
ಸಾಮಾನ್ಯ ಶಕ ವರ್ಷ
950 ರ ಕಾಲದ
ಚೋಳರ ಕಾಲಕ್ಕೆ ಸೇರಿದ ಈ ವಿಷ್ಣುವಿನ ವಿಶೇಷವಾದ ಮೂರ್ತಿ ಪ್ರಸ್ತುತ ಬ್ರಿಟಿಷ್ ಮ್ಯೂಸಿಯಂ ನಲ್ಲಿದೆ.
ಲಂಬವಾದ ಅಡ್ಡ ಪಟ್ಟಿಗಳನ್ನು ಹೊಂದಿರುವ ಮೆಟ್ಟಿಲು ಸಿಂಹಾಸನದ ಮೇಲೆ ಲಲಿತಾಸನದಲ್ಲಿ ಕುಳಿತಿರುವ, ಅಗಲವಾದ ಭುಜಗಳು ಮತ್ತು ಕಿರಿದಾದ ಸೊಂಟವನ್ನು ಹೊಂದಿರುವ ಕಿರೀಟಧಾರಿ ವಿಷ್ಣುವಿನ ಕಂಚಿನ ಆಕೃತಿಯು ಆ ಕಾಲದ ಶಿಲ್ಪಿಗಳ ಚಾಕಚಕ್ಯತೆಗೊಂದು ಉದಾಹರಣೆ.
ನಮ್ಮ ಸಾಂಸ್ಕೃತಿಕ ಪರಂಪರೆ
ನಮ್ಮ ಹೆಮ್ಮೆ..
ಸಿಹಿಜೀವಿ ವೆಂಕಟೇಶ್ವರ.
#CulturalHeritage #HeritagePreservation #CulturalDiversity #Tradition #CulturalIdentity #History #Authenticity #CulturalAwareness #ArtAndCulture #WorldHeritage #CulturalLegacy #RichHeritage #CulturalMapping #CulturalExpression #Folklore #PreserveOurHeritage #CulturalRoots #CulturalFestival #Ethnic
Diversity