This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
31 ಡಿಸೆಂಬರ್ 2019
ಕ್ರಾಂತಿ ಶಾಂತಿಯಾಗಬೇಕಿದೆ (ಕವನ)
ಅರಸನ ಬದಲಿಗೆ ಬಂದ
ರಾಜಕಾರಣಿಗಳು ಸ್ವಹಿತ
ಅರಸುವುದನ್ನು ತಪ್ಪಿಸಲು
ಜನತಾ ಸೇವೆಯೇ ಜನಾರ್ದನ
ಸೇವೆಯೆಂದು ಕಾಯಕ ಮಾಡಲು
ರಾಜಕೀಯ ಕ್ರಾಂತಿಯಾಗಬೇಕಿದೆ.
ಅಂಕಗಳೇ ಜೀವನವೆಂದು
ಅಂಕೆಯಿಲ್ಲದೆ ಬೆಳೆದು
ಸಂಸ್ಕಾರ ತಿಳಿಯದೆ
ಸಂಕಟಪಡುವ ಸಂಭಂಧಗಳ
ಗಾಳಿಗೆ ತೂರುವವರಿಗೆ
ಬುದ್ದಿ ನೀಡುವ
ಶಿಕ್ಷಣ ಕ್ರಾಂತಿಯಾಗಬೇಕಿದೆ.
ಗುಡಿ ಕೈಗಾರಿಕೆಗಳು
ನಾಶವಾಗಿ ಯಂತ್ರಗಳ
ಗುಲಾಮರಾಗಿ ನಿರುದ್ಯೋಗ
ತಾಂಡವವಾಡುವ ದೃಶ್ಯಗಳನ್ನು
ತೊಲಗಿಸಿ ಪ್ರತಿ ಗೃಹದಲೂ
ಉತ್ಪಾದನೆ ಮಾಡುವ
ಕೈಗಾರಿಕಾ ಕ್ರಾಂತಿಯಾಗಬೇಕಿದೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ
ಇವುಗಳಿಂದ ಬೇಸತ್ತ ಜನರು
ಭ್ರಮನಿರಸನ ಹೊಂದಿರುವರು
ಪ್ರಜಾಸ್ನೇಹಿ ಆಡಳಿತ ನೀಡಲು
ಆಡಳಿತದಲ್ಲಿ ಕ್ರಾಂತಿಯಾಗಬೇಕಿದೆ.
ಹೊಸ ವರ್ಷವೆಂದು ಕರೆವ
ಈ ಕ್ಯಾಲೆಂಡರ್ ವರ್ಷದಲ್ಲಾದರೂ
ಸಕಲ ರಂಗದಿ ಕ್ರಾಂತಿಯಾಗಬೇಕಿದೆ
ವಿಶ್ವ ನಾಯಕರಿಗೆ ಒಳ್ಳೆಯ ಬುದ್ದಿ
ಬಂದು ಜಗತ್ ಶಾಂತಿಯಾಗಬೇಕಿದೆ.
*ಸಿ ಜಿ ವೆಂಕಟೇಶ್ವರ*
ತುಮಕೂರು
ಸಂತಸದ ಸುದ್ದಿ (ಲೇಖನ)
ಸಂತಸದ ಸುದ್ದಿ(ಲೇಖನ)
ಭಾರತೀಯ ಅರಣ್ಯ ಸ್ಥಿತಿಗತಿ ವರದಿ 2019 ರ ಪ್ರಕಾರ ಕರ್ನಾಟಕದ ಅರಣ್ಯ1025 ಚದರ ಕಿಲೋಮೀಟರ್ ಹೆಚ್ಚಳ ಆಗಿರುವುದು ದಾಖಲಾಗಿದೆ. ಇದು ದೇಶದಲ್ಲೇ ಅತಿ ಹೆಚ್ಚು ದಾಖಲಾದ ಹೆಚ್ಚಳ ಎಂದು ಕರ್ನಾಟಕ ಪ್ರಥಮ ಸ್ಥಾನ ಪಡೆದಿರುವುದು ಕನ್ನಡಿಗರು ಸಂತಸ ಪಡುವ ವಿಷಯವಾಗಿದೆ. ಅರಣ್ಯ ನಾಶದಿಂದ ಪರಿಸರದಲ್ಲಿ ಅಸಮತೋಲನವನ್ನು ಕಾಣುವ ಈ ದಿನಗಳಲ್ಲಿ ಇಂತಹ ಸುದ್ದಿ ಆಶಾದಾಯಕವಾಗಿ ಮುಂದಿನ ದಿನಗಳ ಬಗ್ಗೆ ಉತ್ತಮ ನಿರೀಕ್ಷೆ ಹೊಂದಬಹುದು .ಮದ್ಯ ಕರ್ನಾಟಕದ ತುಮಕೂರುಜಿಲ್ಲೆಯು 305 ಚದರ ಕಿಲೋಮೀಟರ್ ಹೆಚ್ಚಳ ಕಂಡಿರುವುದು ಗಮನಾರ್ಹವಾದ ಸಂಗತಿ ,ಇದೇ ವೇಳೆ ಮಲೆನಾಡಿನ ಶಿವಮೊಗ್ಗದ ಅರಣ್ಯ ಪ್ರದೇಶದಲ್ಲಿ ಇಳಿಕೆ ಕಂಡಿರುವುದು ಆತಂಕದ ವಿಷಯವಾಗಿದೆ. ಇದೇ ರೀತಿ ರಾಜ್ಯದ ಮತ್ತು ದೇಶದ ಅರಣ್ಯ ಪ್ರದೇಶ ನಿಗದಿತ ಶೇಕಡಾ33 ಕ್ಕಿಂತ ಹೆಚ್ಚಾಗಿ ಪರಿಸರ ಸಮತೋಲನ ಉಂಟಾಗಲು ನಾವೆಲ್ಲರೂ ಕೈ ಜೋಡಿಸಬೇಕಿದೆ.
*ಸಿ ಜಿ ವೆಂಕಟೇಶ್ವರ*
ತುಮಕೂರು
ತುಮಕೂರು
29 ಡಿಸೆಂಬರ್ 2019
*ಮೂರು ಹನಿಗಳು*
*೧*
ಹೆಸರು ಹೇಳಲು, ಕೇಳಲು
ಏನೋ ಒಂಥರಾ ಇಂಪು
ಅವರೇ ನಮ್ಮ ಕುವೆಂಪು
*೨*
ಕನ್ನಡ ಸಾಹಿತ್ಯದ ದೊಡ್ಡಪ್ಪ
ಇನ್ಯಾರು ಅಲ್ಲ ಅವರೇ
ಕೆ ವಿ ಪುಟ್ಟಪ್ಪ
*೩*
ಯಾರೋ ಕೇಳಿದರು
ನಿಮಗೆ ಬರೆಯಲು
ಸ್ಪೂರ್ತಿ ಯಾರು
ನಾಟಕ, ಹನಿಗವನ
ಲೇಖನ, ಕಾವ್ಯ
ಕಥೆ ಕವನಾನ
ಅದಕ್ಕೆ ಉತ್ತರಿಸಿದೆ
ದಿನವೂ ನಾನು
ಎದ್ದ ತಕ್ಷಣ ನೋಡುವೆ
ಕುವೆಂಪು ಪೋಟೋನಾ
*ಸಿ ಜಿ ವೆಂಕಟೇಶ್ವರ*
*ತುಮಕೂರು*
*೧*
ಹೆಸರು ಹೇಳಲು, ಕೇಳಲು
ಏನೋ ಒಂಥರಾ ಇಂಪು
ಅವರೇ ನಮ್ಮ ಕುವೆಂಪು
*೨*
ಕನ್ನಡ ಸಾಹಿತ್ಯದ ದೊಡ್ಡಪ್ಪ
ಇನ್ಯಾರು ಅಲ್ಲ ಅವರೇ
ಕೆ ವಿ ಪುಟ್ಟಪ್ಪ
*೩*
ಯಾರೋ ಕೇಳಿದರು
ನಿಮಗೆ ಬರೆಯಲು
ಸ್ಪೂರ್ತಿ ಯಾರು
ನಾಟಕ, ಹನಿಗವನ
ಲೇಖನ, ಕಾವ್ಯ
ಕಥೆ ಕವನಾನ
ಅದಕ್ಕೆ ಉತ್ತರಿಸಿದೆ
ದಿನವೂ ನಾನು
ಎದ್ದ ತಕ್ಷಣ ನೋಡುವೆ
ಕುವೆಂಪು ಪೋಟೋನಾ
*ಸಿ ಜಿ ವೆಂಕಟೇಶ್ವರ*
*ತುಮಕೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)