30 ಅಕ್ಟೋಬರ್ 2025

ಉಸಿರುಗಟ್ಟುವ ವಾತಾವರಣ ತ್ಯಜಿಸಿ ಉಸಿರಾಡೋಣ. (ಲೇಖನ)

 


ಉಸಿರುಗಟ್ಟುವ ವಾತಾವರಣ ತ್ಯಜಿಸಿ ಉಸಿರಾಡೋಣ.


ನಾವು ಕೊಳ್ಳುಬಾಕ ಸಂಸ್ಕೃತಿಯ ದಾಸರಾಗಿ ವಿವಿಧ ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಹಬ್ಬ, ಹುಟ್ಟು ಹಬ್ಬ, ಮದುವೆ, ಮುಂಜಿ   ಹೀಗೆ ವಿವಿಧ ಕಾರಣದಿಂದಾಗಿ ಬೇಕಿದ್ದು ಬೇಡವಾದ್ದು  ಖರೀದಿಸಿ  ನಮ್ಮ  ಬೀರುಗಳು,ವಾರ್ಡ್ ರೋಬ್ ಗಳು ತುಂಬಿ ತುಳುಕುವಷ್ಟು ಶಾಪಿಂಗ್ ಮಾಡುತ್ತೇವೆ.ಹಣ ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಬಳಸಿಯಾದರೂ ಕೊಳ್ಳುತ್ತೇವೆ.  ಕೊಂಡ ವಸ್ತುಗಳನ್ನು ಮನೆಯಲ್ಲಿ ಪೇರಿಸಿಕೊಂಡು   ಇ ಎಂ ಐ ಕಟ್ಟುತ್ತಾ, ಸಾಲ ತೀರಿಸುವ ಟನ್ಷನ್ ನಲ್ಲಿ ಕೆಲವೊಮ್ಮೆ ಉಸಿರುಗಟ್ಟಿದ ವಾತಾವರಣದಲ್ಲಿ ಜೀವಿಸುತ್ತೇವೆ. ಮಾಲ್ ಸಂಸ್ಕೃತಿ ಇದಕ್ಕೆ ಪ್ರಚೋದನಕಾರಿ. ಹಾಗೆಂದ ಮಾತ್ರಕ್ಕೆ ನೀವು ಕಂಜ್ಯೂಸ್ ಆಗಿ ಎಂತಲೂ ನಾನು ಹೇಳುವುದಿಲ್ಲ.

ಬೇಕಾದ್ರೆ ಉಪಯೋಗಕ್ಕೆ ಎನ್ನುವ ಡಬ್ಬಿಗಳು, ನೆನಪಿಗೂ ಬರದ ಹಳೆಯ ಸ್ಮರಣಿಕೆಗಳು. ನಾವು ಖರೀದಿಸುತ್ತೇವೆ. ಸಂಗ್ರಹಿಸುತ್ತೇವೆ.ಅಪ್‌ಗ್ರೇಡ್ ಮಾಡುತ್ತೇವೆ.ಆದರೆ   ಕೊನೆಗೆ  ಯಾವುದೋ ನಮಗಿಷ್ಟದ ಹಳೆ  ಶರ್ಟ್ ಹುಡುಕಿ ಇದೊಂದೇ ಸಾಕು ಎಂದು ಹಾಕಿಕೊಂಡು ನಡೆದುಬಿಡುತ್ತೇವೆ. ಇವೆಲ್ಲವುಗಳ ಬಗ್ಗೆ
ಜೆಮ್ಸ್ ವಾಲ್ಮನ್ ರವರು “Stuffocation”  ಎಂಬ ಪುಸ್ತಕದಲ್ಲಿ ಚೆನ್ನಾಗಿ ಚಿತ್ರಿಸಿದ್ದಾರೆ.

ನಾವೆಲ್ಲರೂ ಸಂತೋಷವನ್ನು ವಸ್ತುಗಳನ್ನು ಹೆಚ್ಚು ಗುಡ್ಡೇ ಹಾಕುವುದರಲ್ಲಿ ಬೇರೆಯವರಿಗಿಂತ ಹೆಚ್ಚು ವಸ್ತುಗಳನ್ನು ಶೇಖರಣೆ ಮಾಡುವುದರಲ್ಲಿ ಹುಡುಕುವ ಭರದಲ್ಲಿ ನಿಜಕ್ಕೂ ಈ ವಸ್ತುಗಳ ಅಗತ್ಯ ನನಗಿದೆಯಾ? ಎಂಬು ಸ್ವಯಂ ಪ್ರಶ್ನಿಸಿಕೊಳ್ಳುವ ಮನೋಭಾವ ಕಾಣೆಯಾಗಿದೆ.

   ಗ್ರಾಹಕ ಕೇಂದ್ರಿತ  ಕನಸುಗಳಿಂದ ತುಂಬಿರುವ ಮನೆಗಳು, ಸ್ಥಾನಮಾನಕ್ಕಾಗಿ ಕಟ್ಟಲ್ಪಟ್ಟ ದೊಡ್ಡ  ಕಚೇರಿಗಳು ಇಂದಿನ ಟ್ರೆಂಡ್. ಹೆಚ್ಚು ವಸ್ತುಗಳಿದ್ದರೆ  ಉತ್ತಮ ಜೀವನ  ಎಂಬ  ಭ್ರಮೆಯಲ್ಲಿ ಸಿಕ್ಕಿಹಾಕಿಕೊಂಡು ಜೀವಿಸುತ್ತಿದ್ದೇವೆ. 


ವಸ್ತುಗಳು ಕೇವಲ ನಮ್ಮ ಕೋಣೆ ಮತ್ತು ಕಟ್ಟಡಗಳನ್ನು ತುಂಬಿಸಬಹುದು.ಆದರೆ  ಆ ವಸ್ತುಗಳನ್ನು ಬಳಸಿದ   ನೆನಪುಗಳು  ವಸ್ತುವಿಗಿಂತ ಹೆಚ್ಚು ದೀರ್ಘಕಾಲದ ಸಂತೋಷವನ್ನು ನೀಡುತ್ತವೆ. ಉದಾಹರಣೆಗೆ   ನಾವು ಖರೀದಿಸಿದ ಬೂಟುಗಳನ್ನು ನೆನಪಿಡುವುದಿಲ್ಲ. ಆದರೆ ಅವುಗಳನ್ನು ಧರಿಸಿ ನೃತ್ಯ ಮಾಡಿದ ಆ ರಾತ್ರಿ ಎಂದಿಗೂ ಮರೆಯಲಾಗುವುದಿಲ್ಲ. ಅನುಭವಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ.


ನಾವು ನಮ್ಮಲ್ಲಿರುವ ಆಸ್ತಿ   ಅಂತಸ್ತು  ಸಂಪತ್ತು ಪ್ರದರ್ಶನಕ್ಕೆ ಹಾತೊರೆಯುತ್ತೇವೆ. ತೋರಿಸಬೇಕಾದದ್ದು ಸ್ಥಾನಮಾನಗಳನ್ನಲ್ಲ.ಬದಲಿಗೆ ನಮ್ಮ ಜೀವನವನ್ನು ಪ್ರವಾಸಗಳು, ಆಳವಾದ ಸ್ನೇಹಗಳು, ಕಲಿತ ಕೌಶಲ್ಯಗಳು, ನೋಡಿದ ಸ್ಥಳಗಳಿಂದ ಅರ್ಥಪೂರ್ಣ ಮಾಡಿಕೊಳ್ಳಬೇಕು. ಇವೇ ನಿಜವಾದ ಟ್ರೋಫಿಗಳು!

  ನಾವು  ಸರಳವಾದಂತೆ  ಜೀವನ ವಿಸ್ತರಿಸುತ್ತದೆ.
ಅವ್ಯವಸ್ಥೆ ಹೋಗಿ  ಶಕ್ತಿ ಮರಳುತ್ತದೆ. ಬಯಕೆಗಳು ಕಡಿಮೆಯಾದಾಗ ಕೃತಜ್ಞತೆ ಬೆಳೆಯುತ್ತದೆ. ಹೆಚ್ಚು ಬೇಕು ಎಂದು ಓಡುವುದನ್ನು   ನಿಲ್ಲಿಸಿದಾಗ  ಸಾಕು ಎಂಬುದನ್ನು ಅರಿಯುತ್ತೇವೆ.ಇನ್ನಾದರೂ ನಾವು ನಮ್ಮದೇ ಅತಿಯಾದ  ವಸ್ತುಗಳಿಂದ ನಮಗರಿವಿಲ್ಲದೇ  ಉಸಿರುಗಟ್ಟುವುದನ್ನು ತಪ್ಪಿಸಿಕೊಂಡು ಅರ್ಥಪೂರ್ಣವಾಗಿ ಜೀವಿಸೋಣ.
ನಮ್ಮ ಯಶಸ್ಸಿನ ಮಾನಕಗಳು    ಎಷ್ಟು ವಸ್ತುಗಳನ್ನು ಹೊಂದಿದ್ದೇವೆ ಎಂಬುದಲ್ಲ. ಎಷ್ಟು ಕಾಲ   ಸಂತಸದಿಂದ  ಬದುಕಿದ್ದೇವೆ ಎಂಬುದರಿಂದ  ಅಳೆಯಬೇಕಾಗಿದೆ.
ಅದನ್ನು ಅರಿತ ಕ್ಷಣ ನಿಜವಾಗಿಯೂ ಮತ್ತೆ ನಾವು ಹೊಸದಾಗಿ ಉಸಿರಾಡಲು ಆರಂಭಿಸಿದಂತಾಗುತ್ತದೆ. ಅಂತಹ ಜೀವನದ ಕಡೆ ಸಾಗೋಣ..

ಸಿಹಿಜೀವಿ ವೆಂಕಟೇಶ್ವರ
ತುಮಕೂರು

26 ಅಕ್ಟೋಬರ್ 2025

ಬೆಲೆ. ಹನಿಗವನ


 

ಬೆಲೆ

ಜಂಭ ಕೊಚ್ಚಿಕೊಳ್ಳುತ್ತಾ ಹೇಳಿಕೊಳ್ಳಬೇಡ ಎಲ್ಲರೂ ನನ್ನನ್ನೇ ಇಷ್ಟಪಡುತ್ತಾರೆಂದು| ಕೆಲವೊಮ್ಮೆ ಕಡಿಮೆ ಕಿಮ್ಮತ್ತಿನ ವಸ್ತುಗಳನ್ನು ಕೊಳ್ಳಲು ಜನ ಮುಗಿ ಬೀಳುತ್ತಾರೆ ನಾ ಮುಂದು,ತಾ ಮುಂದು||

ಸಿಹಿಜೀವಿ ವೆಂಕಟೇಶ್ವರ #QuoteSubhashitha #Sihijeevi #Venkateswara #WisdomInKannada #LifeLessons #InspirationalQuotes #SpiritualWisdom #MotivationalQuotes #KannadaCulture #QuoteOfTheDay #SubhashithaWisdom #KannadaProverbs #SelfAwareness #SoulfulQuotes #PositiveVibes #LifeInspired #Venkateswar

22 ಅಕ್ಟೋಬರ್ 2025

ದೋಸೆ ಹಾಕಿ ವಿಶ್ವ ದಾಖಲೆ ನಿರ್ಮಿಸಿದ ವಿಷ್ಣು!


 ಬಹಳಷ್ಟು ಜನರಿಗೆ ದೋಸೆಯೆಂದರೆ ಪ್ರಾಣ.ತರಾವರಿ‌ ದೋಸೆಗಳು ಜನರ ಬಾಯಲ್ಲಿ ನೀರೂರಿಸುತ್ತವೆ.ನನಗೆ ವೈಯಕ್ತಿಕವಾಗಿ ಬೆಣ್ಣೆ ದೋಸೆ,ಈರುಳ್ಳಿ ದೋಸೆ ಇಷ್ಟವಾದರೆ ನಮ್ಮ ಮನೆಯವರಿಗೆ ಮಸಾಲೆ ದೋಸೆ ಇಷ್ಟ.

ಇಲ್ಲೊಬ್ಬರು ರೆಕಾರ್ಡ್ ನಿರ್ಮಿಸಿದ್ದಾರೆ. ದೋಸೆ ತಿನ್ನುವುದರಲ್ಲಿ  ಅಲ್ಲ. ದೋಸೆ ಮಾಡುವುದರಲ್ಲಿ.

ಹೌದು ಈ ದಾಖಲೆಯನ್ನು ನಿರ್ಮಿಸಿದವರು ಭಾರತದ ಪ್ರಸಿದ್ಧ ಬಾಣಸಿಗ ವಿಷ್ಣು ಮನೋಹರ್!


25 ಗಂಟೆಗಳಲ್ಲಿ 15,773 ದೋಸೆಗಳನ್ನು ಹಾಕಿ    ವಿಷ್ಣು ಮನೋಹರ್ ರವರು ತಮ್ಮದೇ  ಹೆಸರಲ್ಲಿ ಇದ್ದ ದಾಖಲೆಯನ್ನು ಮುರಿದು   ಹೊಸ ವಿಶ್ವ ದಾಖಲೆ ನಿರ್ಮಿಸಿದರು. ಇಷ್ಟಕ್ಕೆ ಸುಮ್ಮನಾಗದ ಅವರು ಅಮೆರಿಕದಲ್ಲಿ ಮತ್ತೊಂದು ದಾಖಲೆ ನಿರ್ಮಿಸಲು ಕಾತರರಾಗಿದ್ದಾರೆ.

 


 ಪ್ರಸಿದ್ಧ ಶೆಫ್ ವಿಷ್ಣು ಮನೋಹರ್ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ನಿರಂತರವಾಗಿ 25 ಗಂಟೆಗಳ ಕಾಲ 15,773 ದೋಸೆಗಳನ್ನು ತಯಾರಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈಗ ಅವರು ಅಮೆರಿಕಾದಲ್ಲಿ 26 ಗಂಟೆಗಳ ದೋಸೆ ಮ್ಯಾರಥಾನ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಕಳೆದ ವರ್ಷ, ಅವರು ನಾಗಪುರದಲ್ಲಿ 24 ಗಂಟೆಗಳಲ್ಲಿ 14,400 ದೋಸೆಗಳನ್ನು ತಯಾರಿಸಿ ದಾಖಲೆ ಮಾಡಿದ್ದರು.


  ಅಕ್ಟೋಬರ್ 2025 ರ  ಶನಿವಾರ ಬೆಳಗ್ಗೆ 7 ಗಂಟೆಗೆ ದೋಸ ತಾವಾ  ಲಾನ್‌ನಲ್ಲಿ ದೋಸೆ ತಯಾರಿಕೆ ಪ್ರಾರಂಭಿಸಿದರು. ಭಾನುವಾರ ಬೆಳಗ್ಗೆ 6 ಗಂಟೆಗೆ ಅವರು ಹಿಂದಿನ ದಾಖಲೆಯನ್ನು ಮುರಿದು 15,700 ದೋಸೆಗಳನ್ನು ತಯಾರಿಸಿದರು. 20 ನಿಮಿಷಗಳ ಅಧಿಕೃತ ವಿರಾಮದ ನಂತರ, ಅವರು ಮತ್ತೆ ಕೆಲಸಕ್ಕೆ ಮುಂದಾಗಿ ಅಮರಾವತಿ ಜನತೆಗೆ ಬಿಸಿ ಬಿಸಿ ದೋಸೆಗಳನ್ನು ನೀಡಿದರು.


ಬೆಳಗ್ಗೆ 8 ಗಂಟೆಗೆ ಅವರು 15,773ನೇ ದೋಸೆಯನ್ನು ತಯಾರಿಸಿ ಹೊಸ ದಾಖಲೆಯನ್ನು ಅಧಿಕೃತವಾಗಿ ಮುಗಿಸಿದರು. ಅದೇ ವೇಳೆ, ಇಂಡಿಯಾ ವರ್ಲ್ಡ್ ರೆಕಾರ್ಡ್ಸ್ ಪ್ರತಿನಿಧಿ ಪ್ರವೀಣ್ ರಾಉತ್ ಅವರು ಮನೋಹರ್ ಅವರಿಗೆ ಪದಕ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಅಮರಾವತಿ ಜನರಿಂದ ದೋಸೆ ತಿನ್ನಲು ಹಾಗೂ ದಾಖಲೆಯನ್ನು ನೋಡಲು ಭಾರಿ ಪ್ರತಿಕ್ರಿಯೆಯು ವ್ಯಕ್ತವಾಯಿತು.ಶನಿವಾರ ಬೆಳಗ್ಗೆ 7 ಗಂಟೆಯಿಂದ ಮನೋಹರ್ ದೋಸೆ ತಯಾರಿಕೆ ಪ್ರಾರಂಭಿಸಿದ ನಂತರ ಸಾವಿರಾರು ಜನರು ಸಾಲಿನಲ್ಲಿ ನಿಂತು ದೋಸೆ ಸವಿದರು. ರಾತ್ರಿ 3 ರಿಂದ 5ರವರೆಗೆ ಜನರ ಸಂಖ್ಯೆ ಸ್ವಲ್ಪ ಕಡಿಮೆಯಾದರೂ, ಬೆಳಗ್ಗೆ 5 ರಿಂದ 8ರವರೆಗೆ ಮತ್ತೆ ಉತ್ಸಾಹ ತುಂಬಿತು.


ಈ ದಾಖಲೆಯ ಕಾರ್ಯಕ್ರಮದಲ್ಲಿ 30,000ಕ್ಕೂ ಹೆಚ್ಚು ಜನರು ಮನೋಹರ್, ಅವರ ಪತ್ನಿ ಅಪರ್ಣಾ, ಮತ್ತು ತಂಡ ತಯಾರಿಸಿದ ದೋಸೆಗಳನ್ನು ಸವಿದರು. ಭಾನುವಾರ ರಾತ್ರಿ ಬದ್ನೇರಾ ಶಾಸಕ ರವಿ ರಾಣಾ ಕೂಡ ಸ್ಥಳಕ್ಕೆ ಬಂದು ಸ್ವತಃ ಕೆಲವು ದೋಸೆಗಳನ್ನು ತಯಾರಿಸಿದರು. ಎಲ್ಲರಿಗೂ ಉಚಿತ ದೋಸೆಗಳನ್ನು ವಿತರಿಸಲಾಯಿತು.

ಈ ದಾಖಲೆಯ ದೋಸೆ ತಯಾರಿಸಲು ಅವರು ಒಂದೇ ಸಮಯದಲ್ಲಿ ನಾಲ್ಕು ತವಾಗಳಲ್ಲಿ  ದೋಸೆ ತಯಾರಿಸಲಾಯಿತು. ಪ್ರತಿ ಎರಡು ನಿಮಿಷಕ್ಕೆ ಸುಮಾರು 28 ಡೋಸೆ ಸಿದ್ಧವಾಗಿ ತಿನ್ನವವರ ಹೊಟ್ಟೆ ಸೇರಿದವು  ಇದಕ್ಕಾಗಿ  500 ಕೆ.ಜಿ. ದೋಸೆ ಹಿಟ್ಟನ್ನು ಮತ್ತು 800 ಕೆ.ಜಿ. ಚಟ್ನಿಯನ್ನು ಬಳಸಲಾಯಿತು


#Dosa #Food #WorldRecord #VishnuManohar #IndianCuisine #StreetFood #CulinaryArts #FoodLovers #Foodiegram #FoodInspiration #GourmetDosa #CulturalHeritage #TastyTreats #DosaLove #ChefVishnu #EpicureanDelight #GlobalCookoff #FoodChallenge #RecordBreakingFood

18 ಅಕ್ಟೋಬರ್ 2025

ದೀಪ..


 ದೀಪ..


ಹಣ ಅಂತಸ್ತು ನೋಡುತಾ
ಮಾಡದಿರು ಎಂದಿಗೂ ತರತಮ|
ದೀಪವ ನೋಡಿ ಕಲಿ ಅದು
ಓಡಿಸುವುದು ದೀನ ದಲಿತರ
ಮನೆ ಮನಗಳ  ತಮ||

ಸಿಹಿಜೀವಿ ವೆಂಕಟೇಶ್ವರ

17 ಅಕ್ಟೋಬರ್ 2025

ಹೇಳಿಕೊಳ್ಳುವಂತಹ ಸಿನಿಮಾ "ಏಳು ಮಲೆ"




ಹೇಳಿಕೊಳ್ಳುವಂತಹ ಸಿನಿಮಾ "ಏಳು ಮಲೆ"

ಅನಿವಾರ್ಯ ಕಾರಣದಿಂದ ಥಿಯೇಟರ್ ನಲ್ಲಿ ಏಳುಮಲೆ ಸಿನಿಮಾ ನೋಡಲಾಗಿರಲಿಲ್ಲ.ಇಂದು ಓಟಿಟಿ ಯಲ್ಲಿ ನೋಡಿದೆ.ಬಹಳ ಅಚ್ಚುಕಟ್ಟಾಗಿ ಚಿತ್ರಕತೆ ಬರೆದು ನಿರ್ದೇಶನ ಮಾಡಿದ ಪುನಿತ್ ರಂಗಸ್ವಾಮಿಯವರು ಕನ್ನಡ ಚಿತ್ರ ರಂಗಕ್ಕೆ ಸಿಕ್ಕ ಮತ್ತೊಬ್ಬ ಭರವಸೆಯ ನಿರ್ದೇಶಕ ಎಂದೆನಿಸಿತು.ಇಂತಹ ಹೊಸಬರನ್ನು ಪ್ರೋತ್ಸಾಹ ಮಾಡಿ ತೆರೆಮರೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿದ ಕ್ರಿಯೇಟಿವ್ ಹೆಡ್ ಕಂ ನಿರ್ಮಾಪಕರಾದ ತರುಣ್ ಕಿಶೋರ್ ಸುಧೀರ್ ಮುಂದೆಯೂ ಇಂತಹ ಸಿನಿಮಾ ನೀಡಲೆಂದು ಆಶಿಸುವೆ.
ಕಥೆಯೇನೂ ಹೊಸದಲ್ಲ.ಅದೇ ಮೇಲ್ವರ್ಗದ ಹುಡುಗಿ ಬಡ ಹುಡುಗ, ಬೇರೆ ಭಾಷೆ, ನಾಡಿನ ಪ್ರೇಮಿಗಳ ಕಥೆ.ಮನೆಯವರ ವಿರೋಧ ಪ್ರೇಮಿಗಳ ಹೋರಾಟ.ಆದರೆ ಆ ಕಥೆಯನ್ನು ನಿರೂಪಿಸಿರುವ ರೀತಿ ಬಹಳ ಚೆನ್ನಾಗಿದೆ.ಆರಂಭದಲ್ಲಿ ಮನೆಯಲ್ಲಿ ಆರಾಮಾಗಿ ಮಲಗಿಕೊಂಡು ಸಿನಿಮಾ ನೋಡುತ್ತಿದ್ದ ನಾನು ಅರ್ಧ ಸಿನಿಮಾ ಆದಾಗ ನನಗರಿವಿಲ್ಲದೇ ಎದ್ದು ಕೂತಿದ್ದೆ. ಪ್ರತಿ ಹತ್ತು ನಿಮಿಷಕ್ಕೊಂದು ಟ್ವಿಸ್ಟ್ ಗಳು  ಉಸಿರು ಬಿಗಿ ಹಿಡಿದು ಸಿನಿಮಾ ನೋಡುವಂತೆ ಮಾಡಿದವು.ಕೊನೆಯ ಶಾಟ್ ನಲ್ಲೂ ಏನೋ ಟ್ವಿಸ್ಟ್ ಇದೆ ಅಂತ ಊಹೆ ಮಾಡುವಾಗಲೇ ಟೈಟಲ್ ಕಾರ್ಡ್ ಬಂತು.ಅಂದರೆ ಪಾರ್ಟ್ ಟೂ   ಬರಬಹುದು ಎಂದು ನನ್ನ ನಿರೀಕ್ಷೆ.


ಮೊದಲ ಸಿನಿಮಾಗಿಂತ ಈ ಸಿನಿಮಾದಲ್ಲಿ ಡಿ ಗ್ಲಾಮ್ ಪಾತ್ರದಲ್ಲಿ ರಾಣಾ ನಟನೆಯಲ್ಲಿ ಪಳಗಿದ್ದಾರೆ. ಕಷ್ಟ ಕಾಲದಲ್ಲಿ ಪ್ರೇಮಿಯ ಸೇರುವ ಅವರ ಕಾತುರದ ಅಭಿನಯ ನೋಡಿದ ನೋಡುಗರು ಜಗ್ಗಪ್ಪ, ಮತ್ತು ಕಿಶೋರ್ ಅವರನ್ನು ಬೈಯ್ದುಕೊಳ್ಳುವ ರೇಂಜ್ ಗೆ ಅಭಿನಯ ಮಾಡಿದ್ದಾರೆ. ಎಂದಿನಂತೆ ಕಿಶೋರ್ ತಮ್ಮ ಅಭಿನಯದ ಮೂಲಕ ನೆಗೆಟಿವ್ ಶೇಡ್ ನ ಪೋಲಿಸ್ ಅಧಿಕಾರಿಯಾಗಿ ಗಮನ ಸೆಳೆಯುತ್ತಾರೆ. ಅನುಭವಸ್ಥ ಹೆಡ್ ಕಾನ್ಸ್‌ಟೇಬಲ್ ಆಗಿ ನಾಗಾಭರಣ ಪ್ರೇಕ್ಷಕರ ಮನ ಗೆಲ್ಲುತ್ತಾರೆ. ತೆಲುಗಿನ ಜಗಪತಿ ಬಾಬು ಕೆಲವೇ ದೃಶ್ಯಗಳಲ್ಲಿ ಬಂದರೂ ಅವರ ಅಭಿನಯ ಸೂಪರ್. ಚಿತ್ರದ ನಡುವೆ ಕಾಡುಗಳ್ಳ ವೀರಪ್ಪನ್ ಹತನಾಗುವ ದೃಶ್ಯಗಳನ್ನು ಬ್ಲೆಂಡ್ ಮಾಡಿರುವುದು ವರ್ಕ್ ಔಟ್ ಆಗಿದೆ.  ಸಿನಿಮಾದ ಗೆಲುವಿನಲ್ಲಿ ಛಾಯಾಗ್ರಾಹಕ ಅದ್ವೈತ ಗುರು ಮೂರ್ತಿ ಕೊಡುಗೆ ಮರೆಯಲಾಗದು.ಡಿ ಇಮ್ಮಾನ್ ರವರ ಹಾಡುಗಳು ಸಂದರ್ಭಕ್ಕೆ ತಕ್ಕಂತೆ ಹೊಂದಿಕೆಯಾಗಿವೆ.ಹಿನ್ನೆಲೆಯಲ್ಲಿ ಅವರು ನೀಡಿದ ಸಂಗೀತ ಚಿತ್ರದ ಮತ್ತೊಂದು ಪ್ಲಸ್ ಪಾಯಿಂಟ್.
ಒಟ್ಟಾರೆ ಕುಟುಂಬ ಸಮೇತ ನೋಡಬಹುದಾದ ಚಿತ್ರ ಏಳುಮಲೆ.ನೀವು ನನ್ನ ಹಾಗೆ ಥಿಯೇಟರ್ ನಲ್ಲಿ ಚಿತ್ರ ಮಿಸ್ ಮಾಡಿಕೊಂಡಿದ್ದರೆ.ಜೀ5ನಲ್ಲಿ ನೋಡಿ..

ಸಿಹಿಜೀವಿ ವೆಂಕಟೇಶ್ವರ.
ತುಮಕೂರು